ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಪದಗ್ರಹಣ

ಹಳೆಯಂಗಡಿ : ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 07-04-2019 ರಂದು ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿಯ ಸಭಾಗ್ರಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ನಾನಿಲ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಹಳೆಯಂಗಡಿಯ ಘಟಕದ ಅಧ್ಯಕ್ಷರಾದ ಹೇಮನಾಥ ಕರ್ಕೇರಾರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಳ್ವಾಸ್ ಪದವಿ ಕಾಲೇಜಿನ ಉಪನ್ಯಾಸಕಿ ಕುಮಾರಿ.ಪ್ರಮೋದ, ಘಟಕದ ಸಲಹೆಗಾರರಾದ ರಾಜೀವ ಪೂಜಾರಿ ಹಾಗೂ ಬಿಲ್ಲವ ಸಂಘದ ಗೌರವಾಧ್ಯಕ್ಷರಾದ ಗಣೇಶ್. ಜಿ ಬಂಗೇರರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಚಂದ್ರಶೇಖರ್ ನಾನಿಲ್ ಇವರನ್ನು ಹಾಗೂ ಜಿಲ್ಲಾ ಯುವ ಪ್ರಶಸ್ತಿಯನ್ನು ಪಡೆದು ಕೊಂಡಿರುವ ನಮ್ಮ ಘಟಕದ ಸದಸ್ಯೆಯಾದ
ಕುಮಾರಿ ದಿವ್ಯಶ್ರೀ ಕೋಟ್ಯಾನ್ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷರಾದ ಬ್ರಿಜೇಶ್ ಕುಮಾರ್ ನೆರವೇರಿಸಿದರು.

ಜೊತೆ ಕಾರ್ಯದರ್ಶಿಯಾದ ಹರೀಶ್ ಅಮೀನ್ ರವರು 2018-19ನೇ ಸಾಲಿನ ವರದಿ ವಾಚಿಸಿದರು.ಚುನಾವಣಾ ಅಧಿಕಾರಿಯಾದ ಶರತ್ ಕುಮಾರ್ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಸಭೆಗೆ ಪರಿಚಯಿಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಹಾಗೂ ನಮ್ಮ ಘಟಕದ ಸಲಹೆಗಾರರಾದ ರಾಜೀವ ಪೂಜಾರಿರವರು 2019-20 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಅರುಣ್ ಕುಮಾರ್ ರವರು ಸಭೆಯನ್ನು ಉದ್ದೇಶಿಸಿ ತನ್ನ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ತಿಳಿಸಿದರು. ನಿರ್ಗಮನ ಅಧ್ಯಕ್ಷರಾದ ಹೇಮನಾಥ ಕರ್ಕೇರಾರವರು ತನ್ನ ಅಧಿಕಾರ ಅವಧಿಯಲ್ಲಿ ಸಹಕರಿಸಿದ ಎಲ್ಲ ಸದಸ್ಯರಿಗೂ ಹಾಗೂ ಆಗಮಿಸಿದ ಇತರ ಘಟಕದವರಿಗೂ ಕೃತಜ್ಞತೆ ಸಲ್ಲಿಸಿ ಆಗಮಿಸಿದ ಅಥಿತಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ಭಾಸ್ಕರ್ ಸಾಲ್ಯಾನ್ ಪ್ರಸ್ತಾವನೆ ಗೈದರು. ರಮೇಶ್ ಬಂಗೇರ ಸ್ವಾಗತಿಸಿದರು. ಗುರುಪ್ರಸಾದ್ ರವರು ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ರಾಜೇಶ್ವರಿ ರಾಮನಗರ ವಂದನಾರ್ಪಣೆ ಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!