ಯುವವಾಹಿನಿ (ರಿ) ಮಂಗಳೂರು ಘಟಕ

ಲಿಂಗ ಸಮಾನತೆ : ವಿಶೇಷ ಉಪನ್ಯಾಸ

ಮಂಗಳೂರು : ದಿನಾಂಕ 13.08.2019 ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ ಜೆಸಿಐ ಸ್ಮಿತಾ ಪಿ. ಹೊಳ್ಳರವರು ಲಿಂಗ ಸಮಾನತೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಹುಟ್ಟು ಮತ್ತು ಸಾವು ಭಗವಂತನ ನಿರ್ಣಯಗಳು. ಅದರ ನಡುವಿನ ಜೀವನ ನಮ್ಮದು. ಭಗವಂತನು ನಮಗೆ ನೀಡಿರುವ ಅತ್ಯುತ್ತಮವಾದ ಜೀವನವನ್ನು ಯಾವುದೇ ಬೇದ ಭಾವ ತೋರದೆ, ಸಮಚಿತ್ತದಿಂದ, ತಾರತಮ್ಯವಿಲ್ಲದೆ, ಸಹಬಾಳ್ವೆಯನ್ನು ನಡೆಸುವುದೇ ಜೀವನದ ಬಲು ದೊಡ್ಡ ಸಾಧನೆ ಎಂದರು. ಸ್ಮಿತಾರವರನ್ನು ಮಾಜಿ ಅಧ್ಯಕ್ಷರಾದ ಜಯರಾಮ್ ಕಾರಂದೂರುರವರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು ಹಾಗೂ ಅವರಿಗೆ ಸಹಕಾರ ನೀಡಿದ ಜೆಸಿಐ ಶರತ್ ಕುಮಾರ್ ರವರನ್ನು ಯಶವಂತ ಪೂಜಾರಿಯವರು ಅಭಿನಂದಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭೆಯ ಅಧ್ಯಕ್ಷತೆಯನ್ನು ಶ್ರೀ ಕೆ. ಆರ್. ಲಕ್ಷ್ಮೀನಾರಾಯಣರವರು ವಹಿಸಿದ್ದರು. ಗತಸಭೆಯ ವರದಿಯನ್ನು ಕಾರ್ಯದರ್ಶಿ ಗಣೇಶ್ ವಿ. ಕೋಡಿಕಲ್ ರವರು ಓದಿದರು. ನಿಕಟಪೂರ್ವ ಅಧ್ಯಕ್ಷರಾದ ನವೀನ್ ಚಂದ್ರ, ಉಪಾಧ್ಯಕ್ಷರಾದ ಚಂದ್ರ ಶೇಖರ್ ಕರ್ಕೇರ ಮತ್ತು ಸಮಾವೇಶದ ಸಂಚಾಲಕರಾದ ಮೋಹನದಾಸ ಮಾಲೆಮಾರ್ ರವರು ಉಪಸ್ಥಿತರಿದ್ದರು. ಸಿಂಚನ ವಿಶೇಷಾಂಕದ ವರದಿಯನ್ನು ಹರೀಶ್ ಪಚ್ಚನಾಡಿ ಯವರು ನೀಡಿದರು.
ದಿನಾಂಕ 11.8 2019 ರಂದು ಪುತ್ತೂರಿನಲ್ಲಿ ನಡೆದ ಯುವವಾಹಿನಿ (ರಿ) ಕೇಂದ್ರ ಸಮಿತಿ ಯ 32ನೇ ವಾರ್ಷಿಕ ಸಮಾವೇಶ ದ ಅಚ್ಚು ಕಟ್ಟುತನ, ಶಿಸ್ತು, ಆತಿಥ್ಯ, ಸಮಯಪಾಲನೆ ಮತ್ತು ಸಮಾವೇಶ ನಿರೂಪಣೆ ಬಗ್ಗೆ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದರು. ಅಭೂತಪೂರ್ವ ಜನಪ್ರಿಯತೆ ಗಳಿಸಿದ ಸಮಾವೇಶದ ಯಶಸ್ಸಿಗೆ ಅವಿರತವಾಗಿ ಶ್ರಮಿಸಿದ ಕೇಂದ್ರ ಸಮಿತಿಯ ಹಾಗೂ ಪುತ್ತೂರು ಘಟಕದ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು. ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾದ ಶ್ರೀ ನರೇಶ್ ಕುಮಾರ್ ಸಸಿಹಿತ್ಲು ಮತ್ತು ಪದಾಧಿಕಾರಿಗಳಿಗೆ ಸದಸ್ಯರೆಲ್ಲರೂ ಶುಭ ಹಾರೈಸಿದರು. ಪ್ರಕ್ರೃತಿ ವಿಕೋಪದಿಂದ ಉಂಟಾದ ತೀವ್ರ ಹಾನಿ ಹಾಗೂ ಸಾವಿಗೀಡಾದ ಬಂಧುಗಳ ಆತ್ಮಕ್ಕೆ ಚಿರ ಶಾಂತಿಯನ್ನು ದೇವರು ಕರುಣಿಸಲೆಂದು ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಸಂತೋಷ್ ಕುಮಾರ್ ರವರು ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುವುದರೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!