Yuvavahini

JUN 09, 2019 3.27 PM IST

ಯುವವಾಹಿನಿ ಹಳೆಯಂಗಡಿ ಘಟಕದ ವತಿಯಿಂದ

ರೂ.35 ಸಾವಿರ ಮೊತ್ತದ ಪುಸ್ತಕ ವಿತರಣೆ

ಹಳೆಯಂಗಡಿ : ಯುವವಾಹಿನಿ ಹಳೆಯಂಗಡಿ ಘಟಕದ ವತಿಯಿಂದ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ದಿ.ಕಮಲ ಬೂಬ ಅಮೀನ್ ಸ್ಮರಣಾರ್ಥ ಅವರ ಮಕ್ಕಳ ಪ್ರಾಯೋಜಕತ್ವದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ದಿನಾಂಕ 09.06.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಹಳೆಯಂಗಡಿಯ ಹರಿ ಓಂ ಸಭಾಗ್ರಹದಲ್ಲಿ ಜರಗಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬ್ಬೆಲ್ ರವರು ತನ್ನ ಬಾಲ್ಯದ ಜೀವನವನ್ನು ಮೆಲುಕು ಹಾಕುತ್ತಾ, ವಿದ್ಯಾರ್ಥಿಗಳಿಗೆ ಈ ಪುಸ್ತಕ ವಿತರಣಾ ಕಾರ್ಯಕ್ರಮದ ಮಹತ್ವವನ್ನು ತಿಳಿ ಹೇಳಿದರು. ಸಂಘಟನೆಯ ಮೂಲಕ ಸದೃಢವಾಗಿ ಸಮಾಜದಲ್ಲಿ ಶೋಷಿತರ ಧ್ವನಿಯಾಗಿ ಬೆಳೆದ ಬಿಲ್ಲವ ಸಮಾಜ ಇಂದು ಸಮಾಜದ ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಹಳೆಯಂಗಡಿ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ವಸಂತ್ ಬೆರ್ನಾಡ್ ಹೇಳಿದರು.

ಹಳೆಯಂಗಡಿ ಬಿಲ್ಲವ ಸಮಾಜದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ನಾನಿಲ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಮಕ್ಕಳಲ್ಲಿ ಸಮಾಜ ಸಂಘಟನೆಯ ಚಿಂತನೆಯನ್ನು ಬೆಳಗಿಸಲು ಪೂರಕವಾದ ಮೌಲ್ಯಶಿಕ್ಷಣವನ್ನು ನೀಡುವ ಅಗತ್ಯವಿದೆ ಎಂದು ಹೇಳಿದರು.

ಬಿಲ್ಲವ ಸಮಾಜದ ಕಟ್ಟಡ ನಿಧಿಗೆ ಒಂದು ಲಕ್ಷ ರೂಪಾಯಿ ದೇಣಿಗೆ
ಈ ಸಂದರ್ಭದಲ್ಲಿ ಯುವವಾಹಿನಿ ಹಳೆಯಂಗಡಿ ಅಧ್ಯಕ್ಷರಾದ ಅರುಣ್ ರವರು ಘಟಕದ ವತಿಯಿಂದ ಹಳೆಯಂಗಡಿ ಬಿಲ್ಲವ ಸಮಾಜದ ಕಟ್ಟಡ ನಿಧಿಗೆ ಒಂದು ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದರು. ಹಾಗೂ ವಿದ್ಯಾ ನಿಧಿಗಾಗಿ ಕೈಗೊಂಡ ಯೋಜನೆಯನ್ನು ಉದ್ಘಾಟಿಸಲಾಯಿತು. ಅಂತೆಯೇ ಕಾರ್ಯಕ್ರಮದ ಪ್ರಾಯೋಜಕರಾದ ಹಳೆಯಂಗಡಿ ಪೂಜಾ ಎರೇಂಜರ್ ನ ಮಾಲಕರಾದ ಶ್ರೀ ಜೈಕೃಷ್ಣ ಕೋಟ್ಯಾನ್ ಮತ್ತು ನಯನಾ. ಜೆ ಕೋಟ್ಯಾನ್ ರವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಒಟ್ಟು 58 ವಿದ್ಯಾರ್ಥಿಗಳಿಗೆ ರೂ.35,000 /- ಮೊತ್ತದ ಪುಸ್ತಕವನ್ನು ವಿತರಿಸಲಾಯಿತು.

ಹಳೆಯಂಗಡಿ ಘಟಕದ ಸಲಹೆಗಾರರಾದ, ರಾಜೀವ ಪೂಜಾರಿ, ಕಟ್ಟಡ ಸಮಿತಿಯ ಅಧ್ಯಕ್ಷರಾದ ಮೋಹನ್ ಸುವರ್ಣ, ಸಮಾಜ ಸೇವಕ ವಿಶ್ವನಾಥ ಕೋಟ್ಯಾನ್, ಸಂಘದ ಗೌರವಾಧ್ಯಕ್ಷ ಗಣೇಶ್ ಬಂಗೇರ, ಮುಂಡ್ಕೂರು ಜೆಸೀಐ ನ ಅಧ್ಯಕ್ಷೆಯಾದ ಕುಮಾರಿ.ಅರುಣಾ ಕುಲಾಲ್ ಉಪಸ್ಥಿತರಿದ್ದರು.

ಯುವವಾಹಿನಿಯ ಮಾಜಿ ಅಧ್ಯಕ್ಷರಾದ ಶರತ್ ಸಾಲ್ಯಾನ್ ಸ್ವಾಗತಿಸಿದರು, ರಮೇಶ್ ಬಂಗೇರ ಪ್ರಸ್ತಾವನೆ ಗೈದರು, ನಿಕಟಪೂರ್ವ ಅಧ್ಯಕ್ಷರಾದ ಹೇಮನಾಥ ಕರ್ಕೇರಾರವರು ಪಟ್ಟಿ ವಾಚಿಸಿದರು, ಯುವವಾಹಿನಿಯ ಅಧ್ಯಕ್ಷರಾದ ಶ್ರೀ ಅರುಣ್ ರವರು ವಂದಿಸಿದರು. ಹಿಮಕರ್ ಸುವರ್ಣ ಹಾಗೂ ಬ್ರಿಜೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!