Yuvavahini

JUL 28, 2019 4.30 PM IST

ಯುವವಾಹಿನಿ (ರಿ ) ಬಜಪೆ ಘಟಕದ ವತಿಯಿಂದ ಆಟಿದ ನೆಂಪು

ಬಜಪೆ : ಯುವವಾಹಿನಿ (ರಿ ) ಬಜಪೆ ಘಟಕ ಇವರ ಅತಿಥ್ಯದಲ್ಲಿ ಮತ್ತು ಬ್ರಹ್ಮಶ್ರೀ ನಾರಾಯಣ ಸೇವಾ ಸಂಘ ಬಜಪೆ -ಕರಂಬಾರು ಇವರ ಆಶ್ರಯದಲ್ಲಿ , ಆಟಿದ ನೆಂಪು -2019 ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ,ವಿದ್ಯಾನಿಧಿ ವಿತರಣಾ ಕಾರ್ಯಾಕ್ರಮವು ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ನಡೆಯಿತು .ಈ ಕಾರ್ಯಕ್ರಮವನ್ನು ಮರದ ಸೆಮಿಗೆ ಮಣೆಯಲ್ಲಿ ಸೆಮಿಗೆ ಒತ್ತುವ ಮೂಲಕ ಬಿರುವೆರ್ ಕುಡ್ಲ ಬಜಪೆ ವಲಯದ ಉಪಾದ್ಯಕ್ಷರು ಹಾಗೂ ವೃತ್ತಿಯಲ್ಲಿ ಯುವ ವಕೀಲರಾದ ಚಂದ್ರಶೇಕರ್ ಎಂ .ಅಮಿನ್ ಚಾಲನೆ ನೀಡಿ ಪ್ರತಿಬಾ ಪುರಸ್ಕಾರ ಹಾಗೂ ವಿದ್ಯಾನಿಧಿ ಪಡೆದ ವಿದ್ಯಾರ್ಥಿಗಳಿಗೆ ಹಿಂದಿನ ದಿನಗಳಲ್ಲಿ ವಿದ್ಯಾಭ್ಯಾಸ ಪಡೆಯಲು ಪಟ್ಟ ಕಷ್ಟಕರದ ದಿನಗಳು ಹಾಗೂ ಈಗಿನ ದಿನಗಳಲ್ಲಿ ವಿದ್ಯಾಬ್ಯಾಸ ಮುಂದುವರಿದ ರೀತಿ ,ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟುವಂತೆ ,ಹಾಗೂ ವಿದ್ಯಾರ್ಥಿಗಳ ಮುಂದಿನ ಭವಿಶ್ಯ ಉಜ್ವಲವಾಗುವಂತೆ ಉದ್ಘಾಟಣಾ ಭಾಷಣದಲ್ಲಿ ಹೇಳಿದರು .
ಅತಿಥಿಗಳಾಗಿ ಆಗಮಿಸಿದ ಮಾಧವ ಅಮಿನ್ ದೊಡ್ಡಿಕಟ್ಟ ಬಜಪೆ , ಸಂಜೀವಿನಿ ಆರ್ .ಕೆಂಜಾರ್ ಇವರು ಹಿಂದಿನ ಕಾಲದ ಆಟಿಯ ಕಷ್ಟಕರದ ದಿನಗಳನ್ನು ನೆನೆಪಿಸಿದರು .ಬಜಪೆ ಘಟಕದ ಸಲಹೆಗಾರರಾದ ಪರಮೆಶ್ವರ ಪೂಜಾರಿ ಬಜಪೆ ಘಟಕ ನಡೆಸಿದ ಉತ್ತಮ ಕಾರ್ಯಕ್ರಮಗಳನ್ನು ಶ್ಲಾಘಿಸಿದರು .ಸಭೆಯ ಅಧ್ಯಕ್ಷತೆ ವಹಿಸಿಕೊಂಡ ಬಜಪೆ ಯುವವಹಿನಿ ಅಧ್ಯಕ್ಷರಾದ ಸಂಧ್ಯಾ ಕುಳಾಯಿ ಮಾತನಾಡಿ ಈ ಅರ್ಥಪೂರ್ಣವಾದ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ಇವರನ್ನು ಎಲ್ಲಾ ಸದಸ್ಯರು ಸೇರಿ ಸನ್ಮಾನಿಸಲಾಯಿತು .ಕಾಯ್ರಕ್ರಮದ ಸಂಚಾಲಕರಾದ ಮಾಧವ ಸಾಲ್ಯಾನ್ ವೇದಿಕೆಯಲ್ಲಿ ಉಪಸ್ತಿತರಿದ್ದರು .
ಅಶೊಕ್ ಕುಮಾರ್ ಮುರನಗರ ಕಾರ್ಯಕ್ರಮ ನಿರೂಪಿಸಿದರು , ಗ್ರೀಷ್ಮಾ ಎಕ್ಕಾರು ಪ್ರಾರ್ಥಿಸಿ , ರವೀಂದ್ರಪೂಜಾರಿ ಸ್ವಾಗತಿಸಿ ,ಪ್ರತಿಭಾ ಪುರಸ್ಕರ ವಿದ್ಯಾರ್ಥಿಗಳ ಹೆಸರನ್ನು ಯೊಗೀಶ್ ಪೂಜಾರಿ ಕರಂಬಾರು ,ವಿದ್ಯಾನಿಧಿ ವಿದ್ಯಾರ್ಥಿಗಳ ಹೆಸರನ್ನು ವಿದ್ಯಾನಿಧಿ ನಿರ್ದೆಶಕ ಚಿತ್ತರಂಜನ್ ಸಾಲ್ಯಾನ್ ಸಭೆಗೆ ವಾಚಿಸಿದರು .ಕೊನೆಯಲ್ಲಿ ಕಾರ್ಯಾದರ್ಶಿ ರೋಹಿತ್ ಪೂಜಾರಿ ಧನ್ಯವಾದಗೈದರು .
ಸಭಾಕಾರ್ಯಕ್ರಮದ ನಂತರ ಯುವವಾಹಿನಿ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು .ಚಂದ್ರಶೇಖರ ಪೂಜಾರಿ ನಿರೂಪಿಸಿದರು .ಸದಸ್ಯರು ಮನೆಯಲ್ಲಿ ಮಾಡಿಕೊಂಡು ಬಂದ ವಿವಿದ ರೀತಿಯ ಆಟಿ ತಿಂಗಳ ತಿಂಡಿ ತಿನಿಸುಗಳನ್ನು ಸಭೆಗೆ ಬಡಿಸಲಾಯಿತು .

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!