ಯುವವಾಹಿನಿ(ರಿ.) ಪಡುಬಿದ್ರಿ ಘಟಕ: 2019-20 ನೇ ಸಾಲಿನ ಪದಗ್ರಹಣ

ಪಡುಬಿದ್ರಿ : ಯುವವಾಹಿನಿ ಸಂಘಟನೆಯು ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ತನ್ನಿಂದಾದ ಸಹಾಯ ನೀಡುತ್ತಿದೆ. ಸಮಾಜದ ಅಭಿವೃದ್ಧಿಗಾಗಿ ನಿಸ್ವಾರ್ಥತೆಯಿಂದ ದುಡಿಯುತ್ತಿರುವ ಯುವಕರ ಭಲಾಡ್ಯ ಸಂಘಟನೆಯೇ ಯುವವಾಹಿನಿ ಎಂದು ಯುವವಾಹಿನಿಯ ಕಾರ್ಯ ಸಾಧನೆಗಳನ್ನು ಅರಿತುಕೊಂಡ ಮುಂಬೈ ಆನಂದ್ ರಾಠಿ ಆಂಡ್ ಗ್ರೂಪ್ ಸಂಸ್ಥೆಯ ಸದಾನಂದ ಪೂಜಾರಿ ಮಾದುಮನೆ ಇವರು ಹರ್ಷ ವ್ಯಕ್ತಪಡಿಸಿದರು. ಇವರು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾ ಭವನದಲ್ಲಿ ದಿನಾಂಕ 24.03.2019  ರಂದು ಜರಗಿದ ಯುವವಾಹಿನಿ(ರಿ.) ಪಡುಬಿದ್ರಿ ಘಟಕದ 2019-20 ನೇ ಸಾಲಿನ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ದಾರಿ ತಪ್ಪುತ್ತಿರುವ ಯುವಕರತ್ತ ಗಮನಹರಿಸಿ, ವಿಮರ್ಶೆಮಾಡಿ ಅವರನ್ನು ಜಾಗೃತಿಗೊಳಿಸಿ ಸರಿದಾರಿಗೆ ತರುವಲ್ಲಿ ಯುವವಾಹಿನಿ ಸಂಘಟನೆಯು ಪ್ರಮುಖ ಪಾತ್ರವಹಿಸಬೇಕು ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ(ರಿ.) ಇದರ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು ಇವರು ಕಳೆದ ಡಿಸೆಂಬರ್ 2018 ರಲ್ಲಿ ನಡೆಸಿದ ರಾಜ್ಯಮಟ್ಟದ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ಪರೀಕ್ಷೆಯಲ್ಲಿ 8ನೇ ಸ್ಥಾನ ಪಡೆದ ನಮ್ಮ ಘಟಕದ ಪ್ರಚಾರ ನಿರ್ದೇಶಕರಾದ ನಿಖಿಲ್ ಪೂಜಾರಿ ಇವರನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಪಾದೆಬೆಟ್ಟು ನಿವಾಸಿ ಶ್ರೀಮತಿ ಅನಿತಾ ಇವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಘಟಕದ ವತಿಯಿಂದ 5,000 ರೂ ಆರ್ಥಿಕ ನೆರವು ನೀಡಲಾಯಿತು.

ಯುವವಾಹಿನಿ ಪಡುಬಿದ್ರಿ ಘಟಕವು ವಿದ್ಯೆಗೆ ಮಹತ್ತರ ಸ್ಥಾನವನ್ನು ನೀಡಿದ್ದು ಮಕ್ಕಳ ಹಬ್ಬ ಎಂಬ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಲು ಉತ್ತಮ ವೇದಿಕೆ ಕಲ್ಪಿಸಿದೆ. 2018-19 ನೇ ಸಾಲಿನ ಅವಧಿಯಲ್ಲಿ 4 ಫಲಾನುಭವಿಗಳನ್ನು ಗುರುತಿಸಿ ಆರ್ಥಿಕ ಸಹಾಯವನ್ನು ನೀಡಿ ಸಮಾಜದಲ್ಲಿ ಯುವವಾಹಿನಿಯ ಹೆಸರನ್ನು ಗುರುತಿಸಿಕೊಂಡಿದ್ದಾರೆ. ಸಮಾಜದ ಯುವಕನ್ನು ಜಾಗೃತಗೊಳಿಸಿ ಮುಖ್ಯವಾಹಿನಿಗೆ ತರುವಲ್ಲಿ ಯುವವಾಹಿನಿಯು ಮುಖ್ಯ ಪಾತ್ರವಹಿಸಬೇಕು ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಜಯಂತ್ ನಡುಬೈಲ್ ಇವರು 2019-20 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಘಟಕದ ಅಧ್ಯಕ್ಷರಾದ ದೀಪಕ್ ಕೆ. ಬೀರ ಇವರು ನಿಯೋಜಿತ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರಿಗೆ ಹಾಗೂ ಕಾರ್ಯದರ್ಶಿ ಶೈಲಜಾ ಇವರು ನಿಯೋಜಿತ ಕಾರ್ಯದರ್ಶಿಯಾದ ಯಶೋದ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಪದಗ್ರಹಣದ ನಂತರ ಪ್ರತಿಜ್ಞಾ ವಿಧಿ ಸ್ವೀಕರಿಸಿದ ನೂತನ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರು ತಮ್ಮ ಅವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಲು ಎಲ್ಲರ ಸಲಹೆ, ಸಹಕಾರವನ್ನು ಯಾಚಿಸಿದರು.

ಯುವವಾಹಿನಿ(ರಿ.) ಪಡುಬಿದ್ರಿ ಘಟಕವು ತನ್ನದೇ ನಿಲುವನ್ನು ಹೊಂದಿದ್ದು ಸಾಕಷ್ಟು ಸಮಾಜಮುಖಿ ಕೆಲಸವನ್ನು ಮಾಡಿ, ವಿದ್ಯೆ, ಸಾಂಸ್ಕೃತಿಕ ಕ್ಷೇತ್ರ ಮಾತ್ರವಲ್ಲದೇ ಕ್ರೀಡಾ ಕ್ಷೇತ್ರದಲ್ಲಿಯೂ ಮಹತ್ತರ ಸಾಧನೆ ಮಾಡಿ ಘಟಕದ ಹೆಸರನ್ನು ಉನ್ನತ ಸ್ಥಾನಕ್ಕೇರಿಸಿದೆ. ಮುಂದಿನ ದಿನಗಳಲ್ಲಿ ಯೋಗೀಶ್ ಪೂಜಾರಿ ನೇತೃತ್ವದ ತಂಡ ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಪಡುಬಿದ್ರಿ ಘಟಕದ ಸಲಹೆಗಾರರಾದ ಶ್ರೀ ತಾರಾನಾಥ್ ಎಚ್. ಬಿ. ಇವರು ಶುಭ ಹಾರೈಸಿದರು.

ಯುವವಾಹಿನಿ(ರಿ.) ಪಡುಬಿದ್ರಿ ಘಟಕಕ್ಕೆ ನೂತನವಾಗಿ ಸೇರ್ಪಡೆಗೊಂಡಿರುವ ಸದಸ್ಯರನ್ನು ಈ ವೇದಿಕೆಯಲ್ಲಿ ಗುರುತಿಸಿ ಅಭಿನಂದಿಸಲಾಯಿತು. ಹಾಗೆಯೇ ಸಾಂತೂರು ಕೊಡಂಗಲ ಗರಡಿ ಭಕ್ತವೃಂದ ಇದರ 14ನೇ ವರ್ಷದ ಮೊಸರು ಕುಡಿಕೆಯ ಪ್ರಯುಕ್ತ ನಡೆದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸ್ಪರ್ಧಿಸಿ ದ್ವಿತೀಯ ಬಹುಮಾನ ಪಡೆದ ನಮ್ಮ ಘಟಕದ ಪುರುಷರ ತಂಡ ಹಾಗೂ ಜೇಸಿಐ ಉದ್ಯಾವರ – ಕುತ್ಪಾಡಿ, ಜೇಸಿ ಸಪ್ತಾಹ- 2018 ಇವರು ಮಹಿಳೆಯರಿಗಾಗಿ ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ಬೆಂಕಿ ಇಲ್ಲದೆ ಅಡುಗೆ ಮಾಡುವ ಸ್ಪರ್ಧೆಯಲ್ಲಿ ಸ್ಪರ್ಧಿಸಿ ದ್ವಿತೀಯ ಬಹುಮಾನವನ್ನು ಪಡೆದ ನಮ್ಮ ಘಟಕದ 5 ಜನ ಮಹಿಳಾ ಸದಸ್ಯರ ತಂಡವನ್ನು ಈ ಸಂಧರ್ಭದಲ್ಲಿ ಗುರುತಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ದೀಪಕ್ ಕೆ. ಬೀರ ಇವರು ಕಳೆದ ಒಂದು ವರ್ಷದ ಅಧ್ಯಕ್ಷೀಯ ಅವಧಿಯಲ್ಲಿ ಘಟಕದ ಎಲ್ಲಾ ಕೆಲಸ ಕಾರ್ಯಗಳಿಗೆ ಸಲಹೆ ಸಹಕಾರ ನೀಡಿದ ಸರ್ವ ಸದಸ್ಯರಿಗೆ ವಂದಿಸಿ ಮುಂದೆಯೂ ತನ್ನಿಂದಾದ ಸಹಕಾರವನ್ನು ನೀಡುತ್ತೇನೆ ಎಂಬ ಭರವಸೆ ನೀಡಿದರು.

2018-19 ನೇ ಸಾಲಿನ ಅವಧಿಯಲ್ಲಿ ಉತ್ತಮ ಸಮಾಜಮುಖಿ ಕಾರ್ಯಯೋಜನೆಗಳನ್ನು ಹಮ್ಮಿಕೊಂಡು ಪಡುಬಿದ್ರಿ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದ ದೀಪಕ್ ಕೆ. ಬೀರ ಇವರನ್ನು ಪಡುಬಿದ್ರಿ ಘಟಕದ ಸರ್ವಸದಸ್ಯರ ಪರವಾಗಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಘಟಕದ ಮಾಜಿ ಅಧ್ಯಕ್ಷರಾದ ಸುಜಿತ್ ಕುಮಾರ್ ಇವರು ಕಾರ್ಯಕ್ರಮಕ್ಕೆ ಆಗಮಿಸಿದ ವಿವಿಧ ಘಟಕಗಳ ಪದಾಧಿಕಾರಿಗಳನ್ನು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಗುರುತಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದು 2019-20 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಘಟಕದ ಅಧ್ಯಕ್ಷರಾದ ದೀಪಕ್ ಕೆ. ಬೀರ ಇವರು ಎಲ್ಲರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಅಶೋಕ್ ಪೂಜಾರಿ ಪಾದೆಬೆಟ್ಟು ಇವರು ಪ್ರಸ್ತಾವಿಸಿದರು. ಕಾರ್ಯದರ್ಶಿ ಶೈಲಜಾ 2018-19ನೇ ಸಾಲಿನ ವಾರ್ಷಿಕ ವರದಿ ವಾಚಿಸಿದರು. ನಿಯೋಜಿತ ಕಾರ್ಯದರ್ಶಿ ಯಶೋಧ ಧನ್ಯವಾದ ಸಮರ್ಪಿಸಿದರು. ಮಾಜಿ ಅಧ್ಯಕ್ಷರುಗಳಾದ ಸುರೇಶ್ ಪೂಜಾರಿ ಹಾಗೂ ರವಿರಾಜ್ ಯನ್. ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

One thought on “ಯುವವಾಹಿನಿ(ರಿ.) ಪಡುಬಿದ್ರಿ ಘಟಕ: 2019-20 ನೇ ಸಾಲಿನ ಪದಗ್ರಹಣ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!