Yuvavahini

JUL 31, 2019 5.19 AM IST

ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್

ಯುವವಾಹಿನಿಯಂತಹ ಸಂಘಟನೆಯಿಂದಾಗಿ, ದೇಶಕ್ಕಾಗಿ ಪ್ರಾಣ ಕೊಟ್ಟ ಯೋಧರು ಅಮರರಾಗುತ್ತಾರೆ.-ಲೆಫ್ಟಿನೆಂಟ್ ಕರ್ನಲ್ ಗ್ರೇಶಿಯಸ್ ಸೀಕ್ವೇರಾ

ಕೂಳೂರು : ಯುವವಾಹಿನಿಯಂತಹ ಸಂಘಟನೆ ಇರುವುದರಿಂದ ದೇಶಕ್ಕಾಗಿ ಪ್ರಾಣ ಕೊಟ್ಟ ಯೋಧರು ಅಮರರಾಗುತ್ತಾರೆ. ನಾನು ಸತ್ತರೆ ಸೈನಿಕನಾಗಿಯೇ ಸಾಯುತ್ತೇನೆ ಎಂದು ಲೆಫ್ಟಿನೆಂಟ್ ಕರ್ನಲ್ ಗ್ರೇಶಿಯಸ್ ಸಿಕ್ವೇರ ಹೇಳಿದರು.

ಅವರು ದಿನಾಂಕ 31.07.19 ರಂದು ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ನಡೆದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು. ಇನ್ನೋರ್ವ ಅತಿಥಿ ಸುಬೇದಾರ್ ಜೋಧಾ ಸಿಂಗ್ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.


ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಉದಯ್ ಕುಮಾರ್ ಹಾಗೂ ಮನೋಜ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ವೀರ ಮರಣ ಹೊಂದಿದ ಯೋಧ ಉದಯ್ ಕುಮಾರ್ ಅವರ ಪತ್ನಿ ವಸಂತಿ ಇವರನ್ನು ಅಭಿನಂದಿಸಿ, ವಿದ್ಯಾ ನಿಧಿ ನೆಲೆಯಲ್ಲಿ ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಘಟಕದ ವತಿಯಿಂದ 10,000 ರೂ ಮೊತ್ತದ ಚೆಕ್ ನ್ನು ಹಸ್ತಾಂತರಿಸಿದರು. ಮುಖ್ಯ ಅತಿಥಿಗಳು ಅಮರ್ ಜವಾನ್ ಗೆ ದೀಪ ಹಚ್ಚಿ, ಹೂ ಹಾಕುವ ಮೂಲಕ ಹುತಾತ್ಮ ಯೋಧರಿಗೆ ಗೌರವ ಅರ್ಪಿಸಿದರು. ಸದಸ್ಯರೆಲ್ಲರೂ ಯೋಧರ ಭಾವಚಿತ್ರಕ್ಕೆ ದೀಪ ಹಚ್ಚಿ, ಹೂ ಹಾಕಿ ಗೌರವಿಸಿದರು. ಎಲ್ಲರೂ ಸೇರಿ ಹುತಾತ್ಮ ಯೋಧರೆಲ್ಲರಿಗೂ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಘಟಕದ ಗೌರವ ಸಲಹೆಗಾರರಾದ ನೇಮಿರಾಜ್, ಮಾಜಿ ಅಧ್ಯಕ್ಷರು ಹಾಗೂ ನಿವೃತ್ತ ಯೋಧರಾದ ಪುಷ್ಪರಾಜ್ ಕುಮಾರ್, ಕಾರ್ಯಕ್ರಮದ ಸಂಚಾಲಕರಾದ ಲತೀಶ್ ಪೂಜಾರಿ, ಘಟಕದ ಮಾರ್ಗದರ್ಶಕರಾದ ಜಯಾನಂದ ಅಮೀನ್, ಸಂಘಟನಾ ಕಾರ್ಯದರ್ಶಿ ನಿಶಿತ್ ಉಪಸ್ಥಿತರಿದ್ದರು.
ಅಧ್ಯಕ್ಷರು ಸ್ವಾಗತಿಸಿದರು. ಘಟಕದ ಸ್ಥಾಪಕ ಅಧ್ಯಕ್ಷರಾದ ಸುಜಿತ್ ರಾಜ್ ನಿರೂಪಿಸಿದರು. ಘಟಕದ ಸದಸ್ಯ ಹೇಮಂತ್ ಪ್ರಾರ್ಥಿಸಿದರು. ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!