ಯುವವಾಹಿನಿ(ರಿ) ಕೇಂದ್ರ ಸಮಿತಿ

ವಿದ್ಯಾನಿಧಿ ಟ್ರಸ್ಟ್ ವತಿಯಿಂದ ’ಪ್ರೇರಣ-2017’

ದಿನಾಂಕ 8-01-2017 ನೇ ರವಿವಾರದಂದು ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ವೃತ್ತಿ ಮಾರ್ಗದರ್ಶನ ಹಾಗೂ ಯುವಜನತೆಗೆ ಮತ್ತು ಪೋಷಕರಿಗೆ ಉಪಯೋಗವಾಗುವ ಕಾರ್ಯಕ್ರಮವಾಗಿ ಪ್ರೇರಣ-2017’ ಎನ್ನುವ ಕಾರ್ಯಕ್ರಮವು ಶ್ರೀಗೋಕರ್ಣನಾಥೇಶ್ವರ ಕಾಲೇಜು, ಗಾಂಧಿನಗರ, ಮಂಗಳೂರು ಇಲ್ಲಿ ಜರಗಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ರವರು ಪ್ರೇರಣಾ ಶಿಬಿರವನ್ನು ಉದ್ಘಾಟಿಸಿ, ಶುಭಕೋರಿದರು. ಯುವ ವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀ ಪದ್ಮನಾಭ ಮರೋಳಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಗೋಕರ್ಣನಾಥ ಕಾಲೇಜು ಮಂಗಳೂರು ಇದರ ಪ್ರಾಂಶುಪಾಲ ಗಂಗಾಧರ ಬಿ. ಪೂಜಾರಿ, ಯುವವಾಹಿನಿಯ ಸಲಹೆಗಾರ ಬಿ. ತಮ್ಮಯ್ಯ ಹಾಗೂ ವಿದ್ಯಾನಿಧಿ ಟ್ರಸ್ಟ್‌ನ ಟ್ರಸ್ಟಿಗಳಾದ ಸಂಜೀವ ಪೂಜಾರಿಯವರು ಹಾಗೂ ಜಯಂತ್ ನಡುಬೈಲ್‌ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನ ಎಂಬ ಶೈಕ್ಷಣಿಕ ಕಾರ್ಯಾಗಾರವನ್ನು ಪೂರ್ವಾಹ್ನ ಗಂಟೆ 10 ರಿಂದ 12 ರ ವರೆಗೆ ನಡೆಸಲಾಯಿತು. ಮಂಗಳೂರಿನ ಹಿರಿಯ ತರಬೇತುದಾರ ಅಭಿಜಿತ್ ಕರ್ಕೇರರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ವಿದ್ಯಾರ್ಥಿಗಳ ಹಾಗೂ ಯುವಜನರ ಉಪಯೋಗಕ್ಕಾಗಿ ಆಕರ್ಷಕವಾಗಿ ನಡೆಸಿಕೊಟ್ಟರು.

ಹಾಗೆಯೇ ಇನ್ನೊಂದು ಸಭಾಂಗಣದಲ್ಲಿ ಪೂರ್ವಾಹ್ನ ಗಂಟೆ 10.30 ರಿಂದ 12 ರವರೆಗೆ ಯುವಜನರು ಮತ್ತು ಪೋಷಕರು ಎಂಬ ಕಮ್ಮಟವನ್ನು ಯುವಜನರ ಮತ್ತು ಪೋಷಕರ ಉಪಯೋಗಕ್ಕಾಗಿ ನಡೆಸಲಾಯಿತು. ಜೇಸೀ ಸಂಸ್ಥೆಯ ರಾಷ್ಟ್ರೀಯ ತರಬೇತುದಾರರಾದ ರಾಮಚಂದ್ರ ರಾವ್‌ರವರು ಸಂಪನ್ಮೂಲ ವ್ಯಕ್ತಿಯಾಗಿ ಈ ಕಮ್ಮಟವನ್ನು ಬಹುಪಯೋಗಿಯಾಗಿ ನಡೆಸಿಕೊಟ್ಟರು.

ಅಪರಾಹ್ನ ಗಂಟೆ 12.30 ಕ್ಕೆ ಸರಿಯಾಗಿ ನಡೆದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ಅಧ್ಯಕ್ಷರಾಗಿ ಭಾಗವಹಿಸಿದ್ದರು. ಬಿಲ್ಲವ ಸಂಘ, ಅಶೋಕನಗರ ಮಂಗಳೂರು ಇದರ ಅಧ್ಯಕ್ಷರಾದ ಡಾ| ಬಿ.ಜಿ. ಸುವರ್ಣರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಯುವವಾಹಿನಿಯ ಕಾರ್ಯಚಟುವಟಿಕೆಗಳ ಬಗ್ಗೆ ತನ್ನ ಸಂತೋಷ ವ್ಯಕ್ತಪಡಿಸಿದರು. ಟ್ರಸ್ಟಿಗಳಾದ ಜಯಂತ್ ನಡುಬೈಲು, ಸೂರ್ಯಪ್ರಕಾಶ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಮೆಚ್ಚುಗೆ ನೀಡಿದರು. ಇನ್ನೋರ್ವ ಟ್ರಸ್ಟಿ ಸಂಜೀವ ಪೂಜಾರಿಯವರು ಉಪಸ್ಥಿತರಿದ್ದರು. ಸುಮಾರು 13 ವಿದ್ಯಾರ್ಥಿಗಳಿಗೆ ರೂ. 53,000/-ರಷ್ಟು ಆರ್ಥಿಕ ನೆರವು ವಿತರಿಸಲಾಯಿತು. ಇವರಲ್ಲಿ ಮೂರು ವಿದ್ಯಾರ್ಥಿಗಳು ವಿದ್ಯಾನಿಧಿ ಟ್ರಸ್ಟಿನಿಂದ ದತ್ತು ತೆಗೆದುಕೊಂಡ ವಿದ್ಯಾರ್ಥಿಗಳು ಎಂದು ತಿಳಿಸಲು ಸಂತೋಷವಾಗುತ್ತದೆ. ತರಬೇತಿ ಮತ್ತು ಅಭಿವೃದ್ಧಿ ಪರಿಶೀಲನಾ ಟ್ರಸ್ಟಿ ತಾರನಾಥ್ ಎಚ್.ಬಿ.ಯವರು ವಿದ್ಯಾರ್ಥಿಗಳ ಪರಿಚಯವನ್ನು ಸಭೆಗೆ ನೀಡಿದರು. ಆಡಳಿತ ಟ್ರಸ್ಟಿ ಸಂತೋಷ್ ಕುಮಾರ್‌ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಂ.ಸಿ.ಎಫ್.ನ ಚಂದ್ರಶೇಖರ್‌ರವರನ್ನು ಟ್ರಸ್ಟ್‌ನ ನೂತನ ಸದಸ್ಯರಾಗಿ ನೇಮಿಸಲಾಯಿತು. ಅವರ ಸೇವೆ, ಅನುಭವ ವಿದ್ಯಾರ್ಥಿಗಳ ಮಾಹಿತಿಗೆ ಬಹಳ ಅನುಕೂಲ ಎಂದು ಸಭೆಯಲ್ಲಿ ತಿಳಿಸಲಾಯಿತು.

ವಿದ್ಯಾನಿಧಿ ಟ್ರಸ್ಟ್‌ನ ಕಾರ್ಯದರ್ಶಿ ಶ್ರೀ ಪ್ರೇಮನಾಥ್ ಇವರು ಧನ್ಯವಾದ ಅರ್ಪಿಸಿ ಯುವವಾಹಿನಿ (ರಿ) ಮಂಗಳೂರು, ಕೇಂದ್ರ ಸಮಿತಿಯ ಮಾಜಿ ನಿರ್ದೇಶಕಿ ಶ್ರೀಮತಿ ಶುಭಾ ರಾಜೇಂದ್ರ ಹಾಗೂ ವಿದ್ಯಾನಿಧಿ ಟ್ರಸ್ಟ್‌ನ ಕೋಶಾಧಿಕಾರಿ ಕೆ. ರಾಜೀವ ಪೂಜಾರಿಯವರು ಕಾರ್ಯಕ್ರಮ ನಿರೂಪಣೆಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!