ಯುವವಾಹಿನಿ ಕೂಳೂರು ಘಟಕದ ವತಿಯಿಂದ

ಐ. ಎ. ಎಸ್, ಕೆ. ಎ. ಎಸ್ ಪ್ರೇರಣಾ ಶಿಬಿರ

ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 13.07.19 ರಂದು ಐ. ಎ. ಎಸ್, ಕೆ. ಎ. ಎಸ್ ಪ್ರೇರಣಾ ಶಿಬಿರ ಕಾರ್ಯಕ್ರಮವು ಸರ್ಕಾರಿ ಪದವಿ ಪೂರ್ವ ಕಾಲೇಜು, ಕಾವೂರು ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಡೆಸಿಕೊಡಲು ಸರ್ವಜ್ಞ ಐ. ಎ. ಎಸ್ ಅಕಾಡೆಮಿಯ ತರಬೇತುದಾರರಾದ ಸುರೇಶ್.ಎಮ್.ಎಸ್ ರವರು ಆಗಮಿಸಿದ್ದರು.
ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಪ್ರಾರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ತಾರಾ. ಯು. ರಾವ್ ರವರು ಮಾತನಾಡಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಆಶಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸುರೇಶ್. ಎಮ್. ಎಸ್ ರವರು ತುಂಬಾ ಒಳ್ಳೆಯ ರೀತಿಯಲ್ಲಿ ಕಾರ್ಯಕ್ರಮ ನಡೆಸಿಕೊಟ್ಟು ಸರ್ಕಾರಿ, ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು, ಅವಕಾಶಗಳು ಮತ್ತು ಪೂರ್ವ ತಯಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ರವರು ಮಾತನಾಡಿ ವಿದ್ಯಾರ್ಥಿಗಳು ಐ. ಎ. ಎಸ್, ಕೆ. ಎ. ಎಸ್ ಪರೀಕ್ಷೆ ಬರೆದು, ಉತ್ತೀರ್ಣರಾಗುವಂತೆ ಆಶಿಸಿದರು. ಕಾರ್ಯಕ್ರಮದಲ್ಲಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಅಶೋಕ್, ಘಟಕದ ಗೌರವ ಸಲಹೆಗಾರರಾದ ನೇಮಿರಾಜ್, ಘಟಕದ ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್, ವಿದ್ಯಾರ್ಥಿ ಸಂಘಟನಾ ನಿರ್ದೇಶಕಿ ಸುಶ್ಮಾ, ಘಟಕದ ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಸಂಘಟನಾ ಕಾರ್ಯದರ್ಶಿ ನಿಶಿತ್ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 100 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಘಟಕದ ಅಧ್ಯಕ್ಷರು ಸುರೇಶ್. ಎಮ್. ಎಸ್ ರವರಿಗೆ ಸ್ಮರಣಿಕೆ ಕೊಟ್ಟು ಗೌರವಿಸಿದರು.
ಅಶೋಕ್ ರವರು ಸ್ವಾಗತಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸುಶ್ಮಾ ರವರು ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!