ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ಯುವ ಸ್ಪೂರ್ತಿ 2018-19

ಮಾಣಿ : ದಿನಾಂಕ 16-06-2019ರಂದು ಯುವವಾಹಿನಿ(ರಿ.)ಮಾಣಿ ಘಟಕದ ವತಿಯಿಂದ ಸ.ಹಿ.ಪ್ರಾ.ಶಾಲೆ ಗಡಿಯಾರ, ಕೆದಿಲ ಇಲ್ಲಿ ಯುವ ಸ್ಪೂರ್ತಿ 2018-19 ಪರಿಣಾಮಕಾರಿ ಭಾಷಣ ಕಲೆ, ಸಂವಹನ ಮತ್ತು ಮಾನಸಿಕ ಆರೋಗ್ಯ ಹಾಗೂ ವ್ಯಕ್ತಿತ್ವ ವಿಕಸನ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಯಿತು.

ಬೆಳಿಗ್ಗೆ 9.30ಕ್ಕೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು.ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು,ನಿವೃತ್ತ ಸಿಎ ಬ್ಯಾಂಕ್ ಉದ್ಯೋಗಿ ಸೋಮಪ್ಪ ಪೂಜಾರಿ ಮಾದೆಲು, ,ಮಾಣಿ ಘಟಕ ಸಲಹೆಗಾರ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ , ಗಡಿಯಾರ ಶಾಲೆ ಮುಖ್ಯ ಶಿಕ್ಷಕರು ಸುಚೇತ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯುವವಾಹಿನಿ(ರಿ.)ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ಅಧ್ಯಕ್ಷತೆಯನ್ನು ವಹಿಸಿದ್ದರು, ಯುವ ಸ್ಪೂರ್ತಿ 2018-19 ಸಂಚಾಲಕರಾದ ಜಯಪ್ರಕಾಶ್ ಕೆದಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. .ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ತುಕಾರಾಂ ಪೂಜಾರಿ, ಪದ್ಮನಾಭ ಮರೊಳಿ ಹಾಗೂ ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಮೋಹನ ಪೆಜಕಳ ಉಪಸ್ಥಿತರಿದ್ದರು.ಕಾರ್ಯದರ್ಶಿ ಸುಜಿತ್ ಅಂಚನ್ ಸ್ವಾಗತಿಸಿದರು, ಉಪಾಧ್ಯಕ್ಷರಾದ ಪ್ರಶಾಂತ್ ಅನಂತಾಡಿ ವಂದಿಸಿದರು.

ಮನಸ್ಸಿನಲ್ಲಿ ಭಾಷಣ ಕಲೆಯನ್ನು ಆಲವಡಿಕೊಳ್ಳಬೇಕದರೆ ಕನಿಷ್ಠಪಕ್ಷ ಜಗತ್ತಿನ ಹಾಗೂ ಇತರ ವಿಷಯಗಳ ಬಗ್ಗೆ ಸಾಮಾನ್ಯ ಜ್ಞಾನ ಇರಬೇಕು. ಭಾಷಣ ಮಾಡುವ ಕಲೆಗಾರನಲ್ಲಿ ಪ್ರೇಕ್ಷಕರನ್ನು ತನ್ನತ್ತ ಸೆಳೆಯುವ ಮುಖ ಭಾವವಿರಬೇಕು,ಸ್ಪಷ್ಟವಾದ ಉಚ್ಚಾರಣೆ ಇರಬೇಕು ಮತ್ತು ಎಲ್ಲ ವಿಚಾರ ಬಗ್ಗೆ ತಿಳಿದಿರಬೇಕು ಎಂದು ತರಬೇತಿದಾರರದ ಆಭಿಜಿತ್ ಕರ್ಕೇರ ತಿಳಿಸಿದರು.ಇವರು ಪರಿಣಾಮಕಾರಿ ಭಾಷಣಕಲೆ ಬಗ್ಗೆ ಕಾರ್ಯಾಗಾರ ನಡೆಸಿದರು.ಕೊನೆಯಲ್ಲಿ ಪ್ರೇಮನಾಥ್ ಬಂಟ್ವಾಳ,ಮಾಜಿ ಅಧ್ಯಕ್ಷರು ಕೇ.ಸ ಮಂಗಳೂರು ಇವರು ಶಾಲು ಹೊದಿಸಿ ಸನ್ಮಾನಿಸಿದರು.

ಮನುಷ್ಯನು ಹೊರಜಗತ್ತಿಗೆ ಎಷ್ಟು ಸಂತೋಷವಾಗಿ ಕಾಣುತ್ತಾನೊ ಆಗೆಯೇ ಮಾನಸಿಕವಾಗಿಯೂ ಸದೃಢ ಆಗಿರಬೇಕಾಗುತ್ತದೆ. ಮೂಡನಂಬಿಕೆಗಳನ್ನು ಹೆಚ್ಚು ನಂಬಿ ಮೊಸ ಹೊಂದುವುದರಿಂದ ತನ್ನಲ್ಲಿ ಇರುವ ಮಾನಸಿಕ ಸಮಸ್ಯೆಯನ್ನು ಪರಿಹರಿಸುವುದರಿಂದ ಜೀವನದಲ್ಲಿ ಮುಕ್ತಿ ಸಿಗುತ್ತದೆ. ಮನುಷ್ಯರು ತುಂಬಾ ತರಹದ ಮಾನಸಿಕ ಸಮಸ್ಯೆಗಳಿಗೆ ತುತ್ತಾಗುತ್ತಾರೆ ಮತ್ತು ಆದರಿಂದ ಹೇಗೆ ಮುಕ್ತಿ ಪಡೆಯಬೇಕು ಎಂದು ಮಾನಸಿಕ ಆಪ್ತಸಮಲೋಚಕರಾದ ಲೊಹಿತ್ ರವರು “ಯುವ ಸ್ಪೂರ್ತಿ 2018-19” ಮಾನಸಿಕ ಆರೋಗ್ಯ ತರಬೇತಿಯಲ್ಲಿ ತಿಳಿಸಿದರು.ನಂತರ ಅಥಿತಿಗಳಾದ ನಿತಿನ್ ಅರ್ಬಿ,ಉದ್ಯಮಿ ಮತ್ತು ಸತೀಶ್ ಬಾಯಿಲ,ಉಪಾಧ್ಯಕ್ಷರು ಬಂಟ್ವಾಳ ಘಟಕ ಇವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

“ವ್ಯಕ್ತಿತ್ವ ವಿಕಸನ” ತರಬೇತಿ ಕಾರ್ಯಗಾರದಲ್ಲಿ ಸುದಾಕರ್ ಕಾರ್ಕಳರವರು ವ್ಯಕ್ತಿ ತನ್ನ ಮನಸ್ಸಿನ ಒಳಗಿನ ತತ್ವಗಳನ್ನು ಬದಲಾವಣೆ ಮಾಡಿಕೊಂಡರೆ ಜೀವನದಲ್ಲಿ ಯಶಸ್ಸು ಖಂಡಿತ ಎಂದು ಹೇಳಿದರು.ಮನುಷ್ಯ ತನ್ನ ಜೀವನದಲ್ಲಿ ನಕಾರತ್ಮಕ ಭಾವನೆಗಳನ್ನು ಹೆಚ್ಚಾಗಿ ಆಲವಡಿಕೊಳ್ಳದೆ ಸಕಾರತ್ಮಕ ಭಾವನೆಗಳನ್ನು ಜೀವನದಲ್ಲಿ ಆಲವಡಿಕೊಳ್ಳಬೇಕು.
ವ್ಯಕ್ತಿ ತನ್ನ ಮನಸ್ಸಿನ ಒಳಗಿನ ತತ್ವಗಳನ್ನು ಬದಲಾಯಿಸಿಕೋಂಡರೆ ಮಾತ್ರ ವಿಕಸನ ಆಗಾಬಹುದು ಎಂದು ಎಲ್ಲಾರ ಮನಸ್ಸಿಗೆ ಮುಟ್ಟುವಾಗ ಹೇಳಿದರು.ಅತಿಥಿಯಾಗಿ ಜನಾಬ್ ಪಿ ಇಬ್ರಾಹಿಂ, SDMC ಅಧ್ಯಕ್ಷರು ಅಗಮಿಸಿದರು.ಮಾಣಿ ಘಟಕದ ಅಧ್ಯಕ್ಷರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಕೊನೆಯಲ್ಲಿ ಕಾರ್ಯಕ್ರಮದ ಸಂಚಾಲಕರಾದ ಜಯಪ್ರಕಾಶ್ ಕೆದಿಲ ಇವರನ್ನು ಅಧ್ಯಕ್ಷರು ಸನ್ಮಾನಿಸಿದರು.ರಾಜೇಶ್ ಬಲ್ಯ ಮತ್ತು ದಿನಕರ್ ಬರಿಮಾರ್ ಕಾರ್ಯಕ್ರಮ ನಿರೂಪಿಸಿದರು.ನಿ.ಪೂ ಅಧ್ಯಕ್ಷರಾದ ರಾಜೇಶ್ ಬಾಬನಕಟ್ಟೆ,ಉಪಾಧ್ಯಕ್ಷರಾದ ರಮೇಶ್ ಮುಜಲ ಮತ್ತು ಸಲಹೆಗಾರರಾದ ದಯಾನಂದ ಪೂಜಾರಿ ಕೊಡಜೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಸದಸ್ಯರು ಮತ್ತು ಶಾಲಾ ಮಕ್ಕಳು ಭಾಗವಹಿಸಿ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!