Yuvavahini

JUN 23, 2019 1.58 PM IST

ಅತ್ಯುತ್ತಮ ಆರಂಭ, ಅಂತ್ಯ, ನಡುವೆ ಹೂರಣ ಅದೇ ಪರಿಣಾಮಕಾರಿ ಭಾಷಣ : ಸುಧಾಕರ್ ಕಾರ್ಕಳ

ಕೂಳೂರು : ಒಳ್ಳೆಯ ಆರಂಭ, ಒಳ್ಳೆಯ ಅಂತ್ಯ, ನಡುವೆ ಹೂರಣ ಅದೇ ಭಾಷಣ. ಎಂದು ಅಂತರರಾಷ್ಟ್ರೀಯ ಮಟ್ಟದ ಜೆಸಿಎ ತರಬೇತುದಾರರಾದ ಸುಧಾಕರ್ ಕಾರ್ಕಳ ತಿಳಿಸಿದರು.
ಅವರು ದಿನಾಂಕ 23.06.19 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ ನಡೆದ ಯುವಚೈತನ್ಯ- 2019-20 ಈ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು ಬಿಲ್ಲವ ಸಮುದಾಯದ ಉದ್ಧಾರಕ್ಕಾಗಿ ತಾನು ಇಂತಹ ತರಬೇತಿ ಕಾರ್ಯಕ್ರಮ ನಡೆಸಿಕೊಂಡು ಬಂದಿರುವುದಾಗಿಯೂ, ಮುಂದಿನ ದಿನಗಳಲ್ಲಿ ನಮ್ಮ ಸಮುದಾಯದವರೂ ಉತ್ತಮ ತರಬೇತುದಾರರಾಗಬೇಕು ಎಂದು ಆಶಿಸಿದರು. ಇವರ ಜೊತೆ ಇನ್ನೋರ್ವ ಜೆಸಿಎ ತರಬೇತುದಾರರಾದ ಗೋಪಕುಮಾರ್ ಮಲ್ಲೇಳಿ ಉಪಸ್ಥಿತರಿದ್ದರು. ಇಬ್ಬರೂ ಸೇರಿ ದೀಪ ಬೆಳಗಿಸುವುದರ ಮೂಲಕ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ತರಬೇತಿ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ಸದಸ್ಯರಿಗೂ , ಭಾಷಣ ಮಾಡುವಾಗ ಆಗುವ ಬದಲಾವಣೆ ಅದಕ್ಕೆ ಕಾರಣ, ಸಭಾ ಕಂಪನ ಹಾಗೂ ಅದನ್ನು ಹೇಗೆ ಹೋಗಲಾಡಿಸುವುದು ಎಂಬುದರ ಬಗ್ಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ತನಕ ತುಂಬಾ ಚೆನ್ನಾಗಿ ತರಬೇತಿ ನೀಡಿದರು. ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಎಲ್ಲರೂ ಸೇರಿ ಸುಧಾಕರ್ ಕಾರ್ಕಳ ಇವರನ್ನು ಸನ್ಮಾನಿಸಲಾಯಿತು ಹಾಗೂ ಗೋಪಕುಮಾರ್ ಮಲ್ಲೇಳಿ ಇವರಿಗೆ ಸ್ಮರಣಿಕೆ ಕೊಟ್ಟು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್, ಘಟಕದ ಸಲಹೆಗಾರರಾದ ನೇಮಿರಾಜ್, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಮಾಜಿ ಅಧ್ಯಕ್ಷರು ಪುಷ್ಪರಾಜ್ ಕುಮಾರ್, ಉಪಾಧ್ಯಕ್ಷೆ ಪವಿತ್ರ. ಯು. ಅಮೀನ್, ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್ ಹಾಗೂ 29 ಮಂದಿ ಸದಸ್ಯರು ಉಪಸ್ಥಿತರಿದ್ದರು. ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು. ಸಂಚಾಲಕ ಲತೀಶ್ ಪೂಜಾರಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!