Yuvavahini

JUL 07, 2019 2.19 PM IST

ಯುವವಾಹಿನಿ (ರಿ) ಸುರತ್ಕಲ್ ಘಟಕದ ಆತಿಥ್ಯದಲ್ಲಿ

ಏರ್ ಬಿರ್ಸೆರ್ ನಳಪರಿವಾರೊಡು ಹಾಗೂ ಸೌಂದರ್ಯ ಸ್ಪರ್ಧೆ

ಸುರತ್ಕಲ್ : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಅತಿಥ್ಯದಲ್ಲಿ ಫಾದರ್ಸ್ ಡೇ ಯ ಪ್ರಯುಕ್ತ ಯುವವಾಹಿನಿ ಅಂತರ್ ಘಟಕ ಪುರುಷರಿಗಾಗಿ ” ಏರ್ ಬಿರ್ಸೆರ್ ನಳ ಪಾರಿವಾರೊಡು” ಅಡುಗೆ ಸ್ಪರ್ಧೆಯನ್ನು ಹಾಗೂ ವಿವಿಧ ಘಟಕಗಳ ಮಹಿಳೆಯರಿಗಾಗಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಸೀರೆ ಮತ್ತು ಕೇಶವಿನ್ಯಾಸ ಸೌಂದರ್ಯ ಸ್ಪರ್ಧೆಯನ್ನು ಸುರತ್ಕಲ್ ತಾರಾ ಟವರ್ಸ್ ಸಭಾಂಗಣದಲ್ಲಿ ದಿನಾಂಕ 07.07.2019 ರಂದು ಅಯೋಜಿಸಲಾಯಿತು.

ಈ ಕಾರ್ಯಕ್ರಮವನ್ನು ಪಡುಬಿದ್ರಿಯ ಹೋಟೆಲ್ ಉದ್ಯಮಿ ವೈ.ಸುಕುಮಾರ್ ಉದ್ಘಾಟಿಸಿದರು. ಇಂದಿನ ಆಧುನಿಕ ಯುಗದಲ್ಲಿ ಪುರುಷರು ಕೂಡಾ ಕೆಲವೊಂದು ರುಚಿ-ರುಚಿಯಾದ ಅಡುಗೆಯನ್ನು ಮಾಡುವುದರಲ್ಲಿ ಪರಿಣಿತರಿದ್ದಾರೆ. ಅವರಿಗೊಂದು ಅವಕಾಶ ಸಿಕ್ಕಂತಾಗಿದೆ. ಈ ವಿನೂತನ ಕಾರ್ಯಕ್ರಮದ ಮೂಲಕ ಎಂದು ಸಂಘಟಕರನ್ನು ಶ್ಲಾಘಿಸಿದರು.
ಪುರುಷರ ಅಡುಗೆ ಸ್ಪರ್ಧೆಯು ನಡೆಯಿತು. ಅದೇ ಸಂದರ್ಭದಲ್ಲಿ ಮಹಿಳೆಯರು ಭಾರತೀಯ ಸಂಪ್ರದಾಯಿಕ ಸೀರೆ ಉಟ್ಟು, ವಿಶೇಷ ಕೇಶ ವಿನ್ಯಾಸದೊಂದಿಗೆ ಸಭಿಕರನ್ನು ರಂಜಿಸಿದರು. ಘಟಕದ ಮಹಿಳೆಯರಿಂದ ಪ್ರಾತ್ಯಾಕ್ಷಿಕೆಯಾಗಿ ಸೌಂದರ್ಯ ಸ್ಪರ್ಧೆಯ ವಿವಿಧ ಭಂಗಿಗಳು ಪ್ರದರ್ಶಿಸಲ್ಪಟ್ಟವು. ಸಭಿಕರಿಂದ ಮೆಚ್ಚುಗೆಯನ್ನು ಪಡೆದರು.

ಸೌಂದರ್ಯ ಸ್ಪರ್ಧೆಯ ತೀರ್ಪುಗಾರರಾಗಿ ಅನಿತಾ, ಕವಿತಾ ಮತ್ತು ಸೌಮ್ಯ ಬ್ಯುಟಿಷಿಯಷನ್ಸ್ ಭಾಗವಹಿಸಿದರು. ಪುರುಷರ ಅಡುಗೆ ಸ್ಪರ್ಧೆಯ ತೀಪುಗಾರರಾಗಿ ವೀಣಾಶೆಟ್ಟಿ, ಸುಖಾಲಾಕ್ಷಿ ಸುವರ್ಣ ಮತ್ತು ಸುಪ್ರೀತಾ ಕೋಟ್ಯಾನ್ ಭಾಗವಹಿಸಿದರು.

ಸಮಾರೋಪ ಸಮಾರಂಭದಲ್ಲಿ ಮಹಾಬಲ ಪೊಜಾರಿ ಕಡಂಬೋಡಿ, ಶ್ರೀಚಂದ್ರಶೇಖರ್ ಮುಕ್ಕ , ಸಂಚಾಲಕರಾದ ಸತೀಶ್ ಕೋಟ್ಯಾನ್ , ಕಾರ್ಯದರ್ಶಿ ದೀಪಕ್ ರಾಜ್ ಯು ಹಾಗೂ ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷೆ ಗುಣವತಿ ರಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ಇವರ ಅನುಪಸ್ಥಿತಿಯಲ್ಲಿ ಕಲಾವತಿ ನಡುಬೈಲು ಇವನ ಸನ್ಮಾನಿಸಲಾಯಿತು.


ಸೌಂದರ್ಯ ಸ್ಪರ್ಧೆಯ ವಿಜೇತರು.
ಪ್ರಥಮಾ – ಶ್ರೇಯಾ, ಬಜಪೆ ಘಟಕ,
ದ್ವಿತೀಯ – ಪ್ರತಿಭಾ ಮಂಗಳೂರು ಮಹಿಳಾ ಘಟಕ,
ತೃತೀಯ – ಶ್ರಾವ್ಯ ಬಜಪೆ ಘಟಕ,
ಪ್ರೋತ್ಸಾಕರ – ಪ್ರತೀಕ್ಷಾ – ಕಂಕನಾಡಿ ಘಟಕ

ಏರ್  ಬಿರ್ಸೆರ್ ನಳ ಪರಿವಾರಕೊಡು – ವಿಜೇತರು
ಪ್ರಥಮ – ಮಂಗಳೂರು ಯುವವಾಹಿನಿ ಘಟಕ,
ದ್ವಿತೀಯ – ಅಡ್ವೆ ಯುವವಾಹಿನಿ ಘಟಕ
ತೃತೀಯ – ಕೆಂಜಾರು ಕರಂಬಾರು ಘಟಕ.


ಮಂಗಳೂರು ಘಟಕ, ಮಂಗಳೂರು ಮಹಿಳಾ ಘಟಕ, ಬಂಟ್ವಾಳ ಘಟಕ, ಪಡುಬಿದ್ರೆ ಘಟಕ, ಬಜಪೆ ಘಟಕ, ಕಂಕನಾಡಿ ಘಟಕ, ಕೂಳೂರು ಘಟಕ, ಕೊಲ್ಯ ಘಟಕ, ಪಣಂಬೂರು ಕುಳಾಯಿ ಘಟಕ, ಅಡ್ವೆ ಘಟಕ, ಕೆಂಜಾರು ಕರಂಬಾರು ಘಟಕ, ಎಕ್ಕಾರು ಪೆರ್ಮುದೆ ಘಟಕ, ಪುತ್ತೂರು ಘಟಕಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಅಪ್ಪಂದಿರಿಗಾಗಿ ಬಜಪೆ ಘಟಕದ ಗ್ರೀಷ್ಮಾ ಹಾಡಿರುವ ಅರ್ಥಪೂರ್ಣ ಹಾಡು ಸರ್ವರ ಮನಸೂರೆಗೊಂಡಿತು.
.ವಿನೂತನ ಶೈಲಿಯ ಈ ಕಾರ್ಯಕ್ರಮವು ಎಲ್ಲರಿಂದ ಮೆಚ್ಚುಗೆಗಳಿಸಿತು. ಕೇಂದ್ರ ಸಮಿತಿಯ ಹೆಚ್ಚಿನ ಪೂರ್ವಾಧ್ಯಕ್ಷರುಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.ಗುಣವತಿ ರಮೇಶ್ ಸ್ವಾಗತಿಸಿದರು. ಬಾಸ್ಕರ್ ಸಾಲ್ಯಾನ್ ನಿರೂಪಿಸಿದರು. ಕಾರ್ಯಕ್ರಮದ ಸಂಚಾಲಕರಾದ  ಸತೀಶ್ ಕೋಟ್ಯಾನ್ ವಂದನಾರ್ಪಣೆ ಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!