ಯುವವಾಹಿನಿ (ರಿ) ಬೆಳ್ತಂಗಡಿ ಘಟಕದಿಂದ

ಪ್ರೇರಣಾ ನಮ್ಮಿಂದ ನಮಗಾಗಿ

ಬೆಳ್ತಂಗಡಿ : ಯುವವಾಹಿನ (ರಿ) ಬೆಳ್ತಂಗಡಿ ಘಟಕದ ಮಹಿಳಾ ಸದಸ್ಯರಿಗೆ ಮತ್ತು ಘಟಕದ ಕಾರ್ಯಕರ್ತರಿಗಾಗಿ ಪ್ರೇರಣಾ ನಮ್ಮಿಂದ ನಮಗಾಗಿ ಎಂಬ ಕಾರ್ಯಕ್ರಮವನ್ನು ದಿನಾಂಕ:23/06/2019 ರಂದು ಮಧ್ಯಾಹ್ನ ಗಂಟೆ 2.30 ಕ್ಕೆ ಸುವರ್ಣ ಆರ್ಕೇಡ್ ಬೆಳ್ತಂಗಡಿಯಲ್ಲಿ ನಡೆಯಿತು.ಮಹಿಳಾ ಸಮಿತಿಯ ಪ್ರಧಾನ ಸಂಚಾಲಕರು ಸುಜತಾ ಅಣ್ಣಿ ಪೂಜಾರಿ ಅವರ ಸ್ವಾಗತ ಭಾಷಣದೊಂದಿಗೆ ಪ್ರೇರಣೆಯ ಉದ್ಘಾಟನೆಯನ್ನು ಶ್ರೀಮತಿ ಸೇವಂತಿ (ಸಮೂಹ ಸಂಪನ್ಮೂಲ ವ್ಯಕ್ತಿ C R P ಪರೊಡಿತ್ತಾಯ ಕಟ್ಟೆ ಬಜಿರೆ )ಇವರು ದೀಪ ಬೆಳಗಿಸಿ ಹೆಣ್ಣು ಸಮಾಜದ ಪ್ರೇರಣಾ ಶಕ್ತಿಯಾಗಿ ಮೂಡಿ ಬರಬೇಕು. ಯಾವ ಕಾಲಕ್ಕೂ ತನ್ನೊಳಗಿನ ಆತ್ಮಸ್ಥೈರ್ಯ ಕಳೆದುಕೊಳ್ಳದೆ ಸಮಾಜ ಕಟ್ಟುವ ಕಾರ್ಯದಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ಉತ್ತಮ ಪ್ರೇರಣೆ ನೀಡಿದರು. ನಂತರ ಯುವವಾಹಿನಿಯ ಸಲಹೆಗಾರರೂ ಆಗಿರುವ ಸಂಪತ್ ಸುವರ್ಣ ಅವರು ಮಾತನಾಡಿ ನಮ್ಮ ದೇಶದಲ್ಲಿ ಮಹಿಳೆಯರು ರಾಜಕೀಯ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉನ್ನತ ಸ್ಥಾನದಲ್ಲಿರುವ ಬಗ್ಗೆ ತಿಳಿಸಿ ಇದೇ ರೀತಿ ನಮ್ಮ ಸಮಾಜದ ಮಹಿಳೆಯರು ಕೂಡ ಬೆಳೆಯಬೇಕೆಂದು ಪ್ರೇರಣೆ ನೀಡಿದರು.ಪ್ರೇರಣಾ ಶಕ್ತಿಯಾಗಿ ಘಟಕದ ಸಲಹೆಗಾರರು ಗುರುದೇವವಿವಿಧೋದ್ದೇಶ ಸಹಕಾರಿ ಸಂಘ ನಿ ಬೆಳ್ತಂಗಡಿ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿರುವ ಅಶ್ವಥ್ ಕುಮಾರ್ ಒಗ್ಗಟ್ಟು ಸಮಾಜದ ಬಹುದೊಡ್ಡ ಶಕ್ತಿ ಮಹಿಳೆಯರಲ್ಲಿ ಸಾಂಘಿಕ ಮನಸ್ಸಿದ್ದಾಗ ಶೋಷಣೆ ದೂರವಾಗಲು ಸಾಧ್ಯ.ಪ್ರಶ್ನಿಸುವ ಮತ್ತು ಹೋರಾಟದ ಮನೋಭಾವವನ್ನು ಮಹಿಳೆಯರು ರೂಢಿಸಿಕೊಳ್ಳಬೇಕು ಎಂದರು.ಘಟಕದ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ ಅಧ್ಯಕ್ಷತೆ ವಹಿಸಿದ್ದರು ಕಾರ್ಯದರ್ಶಿ ವಿಜಯ ಕುಮಾರ್ ಶಿರ್ಲಾಲ್ ಉಪಸ್ಥಿತರಿದ್ದರು.ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ನಿರ್ದೇಶಕಿ ವನಿತಾ ಜನಾರ್ದನ ವಂದಿಸಿದರು.ಸಭೆಯಲ್ಲಿ ಘಟಕದ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್ ಮುಂಡೂರು ಸದಾನಂದ ಉಂಗಿಲಬೈಲು ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ ಉಪಸ್ಥಿತರಿದ್ದರು.

One thought on “ಪ್ರೇರಣಾ ನಮ್ಮಿಂದ ನಮಗಾಗಿ

  1. ಉತ್ತಮ ಕಾರ್ಯಕ್ರಮ..
    ಅಭಿನಂದನೆಗಳು ಬೆಳ್ತಂಗಡಿ ಘಟಕ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!