ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನ : 2019

ಕಾವ್ಯ ಕುಂಚ ಗಾಯನದಲ್ಲರಳಿದ ವಿಶುಕುಮಾರ್ ವೇದಿಕೆ

ಮಂಗಳೂರು : ವೇದಿಕೆಯ ಮೇಲೆ ಮಾತು ಆರಂಭಿಸುತ್ತಿದ್ದಂತೆ ಸ್ವಲ್ಪ ಸಮಯದ ಕೂಡಲೇ ವಿಶುಕುಮಾರ್ ಬದುಕಿನ ಚಿತ್ರಣ ರೂಪುಗೊಳ್ಳುವಂತಿತ್ತು. ತಮ್ಮ ಕಾವ್ಯದ ಪದಗಳ ಜೋಡಣೆಯೊಡನೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಸಾಹಿತಿಯ ಜೀವನದ ಕಥೆಗೆ ಸಾಕ್ಷಿಯಾಗಿದ್ದರು..ಜೊತೆಗೆ ಮೇಳೈಸುವ ರಾಗಲಾಪದೊಡನೆ ಅಲ್ಲೇ ಬದಿಯಲ್ಲಿ ಶರವೇಗದಿ ಸಾಗುತ್ತಿದ್ದ ಚಿತ್ರ ಪಟಲ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿತ್ತು.

ಹೌದು,,ಇದು 2019 ಫೆಬ್ರವರಿ 17ರಂದು ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆದ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಕಾವ್ಯ ಕುಂಚ ಗಾಯನದಲ್ಲಿ ವಿಶುಕುಮಾರ್ ಎಂಬ ವೇದಿಕೆಯ ಚಿತ್ರಣ..

ವೇದಿಕೆಯಲ್ಲಿ ಸಾಹಿತ್ಯಾಸಕ್ತರ ಸಂಗಮವಾಗಿತ್ತು. ಒಬ್ಬರಾದ ಮೇಲೆ ಮತ್ತೊಬ್ಬರು ಎಂಬಂತೆ ಐದು ಸಾಹಿತಿಗಳು ವಿಶುಕುಮಾರ್ ಕಾವ್ಯ ಚರಿತ್ರೆಗೆ ಸಾಕ್ಷಿಯಾಗಿದ್ದರು.. ವಿಜಯಲಕ್ಷ್ಮಿ ಕಟೀಲ್, ಪ್ರಮೀಳಾ ದೀಪಕ್, ಸುಮತಿ, ಯೋಗೀಶ್ ಕೈರೋಡಿ, ನರೇಶ್ ಕುಮಾರ್ ಸಸಿಹಿತ್ಲು ಇವರೆಲ್ಲರ ಅದ್ಭುತ ನೋಟದಲ್ಲಿ ವಿಶುಕುಮಾರ್ ಬದುಕು – ಬವಣೆಗಳೆಲ್ಲವೂ ಅಕ್ಷರ ರೂಪದಲ್ಲಿ ಬಿಂಬಿತವಾಗಿದ್ದವು.. ಇದಕ್ಕೆ ಸರಿಹೊಂದುವಂತೆ ಶ್ರುತಿ ಬದ್ಧ ನಾದಕ್ಕೆ ದನಿಯಾದವರು ಭಾಸ್ಕರ್ ರಾವ್ ಬಿಸಿರೋಡ್.. ನಾದ ಕಂಠ ಸಿರಿಗೆ ನೆರೆದಿದ್ದ ಜನಸ್ತೋಮ ತೂಗುತ್ತಿತ್ತು. ಅತೀವ ಆಸಕ್ತಿಯಿಂದ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದ ಸಾಹಿತ್ಯಾಭಿಮಾನಿಗಳ ದಂಡೇ ಇತ್ತು.. ಅಲ್ಲೇ ಪಕ್ಕದಲ್ಲಿ ಹಲವು ಬಣ್ಣಗಳನ್ನು ಹಿಡಿದುಕೊಂಡು, ಬೇಗ ಬೇಗನೆ ವರ್ಣಗಳಲ್ಲೇ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ.. ತನ್ನ ಕೈಚಳಕದಿಂದ ವಿಶುಕುಮಾರ್ ವ್ಯಕ್ತಿತ್ವವನ್ನು ವೇದಿಕೆ ಮೇಲೆ ತಂದಿಟ್ಟಿದ್ದರು.. ನೋಡುಗರೆಲ್ಲರೂ ಮೂಕವಿಸ್ಮಿತರಾಗಿದ್ದರು. ಈ ಕುಂಚಕ್ಕೆ ಕಾರಣರಾಗಿದ್ದು ಯುವ ಕಲಾವಿದ ದೀಪೇಶ್ ರಾಜ್..

ಹೀಗೆ ವೇದಿಕೆ ಮೇಲಿನ ಎಲ್ಲಾ ಕಲಾವಿದರು – ಸಾಹಿತ್ಯಾಸಕ್ತರು ಅಭೂತಪೂರ್ವ ಕ್ಷಣವೊಂದಕ್ಕೆ ಸಾಕ್ಷಿಯಾಗಿದ್ದರು. ಈ ಕಾರ್ಯಕ್ರಮವನ್ನು ಪ್ರಜ್ಞಾ ಬಿ ಓಡಿಲ್ನಾಳ ನಿರೂಪಿಸಿದರು..

ವರದಿ : ಪ್ರಜ್ಞಾ ಬಿ ಓಡಿಲ್ನಾಳ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!