ಯುವವಾಹಿನಿ (ರಿ) ಕಾರ್ಕಳ ಘಟಕದ ವತಿಯಿಂದ

ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವು ದಿನಾಂಕ . 14.06.2019ರ ಶುಕ್ರವಾರ ಮೊರಾರ್ಜಿ ದೇಸಾಯಿ ಶಾಲೆ ಮಿಯ್ಯಾರು ಇಲ್ಲಿ ನಡೆಯಿತು. ಕಾರ್ಯಾಗಾರದ ಉದ್ಘಾಟನೆಯನ್ನು ಮಿಯ್ಯಾರು ಬಿಲ್ಲವ ಸಂಘದ ಗ್ರಾಮ ಸಮಿತಿ ಅಧ್ಯಕ್ಷರಾದ ಗಣೇಶ ಪೂಜಾರಿ ನೆರವೇರಿಸಿದರು.
ಸಭಾಧ್ಯಕ್ಷತೆಯನ್ನು ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್‍ರವರು ವಹಿಸಿದ್ದರು. ರಾಷ್ಟ್ರೀಯ ತರಬೇತುದಾರ ಹಾಗೂ ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ್ ಕಾರ್ಕಳ ತರಬೇತಿಯನ್ನು ನಡೆಸಿಕೊಟ್ಟರು. ಮೊರಾರ್ಜಿ ದೇಸಾಯಿ ಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ್‍ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಜೀವನ ಕೌಶಲ್ಯದ ಅಗತ್ಯತೆಯ ಬಗ್ಗೆ ಅನುಭವಧಾರಿತ ಕಲಿಕೆಯನ್ನು ಚಟುವಟಿಕೆಯಾದರಿತವಾಗಿ ವಿದ್ಯಾರ್ಥಿಗಳಿಗೆ ತಿಳಿಹೇಳಲಾಯಿತು.
ಘಟಕದ ಸದಸ್ಯರಾದ ಮಂಜುನಾಥ ಕೋಟ್ಯಾನ್, ಸಂತೋಷ್ ಬಂಗೇರಾ, ಭವ್ಯ ಸ್ವರೂಪ್, ವನಿತಾ ಸುಧಾಕರ್, ಸತೀಶ್ ಪೂಜಾರಿ ಕಲತ್ರಪಾದೆ, ಸಂದೀಪ್ ಪೂಜಾರಿ ನಲ್ಲೂರು, ನಾರಾಯಣ ಪೂಜಾರಿ ಈದು, ಶೋಭರಾಜ್ ಹೊಸ್ಮಾರು ಕಾರ್ಯಕ್ರಮಕ್ಕೆ ಸಹಕರಿಸಿದರು. ಕೋಶಾಧಿಕಾರಿ ಅರುಣ್ ಕುಮಾರ್‍ರವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯದರ್ಶಿ ಗಣೇಶ್ ಸಾಲಿಯಾನ್‍ರವರು ವಂದಿಸಿದರು.

ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವು ದಿನಾಂಕ 21.06.2019ರ ಶುಕ್ರವಾರ ಮೊರಾರ್ಜಿ ದೇಸಾಯಿ ಕಾಲೇಜು ಮಿಯ್ಯಾರು ಇಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಮಿಯ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿಲ್ಲವ ಸಮಾಜದ ಹಿರಿಯರು ಆಗಿರುವ ಭೋಜ ಪೂಜಾರಿಯವರು ನೆರವೇರಿಸಿದರು.
ಸಭಾಧ್ಯಕ್ಷತೆಯನ್ನು ಘಟಕದ ಪದಾಧಿಕಾರಿಗಳಾದ ಮಂಜುನಾಥ್ ಕೋಟ್ಯಾನ್‍ರವರು ವಹಿಸಿದ್ದರು. ರಾಷ್ಟ್ರೀಯ ತರಬೇತುದಾರ ಹಾಗೂ ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ್ ಕಾರ್ಕಳ ಹಾಗೂ ಮತ್ತೊಬ್ಬ ತರಬೇತುದಾರರಾದ ಗೋಪ ಕುಮಾರ್ ಕೇರಳ ಇವರು ತರಬೇತಿಯನ್ನು ನಡೆಸಿಕೊಟ್ಟರು.
ಮೊರಾರ್ಜಿ ದೇಸಾಯಿ ಕಾಲೇಜಿನ ಪ್ರಾಂಶುಪಾಲರಾದ ಈಶ್ವರ್‍ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಗುರಿ ನಿರ್ಧಾರದ ಅಗತ್ಯತೆಯ ಬಗ್ಗೆ ಅನುಭವಧಾರಿತ ಕಲಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಹೇಳಲಾಯಿತು. ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್ ಮಿಯ್ಯಾರು, ಶೋಭರಾಜ್ ಹೊಸ್ಮಾರು, ರಾಕೇಶ್ ಅಮೀನ್ ಸಾಣೂರು, ವನಿತಾ ಸುಧಾಕರ್ ಕಾರ್ಯಕ್ರಮಕ್ಕೆ ಸಹಕರಿಸಿದರು. ಕೋಶಾಧಿಕಾರಿ ಅರುಣ್ ಕುಮಾರ್‍ರವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸತೀಶ್ ಪೂಜಾರಿಯಯವರು ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!