ನಮ್ಮ ನಡುವಿನ ಸಾಧಕರು - ನಮ್ಮ ಕಥೆ ನಿಮ್ಮ ಜತೆ

ಸಾಧನೆಗೆ ಕಲಿಕೆಯ ಅಂಕವೊಂದೇ ಮಾನದಂಡವಲ್ಲ

ಯಡ್ತಾಡಿ : ಯುವವಾಹಿನಿ(ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ ಐದು ದಿನಗಳ ಕಾಲ ನಡೆಸಿದ ಬೇಸಿಗೆ ಶಿಬಿರ, ವಿಕಸನ 2019 (ಅರಿವಿನ ತಂಗಾಳಿ) ರ ಅಂಗವಾಗಿ, ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಮಾಡಿಸಿ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಸಫಲತೆಯೊಂದೇ ಸಾಧನೆಯ ಮಾನದಂಡವಾಗಿ ರೂಪುಗೊಳ್ಳುತ್ತಿದ್ದು, ಇದು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಕಳವಳಕಾರಿಯಾದ ಅಂಶವಾಗಿದೆ. ಶೈಕ್ಷಣಿಕ ಸಾಧನೆಗೆ ಹೊರತಾಗಿಯೂ ಶ್ರಮವಹಿಸಿ ದುಡಿದರೆ ಸಮಾಜದಲ್ಲಿ ಶ್ರೇಷ್ಠ ಸಾಧನೆ ಮಾಡಬಹುದೆಂಬ ವಿಷಯ ಮನವರಿಕೆ ಮಾಡಲು ಪ್ರತಿ ದಿನ ಒಬ್ಬೊಬ್ಬ ಸಾಧಕರನ್ನು ಪರಿಚಯಿಸಲಾಯಿತು.

ಕ್ಷಯ ರೋಗದಿಂದ ಊರಿಗೆ ಮರಳಿ ಬಂದು ಮತ್ತೆ ಮುಂಬಯಿಗೆ ಹೋಗಲಾಗದ ಶಿವರಾಮ ಕೊಠಾರಿ ಕಠಿಣ ದುಡಿಮೆಯಿಂದ ತಂಪು ಪಾನೀಯ ಉದ್ಯಮ ಆರಂಭಿಸಿದ ಕಥೆ, ಕೃಷಿ ಕೆಲಸದ ಆಸಕ್ತಿಯಿಂದ ವಿದ್ಯಾಭ್ಯಾಸ ಮೊಟಕು ಗೊಳಿಸಿದ ಸಂಕಯ್ಯ ಶೆಟ್ಟಿ ಜನರೊಡನೆಯ ಉತ್ತಮ ಬಾಂಧವ್ಯದಿಂದ ಉತ್ತಮ ಉದ್ಯಮಿಯಾಗಿ ಬೆಳೆದ ಕಥೆ, ಬಡತನದ ಬೇಗೆಯಿಂದ ಏಳನೇ ತರಗತಿಗೆ ಶಾಲೆ ಬಿಟ್ಟು ಹೋಟೆಲ್ ಕೆಲಸ ಸೇರಿದ ಕೃಷ್ಣ ನಾಯ್ಕ ಸೆಂಟ್ರಿಂಗ್ ಉದ್ಯಮದಲ್ಲಿ ತನ್ನತನವನ್ನು ಕಂಡು ಕೊಂಡ ಕಥೆ, ಊಟಕ್ಕಿಲ್ಲದೆ ನಾಲ್ಕನೇ ತರಗತಿಗೆ ಜಲ್ಲಿ ಕುಟ್ಟಲು ಶುರುಮಾಡಿದ ನಾರಾಯಣ ಪೂಜಾರಿಯವರು, ನಿರ್ಮಾಣ ಉದ್ಯಮದಲ್ಲಿ ಹಲವಾರು ಜನರಿಗೆ ಕೆಲಸ ಕೊಡಿಸಿ, ಇನ್ನು ಹಲವರನ್ನು ತಮ್ಮಂತೆಯೇ ಸ್ವಂತ ನಿರ್ಮಾಣ ಉದ್ಯಮದಲ್ಲಿ ತೊಡಗಿಸಿದ ಕಥೆ. ಹೀಗೆ ಒಂದೊಂದು ದಿನ ಒಂದೊಂದು ಕಥೆ ವಿದ್ಯಾರ್ಥಿಗಳಲ್ಲಿ ಸಾಧನೆಯ ಹಿಂದಿರುವ ಕಠಿಣ ಶ್ರಮದ ಮಹತ್ವ ಮರೆಯದ ಹಾಗೆ ಉಳಿಯುವಂತೆ ಮಾಡಿತು. ಕೊನೆಯ ದಿನದ ಅತಿಥಿಯಾದ ಕೇಂದ್ರ ಸಮಿತಿಯ ಅಧ್ಯಕ್ಷ, ಜಯಂತ್ ನಡುಬೈಲು ಅವರ ರಾತ್ರಿ ಪಾಳಿಯ ಕಾವಲುಗಾರನಾಗಿ ವಿದ್ಯಾಭ್ಯಾಸ ಮುಗಿಸಿದ ಬಗೆ, ನೂರು ಕೋಳಿಗಳಿಂದ ಆರಂಭಿಸಿದ ಕೋಳಿ ಸಾಕಾಣಿಕಾ ಉದ್ಯಮವನ್ನು ತಿಂಗಳಿಗೆ ಎರಡು ಲಕ್ಷದವರೆಗೆ ದಾಟಿಸಿದ ರೋಚಕ ಕಥೆ ವಿದ್ಯಾರ್ಥಿಗಳನ್ನು ಮಂತ್ರ ಮುಗ್ದವಾಗಿಸಿ ಸಾಧನೆಯ ಛಲವನ್ನು ಮೂಡಿಸಿತು. ಕಠಿಣ ಶ್ರಮವಹಿಸಿ ದುಡಿಯುವ ಮನಸ್ಸಿರುವವರಿಗೆ ಸಾಧನೆಗೆ ಅಸ್ಸಾಧ್ಯವಾದುದು ಯಾವುದೂ ಇಲ್ಲವೆಂಬ ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ನಿರೂಪಿಸುವ ಪ್ರಯತ್ನದಲ್ಲಿ ಯುವವಾಹಿನಿ(ರಿ) ಯಡ್ತಾಡಿ ಸಣ್ಣ ಹೆಜ್ಜೆಯೊಂದನ್ನು ಇಟ್ಟಿತು.

One thought on “ಸಾಧನೆಗೆ ಕಲಿಕೆಯ ಅಂಕವೊಂದೇ ಮಾನದಂಡವಲ್ಲ

  1. ಇದೊಂದು ಮಾದರಿ ಕಾರ್ಯಕ್ರಮ, ಅಭಿನಂದನೆಗಳು ಯಡ್ತಾಡಿ ಘಟಕ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!