Yuvavahini

JAN 22, 2017 12.22 PM IST

ಯುವವಾಹಿನಿ(ರಿ) ಸುರತ್ಕಲ್ ಘಟಕ

ಸುರತ್ಕಲ್ ಘಟಕದ ಪದಗ್ರಹಣ ಸಾರಥ್ಯ-2017

ದಿನಾಂಕ 22-01-2017 ರಂದು ಯುವವಾಹಿನಿ ಸುರತ್ಕಲ್ ಘಟಕದ ಪದಗ್ರಹಣ ಸಾರಥ್ಯ-2017 ಕಾರ್ಯಕ್ರಮವು ಸುರತ್ಕಲ್‌ನ ಲಯನ್ಸ್‌ಕ್ಲಬ್ ಸಭಾಭವನದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಪ್ರಧಾನ ಕಾರ್ಯದರ್ಶಿ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಬಿ. ತಮ್ಮಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಎಸ್.ಎಸ್. ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಪ್ರತಿಭಾ ಕುಳಾಯಿ ಮತ್ತು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ಭಾಸ್ಕರ ಸಾಲ್ಯಾನ್ ಅಗರಮೇಲು, ಕಾರ್ಯದರ್ಶಿ ವಿವೇಕ್ ಬಿ. ಕೋಟ್ಯಾನ್ ಮತ್ತು ಕಾರ್ಯಕ್ರಮದ ಸಂಚಾಲಕ ಸತೀಶ್ ಕೋಟ್ಯಾನ್‌ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ವಿಠೋಭ ರುಕ್ಮಾಯಿ ಇಡ್ಯಾ ಮತ್ತು ಶ್ರೀ ನಾರಾಯಣಗುರು ಮಂದಿರದ ಮೂರು ಅರ್ಚಕರುಗಳಾದ ಶ್ರೀ ಗಂಗಾಧರ ಶಾಂತಿ, ಶ್ರೀ ದಯಾನಂದ ಶಾಂತಿ ಮತ್ತು ಶ್ರೀ ಹೇಮನಾಥ ಶಾಂತಿ ಇವರುಗಳ ಗುರುತಿಸಿ ಗೌರವಿಸಲಾಯಿತು. ಸಮಾಜದ ಯುವ ಪ್ರತಿಭೆ, ಅಂತರಾಷ್ಟ್ರೀಯ ಕರಾಟೆ ಪಟು ಪ್ರತಿಕ್ ಪೂಜಾರಿಯವರನ್ನು ಅಭಿನಂದಿಸಲಾಯಿತು.

ಯುವವಾಹಿನಿ ಸುರತ್ಕಲ್ ಘಟಕದ ಮುಖವಾಣಿ ಚಿಲುಮೆ ಪತ್ರಿಕೆಯನ್ನು ಎಸ್.ಎಸ್. ಪೂಜಾರಿಯವರು ಬಿಡುಗಡೆಗೊಳಿಸಿದರು. ಸಂಪಾದಕರಾದ ಶ್ರೀ ಕೃಷ್ಣ ಪಿ. ಅಂಚನ್‌ರವರು ಈ ಕಾರ್ಯಕ್ರಮ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ತಾ. 11-12-2016 ರಂದು ನಡೆದ ಕ್ರೀಡೋತ್ಸವದ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ಚುನಾವಣಾಧಿಕಾರಿ ಕೃಷ್ಣ ಪಿ. ಅಂಚನ್‌ರವರು ನೂತನ ಪದಾಧಿಕಾರಿಗಳನ್ನು ಸಭೆಗೆ ಪರಿಚಯಿಸಿದರು. ಅಧ್ಯಕ್ಷರಾಗಿ ರವೀಂದ್ರ ಎಸ್. ಕೋಟ್ಯಾನ್, ಕಾರ್ಯದರ್ಶಿ ರಿತೇಶ್ ಕೆ. ಕೃಷ್ಣಾಪುರ, ಉಪಾಧ್ಯಕ್ಷ ಅಶೋಕ್ ಕುಳಾಯಿ, ಜೊತೆ ಕಾರ್ಯದರ್ಶಿ ಕಿಶೋರ್ ಕುಮಾರ್, ಕೋಶಾಧಿಕಾರಿ ಪ್ರಶಾಂತ್ ಇಡ್ಯಾ, ಸಂಘಟನಾ ಕಾರ್ಯದರ್ಶಿ ದೀಪೇಶ್ ರಾಜ್ ಮತ್ತು ವಿವಿಧ ನಿರ್ದೇಶಕರುಗಳಲ್ಲಿ ವ್ಯಕ್ತಿತ್ವ ವಿಕಸನ-ರವೀಂದ್ರ ಕಾನ, ಕ್ರೀಡೆ, ಆರೋಗ್ಯ ಸಮಾಜ ಸೇವೆ-ಶ್ರೀನಿವಾಸ ಸುವರ್ಣ, ಸಾಹಿತ್ಯ ಮತ್ತು ಸಂಸ್ಕೃತಿ-ಚರಣ್ ಸನಿಲ್, ಉದ್ಯೋಗ ಮತ್ತು ಭವಿಷ್ಯ ನಿಧಿ – ಜೀವನ್ ಕೋಟ್ಯಾನ್, ಕುಟುಂಬ ಸಂಪರ್ಕ – ಸೌಪರ್ಣ, ನಾರಾಯಣ ಗುರು ತತ್ವಾದರ್ಶ ಪ್ರಚಾರ – ವಿವೇಕ್ ಬಿ. ಕೋಟ್ಯಾನ್, ವಿದ್ಯಾರ್ಥಿ ಸಂಘಟನೆ – ಅಶೋಕ್, ವಿದ್ಯಾನಿಧಿ – ರಾಜೇಶ್ ಎಲ್. ಶೆಟ್ಟಿ ಮೊದಲಾದವರು ನೂತನ ಕಾರ್ಯಕಾರಿ ಸಮಿತಿಗೆ ಆಯ್ಕೆಗೊಂಡರು.

ನೂತನ ಪದಾಧಿಕಾರಿಗಳಿಗೆ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.

ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿ, ವಿವಿಧ ಘಟಕಗಳ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಘಟಕದ ಅಧ್ಯಕ್ಷ ಭಾಸ್ಕರ್ ಸಾಲ್ಯಾನ್ ಅಗರಮೇಲು ಸ್ವಾಗತಿಸಿದರು. ವಿಜಯ ಎಸ್. ಕುಕ್ಯಾನ್‌ರವರು ಪ್ರಸ್ತಾವನೆಗೈದರು. ಕಾರ್‍ಯದರ್ಶಿ ವರದಿ ವಾಚಿಸಿದರು. ಕು| ಜಿ.ಡಿ. ಹರ್ಷಿತ ಪ್ರಾರ್ಥಿಸಿದರು. ಕಾರ್ಯಕ್ರಮದ ಸಂಚಾಲಕ ಸತೀಶ್ ಕೋಟ್ಯಾನ್‌ರವರು ವಂದಿಸಿದರು. ಸೌಪರ್ಣರವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!