Yuvavahini

JUN 05, 2019 7.45 AM IST

ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಉಜಿರೆ ಸಂಚಲನಾ ಸಮಿತಿಯಿಂದ

ಗುರುಪೂಜೆ, ನಾರಾಯಣಗುರು ತತ್ವ ಪ್ರಚಾರ

ಉಜಿರೆ: ಸಮಾಜದ ಉದ್ಧಾರಕ್ಕಾಗಿ ಜನ್ಮತಾಳಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದುಳಿದ ಮತ್ತು ಶೋಷಿತ ವರ್ಗದವರಿಗೆ ಮಾನವ ರೂಪದಲ್ಲಿ ಬಂದ ದೇವರು ಇವರು ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ಸ್ವಾಮೀಜಿ ಹೇಳಿದರು.
ಅವರು ಜೂ.5 ರಂದು ಯುವವಾಹಿನಿ ಬೆಳ್ತಂಗಡಿ ಘಟಕದ ಉಜಿರೆ ಸಂಚಲನ ಸಮಿತಿ ಆಶ್ರಯದಲ್ಲಿ ಎಸ್.ಕೆ ಮೆಮೋರಿಯಲ್ ಹಾಲ್‌ನಲ್ಲಿ ನಡೆದ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ತತ್ವ ಪ್ರಚಾರದ ಮೂಲಕ ಆಶೀರ್ವಚನ ನೀಡಿದರು.
ನಾರಾಯಣ ಗುರುಗಳು ವಿದ್ಯೆ, ಸಂಘಟನೆಯ ಮೂಲಕ ದೇವರ ಭಕ್ತಿಯ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಗುರುಗಳ ತತ್ವದಂತೆ ಯಾವುದೇ ಸಮಾರಂಭಗಳನ್ನು ಆಡಂಬರವಿಲ್ಲದೆ ಶ್ರದ್ಧಾ ಭಕ್ತಿಯಿಂದ ಮಾಡಿದಾಗ ನೆಮ್ಮದಿ ಲಭಿಸುವುದು. ಸಮಾಜದ ಏಳಿಗೆಗಾಗಿ ಸಂಘಟನೆಯ ಮೂಲಕ ರಾಜಕೀಯ ಶಕ್ತಿಯನ್ನು ಪಕ್ಷಬೇಧ ಮರೆತು ಎಲ್ಲರೂ ಒಂದಾಗಿ ವಿಶ್ವಾಸದ ಹೋರಾಟ ಮಾಡಬೇಕು ಎಂದರು

ಜಗತ್ತಿನ ಶ್ರೇಷ್ಠ ಗುರು: ಕೆ.ವಸಂತ ಬಂಗೇರ
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಶಾಸಕ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ ಕೆ.ವಸಂತ ಬಂಗೇರ ಪರಿಸರ ದಿನದ ಅಂಗವಾಗಿ ಸಸಿ ವಿತರಿಸಿ ಮಾತನಾಡುತ್ತಾ ಯಾವುದೇ ಕಾರ್ಯಕ್ರಮದಲ್ಲಿ ಸಮಯ ಪ್ರಜ್ಞೆಯನ್ನು ಪಾಲಿಸಿ ಸಭಾ ಗೌರವ ಬೆಳೆಸಬೇಕು. ಜಗತ್ತಿನ ಶ್ರೇಷ್ಠ ಗುರು ಬ್ರಹ್ಮಶ್ರೀ ನಾರಾಯಣ ಗುರು ಸಮಾಜದ ಜೀವಂತ ಗುರುಗಳು ಹಿಂದುಳಿದ ವರ್ಗದವರನ್ನು ಸಮಾಜದಲ್ಲಿ ತಲೆ ಎತ್ತಿ ನಡೆಸಲು ಅವಕಾಶ ಮಾಡಿಕೊಟ್ಟ ಗುರುಗಳು ಯುವವಾಹಿನಿಯಂತಹ ಸಂಘಟನೆ ಮೂಲಕ ಯುವಕರು ಸಮಾಜದ ಏಳಿಗೆಗಾಗಿ ಪರಿಪೂರ್ಣ ಶಿಕ್ಷಣ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದರು.

ಸಸಿ ವಿತರಣೆ: ಪರಿಸರದ ದಿನಾಚರಣೆಯಂದು ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಭಾಗವಹಿಸಿದ್ದ ಎಲ್ಲರಿಗೂ ಸಂಘಟನೆ ವತಿಯಿಂದ ಗಿಡ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ಮೊದಲು ಗುರುಪೂಜೆ, ಶ್ರೀ ಸತ್ಯನಾರಾಯಣ ಪೂಜೆ ರಘುನಾಥ ಶಾಂತಿಯವರ ನೇತೃತ್ವದಲ್ಲಿ ಜರುಗಿತು. ಉಜಿರೆ ಸಂಚಲನ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿ ಸಹಕರಿಸಿದರು.
ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಮಾಜಿ ಶಾಸಕ .ಕೆ ಪ್ರಭಾಕರ ಬಂಗೇರ, ಉಜಿರೆ ಉದ್ಯಮಿ ರವಿಕುಮಾರ್ ಬರಮೇಲು,ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ .ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಪೂಜಾರಿ, ಮಾಜಿ ಸೈನಿಕ ಉಜಿರೆ.ಎಸ್.ಎನ್.ಡಿ.ಪಿ ಅಧ್ಯಕ್ಷ ಎ.ಕೆ ಶಿವನ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಉಜಿರೆ ಗ್ರಾಮ ಪಂಚಾಯತ್ ಸದಸ್ಯರುಗಳಾದ ನೀಲಯ್ಯ ಪೂಜಾರಿ ಕೊಡೆಕ್ಕಲ್, ಮಂಜುಳಾ ಉಮೇಶ್ ಅತ್ತಾಜೆ, ನಾಗವೇಣಿ, ಮಂಜಪ್ಪ ಪೂಜಾರಿ, ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಶ್ರೀ ನಾರಾಯಣ ಗುರು ತತ್ವ ಪ್ರಚಾರಕ ಎಂ.ಕೆ ಪ್ರಸಾದ್, ಯುವವಾಹಿನಿ ಬೆಳ್ತಂಗಡಿ ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಮಚ್ಚಿನ, ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಹರೀಶ್ ಕುಮಾರ್ ಬರಮೇಲು, ಯುವವಾಹಿನಿ ಕೇಂದ್ರ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಉಮನಾಥ ಕೋಟ್ಯಾನ್ ಗೌರವ ಉಪಸ್ಥಿತರಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಉಜಿರೆ ಯುವವಾಹಿನಿ ಸಂಚಲನ ಸಮಿತಿ ಅಧ್ಯಕ್ಷ ಮನೋಜ್ ಕುಂಜರ್ಪ ವಹಿಸಿದ್ದರು. ವಿಶಾಲಾಕ್ಷಿಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.
ಉಜಿರೆ ಸಂಚಲನ ಸಮಿತಿ ಕಾರ್ಯದರ್ಶಿ ಸ್ವಾಗತಿಸಿ, ಯುವವಾಹಿನಿ ಬೆಳ್ತಂಗಡಿ ಘಟಕದ ಸದಸ್ಯ ಅಶ್ವತ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕು| ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!