Yuvavahini

APR 14, 2019 1.33 PM IST

ಬಜಪೆ ಘಟಕದ ಅಶ್ರಯದಲ್ಲಿ ಬಿಸುಪರ್ಬ – 2019

ಬಜಪೆ : ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ ಕರಂಬಾರು ಹಾಗೂ ಯುವವಾಹಿನಿ (ರಿ) ಬಜಪೆ ಘಟಕದ ಅಶ್ರಯದಲ್ಲಿ ಬಿಸುಪರ್ಬ – 2019 , ಕಾರ್ಯಕ್ರಮವನ್ನು ದಿನಾಂಕ 14.04.2019 ರಂದು ನಾರಾಯಣ ಗುರು ಬಿಲ್ಲವ ಸಂಘ ಬಜಪೆ ಇಲ್ಲಿ ಅಚರಿಸಲಾಯಿತು .
ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೂಜೆಯಿಂದ ಪ್ರಾರಂಭವಾದ ಕಾರ್ಯಕ್ರಮವು ,ಮಂದಿರದಿಂದ ಕಣಿ ವಸ್ತುಗಳ ಮೆರವಣಿಗೆಯೊಂದಿಗೆ ಸಭಾಭವನಕ್ಕೆ ಸಾಗಿ ಸಭಾ ಕಾರ್ಯಕ್ರಮವನ್ನ ಮಂಗಳೂರು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಪದ್ಮನಾಭ ಬಿ .ಅಡ್ಕಬಾರೆ , ಬಜಪೆ ಇವರು ತುಳಸಿ ಕಟ್ಟೆಗೆ ದೀಪ ಹಚ್ಚುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಹಬ್ಬ ಹರಿದಿನಗಳ ಮಹತ್ವವನ್ನು ಅರಿತುಕೊಂಡು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ದಾಟಿಸುವ ಪ್ರಯತ್ನ ಯುವವಾಹಿನಿ ಬಜಪೆ ಘಟಕ ಮಾಡುವುದು ಶ್ಲಾಘನೀಯ ಎಂದು ಹೇಳಿದರು .
ವಿಶೇಷ ಉಪನ್ಯಾಸಕರಾಗಿ ಬಂದಿರುವ ಕೆ .ಕೆ .ಪೇಜಾವರ ಇವರು ಬಿಸು ಹಬ್ಬದ ಮಹತ್ತ್ವವನ್ನು ಅರ್ಥಪೂರ್ಣವಾಗಿ ತಿಳಿಸಿದರು .ಅತಿಥಿಗಳಾಗಿ ವಿಜಯಕುಮಾರ್ ಮಾಲಕರು ಸಿಟಿ ಕ್ಯಾಟರರ್ಸ್ ಸುರತ್ಕಲ್, ನಿವಿತ್ ರಾಜ್ ಯೆಯ್ಯಾಡಿ, ಬಜಪೆ ಘಟಕದ ಸಲಹೆಗಾರರಾದ ಪರಮೇಶ್ವರ ಪೂಜಾರಿ ಉಪಸ್ಥಿತರಿದ್ದರು. ಘನ ಉಪಸ್ಥಿತರಾಗಿ ಬಂದಿರುವ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ಇವರು ಬಜಪೆ ಘಟಕ ನಡೆದು ಬಂದ ಕಾರ್ಯವೈಖರಿಯನ್ನು ಶ್ಲಾಘಿಸಿದರು .ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿರುವ ಸಂದ್ಯಾ ಕುಳಾಯಿ ಬಿಸು ಹಬ್ಬಕ್ಕೆ ಎಲ್ಲರಿಗು ಶುಭಾಶಯ ಕೋರಿದರು .ಸಂಗೀತ ಕ್ಷೇತ್ರದಲ್ಲಿ ಅರಳುವ ಪ್ರತಿಭೆ ಗ್ರೀಷ್ಮಾ ಎಕ್ಕಾರು, ನೃತ್ಯ ಲೋಕದ ಸಾಧಕಿ ನಿಕಿತಾ ಎಂ .ಕೆ ,ಶಿಕ್ಷಣ ಕ್ಷೆತ್ರದ ಸಾಧಕಿ ಮಧುರ ಆರ್, ಇವರನ್ನು ಸನ್ಮಾನಿಸಲಾಯಿತು .
ಕುಮಾರಿ ಅನನ್ಯ ಪ್ರಾರ್ಥನೆ ಮಾಡಿದರು. ನಿ .ಪೂ .ಅಧ್ಯಕ್ಷರಾದ ದೇವರಾಜ ಅಮಿನ್ ಸ್ವಾಗತಿಸಿದರು. ಉಪಾಧ್ಯಕ್ಷರಾದ ಅಶೊಕ್ ಕುಮಾರ್, ಮಹಿಳಾ ಸಂಘಟಕಿ ಉಶಾ ಶಿವಾನಂದ್ ,ಹಾಗೂ ಸದಸ್ಯೆ ಆಶಾ ಇವರು ಸನ್ಮಾನ ಪತ್ರ ವಾಚಿಸಿದರು .ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು . ಕಾರ್ಯದರ್ಶಿ ರೋಹಿತ್ ದನ್ಯವಾದಗೈದರು .ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ತಂಡರ್ ಗೈಸ್ ಡ್ಯಾನ್ಸ್ ಅಕಾಡೆಮಿ ಬಜಪೆ ಇವರಿಂದ ನೃತ್ಯ ಕಾರ್ಯಕ್ರಮ ಜರಗಿತು .

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!