ಯುವವಾಹಿನಿ ಹಳೆಯಂಗಡಿ ಘಟಕದ ವತಿಯಿಂದ

ರೂ.35 ಸಾವಿರ ಮೊತ್ತದ ಪುಸ್ತಕ ವಿತರಣೆ

ಹಳೆಯಂಗಡಿ : ಯುವವಾಹಿನಿ ಹಳೆಯಂಗಡಿ ಘಟಕದ ವತಿಯಿಂದ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ದಿ.ಕಮಲ ಬೂಬ ಅಮೀನ್ ಸ್ಮರಣಾರ್ಥ ಅವರ ಮಕ್ಕಳ ಪ್ರಾಯೋಜಕತ್ವದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ದಿನಾಂಕ 09.06.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಹಳೆಯಂಗಡಿಯ ಹರಿ ಓಂ ಸಭಾಗ್ರಹದಲ್ಲಿ ಜರಗಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬ್ಬೆಲ್ ರವರು ತನ್ನ ಬಾಲ್ಯದ ಜೀವನವನ್ನು ಮೆಲುಕು ಹಾಕುತ್ತಾ, ವಿದ್ಯಾರ್ಥಿಗಳಿಗೆ ಈ ಪುಸ್ತಕ ವಿತರಣಾ ಕಾರ್ಯಕ್ರಮದ ಮಹತ್ವವನ್ನು ತಿಳಿ ಹೇಳಿದರು. ಸಂಘಟನೆಯ ಮೂಲಕ ಸದೃಢವಾಗಿ ಸಮಾಜದಲ್ಲಿ ಶೋಷಿತರ ಧ್ವನಿಯಾಗಿ ಬೆಳೆದ ಬಿಲ್ಲವ ಸಮಾಜ ಇಂದು ಸಮಾಜದ ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಹಳೆಯಂಗಡಿ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ವಸಂತ್ ಬೆರ್ನಾಡ್ ಹೇಳಿದರು.

ಹಳೆಯಂಗಡಿ ಬಿಲ್ಲವ ಸಮಾಜದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ನಾನಿಲ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಮಕ್ಕಳಲ್ಲಿ ಸಮಾಜ ಸಂಘಟನೆಯ ಚಿಂತನೆಯನ್ನು ಬೆಳಗಿಸಲು ಪೂರಕವಾದ ಮೌಲ್ಯಶಿಕ್ಷಣವನ್ನು ನೀಡುವ ಅಗತ್ಯವಿದೆ ಎಂದು ಹೇಳಿದರು.

ಬಿಲ್ಲವ ಸಮಾಜದ ಕಟ್ಟಡ ನಿಧಿಗೆ ಒಂದು ಲಕ್ಷ ರೂಪಾಯಿ ದೇಣಿಗೆ
ಈ ಸಂದರ್ಭದಲ್ಲಿ ಯುವವಾಹಿನಿ ಹಳೆಯಂಗಡಿ ಅಧ್ಯಕ್ಷರಾದ ಅರುಣ್ ರವರು ಘಟಕದ ವತಿಯಿಂದ ಹಳೆಯಂಗಡಿ ಬಿಲ್ಲವ ಸಮಾಜದ ಕಟ್ಟಡ ನಿಧಿಗೆ ಒಂದು ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದರು. ಹಾಗೂ ವಿದ್ಯಾ ನಿಧಿಗಾಗಿ ಕೈಗೊಂಡ ಯೋಜನೆಯನ್ನು ಉದ್ಘಾಟಿಸಲಾಯಿತು. ಅಂತೆಯೇ ಕಾರ್ಯಕ್ರಮದ ಪ್ರಾಯೋಜಕರಾದ ಹಳೆಯಂಗಡಿ ಪೂಜಾ ಎರೇಂಜರ್ ನ ಮಾಲಕರಾದ ಶ್ರೀ ಜೈಕೃಷ್ಣ ಕೋಟ್ಯಾನ್ ಮತ್ತು ನಯನಾ. ಜೆ ಕೋಟ್ಯಾನ್ ರವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಒಟ್ಟು 58 ವಿದ್ಯಾರ್ಥಿಗಳಿಗೆ ರೂ.35,000 /- ಮೊತ್ತದ ಪುಸ್ತಕವನ್ನು ವಿತರಿಸಲಾಯಿತು.

ಹಳೆಯಂಗಡಿ ಘಟಕದ ಸಲಹೆಗಾರರಾದ, ರಾಜೀವ ಪೂಜಾರಿ, ಕಟ್ಟಡ ಸಮಿತಿಯ ಅಧ್ಯಕ್ಷರಾದ ಮೋಹನ್ ಸುವರ್ಣ, ಸಮಾಜ ಸೇವಕ ವಿಶ್ವನಾಥ ಕೋಟ್ಯಾನ್, ಸಂಘದ ಗೌರವಾಧ್ಯಕ್ಷ ಗಣೇಶ್ ಬಂಗೇರ, ಮುಂಡ್ಕೂರು ಜೆಸೀಐ ನ ಅಧ್ಯಕ್ಷೆಯಾದ ಕುಮಾರಿ.ಅರುಣಾ ಕುಲಾಲ್ ಉಪಸ್ಥಿತರಿದ್ದರು.

ಯುವವಾಹಿನಿಯ ಮಾಜಿ ಅಧ್ಯಕ್ಷರಾದ ಶರತ್ ಸಾಲ್ಯಾನ್ ಸ್ವಾಗತಿಸಿದರು, ರಮೇಶ್ ಬಂಗೇರ ಪ್ರಸ್ತಾವನೆ ಗೈದರು, ನಿಕಟಪೂರ್ವ ಅಧ್ಯಕ್ಷರಾದ ಹೇಮನಾಥ ಕರ್ಕೇರಾರವರು ಪಟ್ಟಿ ವಾಚಿಸಿದರು, ಯುವವಾಹಿನಿಯ ಅಧ್ಯಕ್ಷರಾದ ಶ್ರೀ ಅರುಣ್ ರವರು ವಂದಿಸಿದರು. ಹಿಮಕರ್ ಸುವರ್ಣ ಹಾಗೂ ಬ್ರಿಜೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!