ಯುವವಾಹಿನಿ (ರಿ.) ಬೆಂಗಳೂರು ಘಟಕದ ಆಶ್ರಯದಲ್ಲಿ

ಯುವವಾಹಿನಿ ಸೇವಾ ಸಂಜೀವಿನಿ ಲೋಕಾರ್ಪಣೆ

ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಆಶ್ರಯದಲ್ಲಿ ದಿನಾಂಕ 03-03-2019 ಆದಿತ್ಯವಾರ ಗಾಯತ್ರಿ ಮಿನಿ ಹಾಲ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಅತ್ಯಮೂಲ್ಯವಾದ ಯೋಜನೆ ಯುವವಾಹಿನಿ ಸೇವಾ ಸಂಜೀವಿನಿ ಯ ಲೋಕಾರ್ಪಣೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ಅವರು ವಹಿಸಿದ್ದರು.
ಪ್ರೀತಿ ಎಂಬ ಎಣ್ಣೆಯನ್ನು ಸುರಿದು,ನಂಬಿಕೆ ಎನ್ನುವ ಬತ್ತಿಯನ್ನು ಇಟ್ಟು,ಆತ್ಮವಿಶ್ವಾಸ ಎನ್ನುವ ದೀಪದಡಿಯಲ್ಲಿ ಅಶಕ್ತರ ಪಾಲಿಗೆ ಬೆಳಕಾಗಾಗಬೇಕೆಂಬ ಅಭಿಲಾಷೆಯೊಂದಿಗೆ, ಯುವವಾಹಿನಿ ಸೇವಾ ಸಂಜೀವಿನಿ’ ಯುವವಾಹಿನಿ ಬೆಂಗಳೂರು ಘಟಕದ ಬಹುದಿನಗಳ ಕನಸಿನ ಯೋಜನೆಯನ್ನು ಬೆಂಗಳೂರು ಘಟಕದ ಸಲಹೆಗಾರರು ಹಾಗೂ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಯಶವಂತ್ ಪೂಜಾರಿ ಲೋಕಾರ್ಪಣೆ ಗೊಳಿಸಿದರು.ಇದೇ ಸಂದರ್ಭದಲ್ಲಿ ಯೋಜನೆಯ ಮೊದಲ ಕಂತಿನ ಚೆಕ್ ಅನ್ನು ಸಂಬಂಧಪಟ್ಟ ಕುಟುಂಬಕ್ಕೆ ವಿತರಿಸಲಾಯಿತು. ಯಶವಂತ್ ಪೂಜಾರಿ ಅವರು ಬೆಂಗಳೂರು ಘಟಕದ ಕಳೆದ 6 ತಿಂಗಳಿಂದ ನಡೆದು ಬಂದ ಹಾದಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು, ಹಾಗೂ ಉತ್ತಮ ಕಾರ್ಯಕ್ರಮ ನೀಡುವಲ್ಲಿ ಯಶಸ್ವಿಯಾಗಿದ್ದು ಮುಂದೆ ಘಟಕದ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇವೆ ಎಂದು ತಿಳಿಸಿದರು.
ಕೇಂದ್ರ ಸಮಿತಿಯ ಯುವಸಿಂಚನ ಪತ್ರಿಕೆಯ ಸಂಪಾದಕರಾದ ರಾಜೇಶ್ ಸುವರ್ಣಮಾತನಾಡಿ ವಿದ್ಯೆ ಉದ್ಯೋಗ ಸಂಪರ್ಕ ಮೂಲಕ ಬೆಂಗಳೂರು ಘಟಕವು ಅಲ್ಪ ಅವಧಿಯಲ್ಲಿ ಮಹತ್ತರ ಸಾಧನೆ ಮಾಡಿದೆ , ಯುವಕರಿಂದ ಕೂಡಿದ ಬೆಂಗಳೂರು ಘಟಕದ ಸಾಧನೆ ಶ್ಲಾಘನೀಯ ಎಂದರು. ಮಂಗಳೂರು ಘಟಕದ ಉಪಾಧ್ಯಕ್ಷ ರಾದ ಚಂದ್ರಶೇಖರ್ ಕರ್ಕೇರ ಶುಭ ಹಾರೈಕೆ ಮಾಡಿದರು.  ಈ ಸಂದರ್ಭದಲ್ಲಿ ವಿದ್ಯಾನಿದಿಯ ಆರ್ಥಿಕ ಕ್ರೋಡೀಕರಣಕ್ಕಾಗಿ ಮಾಡಿದ ಅದ್ರಷ್ಟ ಚೀಟಿ ಯೋಜನೆಯನ್ನು ಸಂಪಾದಕ ರಾಜೇಶ್ ಸುವರ್ಣ ಬಿಡುಗಡೆ ಗೊಳಿಸಿದರು. ಕಾರ್ಯದರ್ಶಿ ರಾಘವೇಂದ್ರ ಪೂಜಾರಿ ಧನ್ಯವಾದ ನೀಡಿದರು.

One thought on “ಯುವವಾಹಿನಿ ಸೇವಾ ಸಂಜೀವಿನಿ ಲೋಕಾರ್ಪಣೆ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!