ಯುವವಾಹಿನಿ(ರಿ.) ಅಡ್ವೆ ಘಟಕದ ಪದಗ್ರಹಣ

ಅಡ್ವೆ: ಯುವವಾಹಿನಿ ಸಂಘಟನೆಯು ಊರಿನಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಳೆದ 5 ವರ್ಷಗಳಿಂದ ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ಕೈಲಾದ ಸಹಾಯ ನೀಡುತ್ತಿದೆ. ಇನ್ನು ಮುಂದೆಯೂ ನಿಂತ ನೀರಾಗದೆ ಮುಂದೆ ಸಾಗುತ್ತಿರಲಿ, ಇದಕ್ಕೆ ನಮ್ಮ ಹಿರಿಯರ ಸಲಹೆ ಸಹಕಾರ ಹಾಗೂ ಆಶೀರ್ವಾದ ಸದಾ ಇದೆ ಎಂದು ಅಡ್ವೆ ಗರಡಿಮನೆ ರಾಮ ಪೂಜಾರಿಯವರು ನುಡಿದರು. ಇವರು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜರಗಿದ ಯುವವಾಹಿನಿ(ರಿ.) ಅಡ್ವೆ ಘಟಕದ 2019ನೇ ಸಾಲಿನ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಬಿಲ್ಲವ ಸಮಾಜದ ಏಳಿಗೆಗಾಗಿ ಯುವವಾಹಿನಿಯ ಸದಸ್ಯರು ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯ ಅತಿಥಿಯಾಗಿದ್ದ ಪತ್ರಕರ್ತ, ರಂಗಕರ್ಮಿ ನರೇಂದ್ರ ಕೆರೆಕಾಡು ರವರು ನುಡಿದರು. ಈ ಸಂದರ್ಭದಲ್ಲಿ ಅಡ್ವೆಯ ಮಣ್ಣಿನಲ್ಲಿ ಜನಿಸಿದ 2 ಬಿಲ್ಲವ ರತ್ನಗಳಾದ ಜಯ ಸಿ ಸುವರ್ಣ ಹಾಗೂ ಅಡ್ವೆ ರವೀಂದ್ರ ಪೂಜಾರಿಯವರ ಸೇವೆಯನ್ನು ನೆನೆಸಿಕೊಂಡರು.

ಈ ಸಂದರ್ಭದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ-ಡೆನ್ನಾನ” ದಲ್ಲಿ ನಟನೆಯಲ್ಲಿ ವೈಯಕ್ತಿಕ ವಿಭಾಗದಲ್ಲಿ ಬಹುಮಾನ ಗಳಿಸಿದ ನಮ್ಮ ಘಟಕದ ಸದಸ್ಯೆ ಉಷಾ ಅವರನ್ನು ಅಭಿನಂದಿಸಲಾಯಿತು. ಅಲ್ಲದೆ ವೇಟ್ ಲಿಫ್ಟಿಂಗ್ ನಲ್ಲಿ ಅದ್ವಿತೀಯ ಸಾಧನೆಗೈದ ನಮ್ಮ ಘಟಕದ ಸದಸ್ಯೆ ಉಮಾಶ್ರೀ ಹಾಗೂ ಹಾಕಿ ಪಂದ್ಯಾಟದಲ್ಲಿ ಸಾಧನೆಗೈದ ಸುರಕ್ಷಾ ಇವರುಗಳನ್ನು ಸನ್ಮಾನಿಸಲಾಯಿತು.

ಕಳೆದ 32 ವರ್ಷಗಳಿಂದ ಯುವವಾಹಿನಿ ಸಂಸ್ಥೆಯು ಉತ್ತಮ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದು, ಉತ್ತಮ ನಾಯಕರುಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದಿರುತ್ತದೆ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷ ಹಾಗೂ ಅಡ್ವೆ ಘಟಕದ ಗೌರವ ಸಲಹೆಗಾರರಾದ ವಿಜಯ್ ಕುಮಾರ್ ಕುಬೆವೂರು ಇವರು 2019-20 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಘಟಕದ ಅಧ್ಯಕ್ಷರಾದ ಜಿತೇಶ್ ಜೆ. ಕರ್ಕೇರ ಇವರು ನಿಯೋಜಿತ ಅಧ್ಯಕ್ಷರಾದ ಶ್ರೀಧರ್ ಟಿ. ಪೂಜಾರಿ ಇವರಿಗೆ ಹಾಗೂ ಕಾರ್ಯದರ್ಶಿ ಪ್ರಸನ್ನ ಕುಮಾರ್ ಇವರು ನಿಯೋಜಿತ ಕಾರ್ಯದರ್ಶಿಯಾದ ಶರತ್ ಕುಮಾರ್ ಇವರಿಗೆ ಅಧಿಕಾರ ಹಸ್ತಾಂತರಿಸಿದರು.

ಪದಗ್ರಹಣದ ನಂತರ ಪ್ರತಿಜ್ಞಾ ವಿಧಿ ಸ್ವೀಕರಿಸಿದ ನೂತನ ಅಧ್ಯಕ್ಷರಾದ ಶ್ರೀಧರ್ ಟಿ.ಪೂಜಾರಿ ಇವರು ತಮ್ಮ ಅವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಲು ಎಲ್ಲರ ಸಲಹೆ, ಸಹಕಾರವನ್ನು ಯಾಚಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜಿತೇಶ್ ಜೆ. ಕರ್ಕೇರ ಇವರು ಕಳೆದ ಒಂದು ವರ್ಷದ ಅಧ್ಯಕ್ಷೀಯ ಅವಧಿಯಲ್ಲಿ ಘಟಕದ ಎಲ್ಲಾ ಕೆಲಸ ಕಾರ್ಯಗಳಿಗೆ ಸಲಹೆ ಸಹಕಾರ ನೀಡಿದ ಸರ್ವ ಸದಸ್ಯರಿಗೆ ವಂದಿಸಿ ಮುಂದೆಯೂ ತನ್ನಿಂದಾದ ಸಹಕಾರವನ್ನು ನೀಡುತ್ತೇನೆ ಎಂಬ ಭರವಸೆ ನೀಡಿದರು.

2018-19 ನೇ ಸಾಲಿನ ಅವಧಿಯಲ್ಲಿ ಉತ್ತಮ ಸಮಾಜಮುಖಿ ಕಾರ್ಯಯೋಜನೆಗಳನ್ನು ಹಮ್ಮಿಕೊಂಡು ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದ ಜಿತೇಶ್ ಜೆ. ಕರ್ಕೇರ ದಂಪತಿಗಳನ್ನು ಘಟಕದ ಸರ್ವಸದಸ್ಯರ ಪರವಾಗಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದು 2019-20 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಘಟಕದ ಅಧ್ಯಕ್ಷರಾದ ಜಿತೇಶ್ ಜೆ. ಕರ್ಕೇರ ಇವರು ಎಲ್ಲರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಅಡ್ವೆ ಗರಡಿಮನೆ ಪ್ರಸ್ತಾವಿಸಿದರು. ಕಾರ್ಯದರ್ಶಿ ಪ್ರಸನ್ನ ಕುಮಾರ್ 2018-19ನೇ ಸಾಲಿನ ವಾರ್ಷಿಕ ವರದಿ ವಾಚಿಸಿದರು. ನಿಯೋಜಿತ ಕಾರ್ಯದರ್ಶಿ ಶರತ್ ಕುಮಾರ್ ಧನ್ಯವಾದ ಸಮರ್ಪಿಸಿದರು. ಸೌಮ್ಯನಿತೇಶ್ ಹಾಗೂ ಶರತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!