ಯುವವಾಹಿನಿಯ 35ನೇ ನೂತನ ಘಟಕ

ಯುವವಾಹಿನಿ(ರಿ) ಮೂಡಿಗೆರೆ ಘಟಕ ಉದ್ಘಾಟನೆ

ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ(ರಿ) ಮೂಡಿಗೆರೆ ಘಟಕ ಉದ್ಘಾಟನೆಸಮಾರಂಭವು ದಿನಾಂಕ 14.07.2019 ರಂದು‌‌ ಮೂಡಿಗೆರೆ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಯುವವಾಹಿನಿ ಸಂಸ್ಥೆಯು ಯುವಜನರ ಪ್ರೇರಕ ಶಕ್ತಿಯಾಗಿದೆ, ಮೂಡಿಗೆರೆಯಲ್ಲಿ ಯುವವಾಹಿನಿ ಘಟಕ ಸ್ಥಾಪನೆಯಾಗಿರುವುದು ಅತ್ಯಂತ ಸಂತಸ ತಂದಿದೆ ಎಂದು
ಮೂಡಿಗೆರೆ ಬ್ರಹ್ಮಶ್ರೀ‌ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ದೇಶದಲ್ಲಿ ಯುವಕರೇ ದೇಶದ ಜೀವನಾಡಿಯಾಗಿದ್ದು, ಯುವ ಸಮುದಾಯವನ್ನು ಸಮಾಜಮುಖಿಯನ್ನಾಗಿಸುವುದು ಬಹುದೊಡ್ಡ ಸವಾಲಾಗಿದೆ. ಯುವಜನಾಂಗಕ್ಕೆ ಉದ್ಯೋಗ, ಸಹಕಾರ ತತ್ವ ಹಾಗೂ ಸಹಬಾಳ್ವೆ ಯನ್ನು ಕಲಿಸಿ ಸರಿಯಾದ ದಾರಿಯಲ್ಲಿ ನಡೆಯುವಂತೆ ಮಾಡುವಲ್ಲಿ ಯುವವಾಹಿನಿ ಸಂಸ್ಥೆಯ ಪಾತ್ರ ಅಮೂಲ್ಯವಾದುದು ಎಂದರು.

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ಯೋಗೀಶ್ ಪೂಜಾರಿ ನೇತ್ರತ್ವದ ತಂಡಕ್ಕೆ ಪ್ರತಿಜ್ಞಾವಿಧಿ ಬೋಧಿಸಿ ಶುಭ ಹಾರೈಕೆ ಮಾಡಿದರು.
ಯುವವಾಹಿನಿ‌ ಮೂಡಿಗೆರೆಯ ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಯೋಗೀಶ್ ಪೂಜಾರಿಯವರು ತನಗೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಮೂಡಿಗೆರೆ ಘಟಕವನ್ನು‌ ಯಶಸ್ವಿಯಾಗಿ ಮುನ್ನಡೆಸುವುದಾಗಿ ತಿಳಿಸಿದರು.
ಮೂಡಿಗೆರೆ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಗೌರವಾಧ್ಯಕ್ಷರಾದ ಚಂದ್ರು ಸಾಲ್ಯಾನ್, ಚಿಕ್ಕಮಗಳೂರು ‌ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಎಚ್.ಎಮ್.ಸತೀಶ್ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಮೂಡಿಗೆರೆ ಘಟಕದ ಸಲಹೆಗಾರರಾದ ಸಾಧು ಪೂಜಾರಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.


ಯುವವಾಹಿನಿ ಕೇಂದ್ರ ಸಮಿತಿಯ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ 16 ಘಟಕದ ಅಧ್ಯಕ್ಷರುಗಳನ್ನು ಹಾಗೂ ಯುವವಾಹಿನಿಯ ವಿವಿಧ ಘಟಕಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳನ್ನು ಗೌರವಿಸಲಾಯಿತು.
ನರೇಶ್ ಕುಮಾರ್ ಸಸಿಹಿತ್ಲು ಪ್ರಸ್ತಾವನೆ ಮಾಡಿದರು, ಕೇಂದ್ರ ಸಮಿತಿಯ ಸಂಘಟನಾ‌ ಕಾರ್ಯದರ್ಶಿ ನಾಗೇಶ್ ಬಲ್ನಾಡ್ ನೂತನ ಪದಾಧಿಕಾರಿಗಳನ್ನು ಸಭೆಗೆ ಪರಿಚಯಿಸಿದರು. ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್ ಸ್ವಾಗತಿಸಿದರು. ಮೂಡಿಗೆರೆ ಘಟಕದ ನೂತನ ಕಾರ್ಯದರ್ಶಿ ಪ್ರಥ್ವೀ ಸಾಗರ್ ಪೂಜಾರಿ ಧನ್ಯವಾದ ನೀಡಿದರು, ಕೇಂದ್ರ ಸಮಿತಿಯ ಸಮಾವೇಶ ನಿರ್ದೇಶಕರಾದ ಶಶಿಧರ ಕಿನ್ನಿಮಜಲು ಕಾರ್ಯಕ್ರಮ ನಿರ್ವಹಿಸಿದರು

2 thoughts on “ಯುವವಾಹಿನಿ(ರಿ) ಮೂಡಿಗೆರೆ ಘಟಕ ಉದ್ಘಾಟನೆ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!