ಯುವವಾಹಿನಿಯ ಮುಕುಟದ 32ನೇ ಗರಿ

ನರೇಶ್ ಕುಮಾರ್ ಸಸಿಹಿತ್ಲು

ಅದು 1983 ರ ಸೆಪ್ಟೆಂಬರ್ 29 ಶ್ರೀಮತಿ ಪುಷ್ಪ ಮತ್ತು ಗೋಪಾಲ್ ಕುಕ್ಯಾನ್ ದಂಪತಿ ಮಗನಾಗಿ ಕಡಲ ತಡಿಯ ಸುಂದರ ದ್ವೀಪ ಪ್ರದೇಶ ಸಸಿಹಿತ್ಲು ಎಂಬ ಗ್ರಾಮದಲ್ಲಿ ಜನಿಸಿದ ಕುವರನೆ ಯುವವಾಹಿನಿಯ 32ನೇ ನಾಯಕ ನರೇಶ್ ಕುಮಾರ್ ಸಸಿಹಿತ್ಲು
ವೃತ್ತಿಯಲ್ಲಿ ಆರೋಗ್ಯ ಇಲಾಖೆಯ ಯೋಜನೆ ಯಿಂದರ ವ್ಯವಸ್ಥಾಪಕರಾಗಿರುವ ನರೇಶ್ ಕುಮಾರ್ ಅವರು, ಪ್ರವೃತ್ತಿಯಲ್ಲಿ ಲೇಖಕ, ನಾಟಕಕಾರ, ನಿರ್ದೇಶಕ, ನೃತ್ಯಪಟುವಾಗಿ ಗುರುತಿಸಿಕೊಂಡವರು. ಮೂಲ ಜಾನಪದ ಕುಣಿತಗಳ ಅಧ್ಯಯನ, ತರಭೇತಿ ಮತ್ತು ಪ್ರದರ್ಶನದ ವಿಶೇಷ ಆಸಕ್ತಿ ಹೊಂದಿರುವ ಇವರು, ನೇಪಾಳ, ಅಸ್ಸಾಂ, ಒರಿಸ್ಸಾ, ದೆಹಲಿ ಸಹಿತ ದೇಶದ ಹತ್ತಕ್ಕೂ ಅಧಿಕ ರಾಜ್ಯದಲ್ಲಿ ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಾರ್ಯಕ್ರಮ ನೀಡಿದ್ದಾರೆ. ಇದಲ್ಲದೆ ಚಂದನ ದೂರದರ್ಶನ ವಾಹಿನಿಯಲ್ಲಿ ಐದು ಬಾರಿ ತುಳು ಕಾರ್ಯಕ್ರಮ ನೀಡಿದ ಹಿರಿಮೆ ಇವರದ್ದು. ಒರಿಸ್ಸಾದ ಭುವನೇಶ್ವರದಲ್ಲಿ ನಡೆದಿದ್ದ ಅಂತರ್ ರಾಜ್ಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಭಾಗವಹಿಸಿದ್ದ ಇವರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಒಂದು ತಿಂಗಳ ಭಜನಾ ಕಮ್ಮಟದಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಿ ಭಾಗವಹಿಸಿದ್ದಾರೆ. 100 ಕ್ಕೂ ಅಧಿಕ ಶಾಲಾ ಕಾಲೇಜುಗಳ ಸಾವಿರಾರು ಮಂದಿ ವಿದ್ಯಾರ್ಥಿಗಳಿಗೆ ಜಾನಪದ ನೃತ್ಯ ತರಭೇತಿ ನೀಡಿರುವ ನರೇಶ್ ಕುಮಾರ್ ಇವರು, ಮಕ್ಕಳ ಮಾನಸಿಕ ಬಲಪ್ರವರ್ಧನೆಯನ್ನು ಸಾಂಸ್ಕೃತಿಕ ಚಟುವಟಿಕೆ ಮೂಲಕ ಪರಿಣಾಮಕಾರಿಯಾಗಿ ಮಾಡಲು ಸಾಧ್ಯ ಎನ್ನುವುದನ್ನು ಸಾಬೀತು ಪಡಿಸುವ ಪ್ರಯತ್ನದಲ್ಲಿದ್ದು ಇದಕ್ಕಾಗಿ ಫೇಸ್ ಎನ್ನುವ ಟ್ರಸ್ಟ್ ಕಟ್ಟಿ ಈ ಮೂಲಕ ಹತ್ತಾರು ಕಾರ್ಯಕ್ರಮ ಉಚಿತ ಕೌನ್ಸಿಲಿಂಗ್ ಸೆಂಟರ್ ನಡೆಸುತ್ತಿದ್ದಾರೆ. ತಿಂಗೋಳ್ದ ಬೊಲ್ಪು ಎನ್ನುವ ತುಳು ಕಥಾ ಸಂಕಲನ ಪ್ರಕಟಿಸಿರುವ ಇವರು, ಬೀರೆದ ಡೆನ್ನಾನ ಎನ್ನುವ ತುಳು ಜಾನಪದ ಶೈಲಿಯ ಹಾಡುಗಳ ಸಿ.ಡಿ ನಿರ್ಮಾಣ ಮಾಡಿದ್ದಾರೆ. ಜ್ಯೋತಿರ್ನಾದ, ಬ್ರಹ್ಮಶ್ರೀ ನಾರಾಯಣಗುರು ಮುಂತಾದ ಭಜನಾ ಸಿ.ಡಿಗಳಿಗೆ ಗೀತಾ ಸಾಹಿತ್ಯ ಒದಗಿಸಿದ್ದು, 12 ತುಳು ನಾಟಕ ರಚಿಸಿದ್ದಾರೆ. ಐದು ತುಳು ಸಿನಿಮಾದಲ್ಲಿ ನಟಿಸಿರುವ ಇವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ. ಅಲ್ಲದೆ ಮಂಗಳಾದೇವಿ ಲಯನ್ಸ್ ಕ್ಲಬ್ ಸಂಸ್ಥೆಯಲ್ಲಿ ಕಾರ್ಯದರ್ಶಿಯಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಸಸಿಹಿತ್ಲು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಇವರದ್ದು. ಇವರಿಗೆ ಭಾರತೀಯ ಯುವಜನ ಸೇವಾ ಸಂಘವು 2002ರಲ್ಲಿ ಬಸವಶ್ರೀ ರಾಜ್ಯ ಯುವ ಪ್ರಶಸ್ತಿ ಹಾಗೂ ಯುವವಾಹಿನಿ ಸಂಸ್ಥೆ 2011 ರಲ್ಲಿ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ, ಮತ್ತು ಇವರ ಸಾಹಿತ್ಯಿಕ ಸಾಂಸ್ಕೃತಿಕ ಸೇವೆಯನ್ನು ಗುರುತಿಸಿ ಕರ್ನಾಟಕ ಏಕೀಕರಣ ಪ್ರಶಸ್ತಿ ವಿಜೇತ ಕಿನ್ನಿಗೋಳೀಯ ಯುಗಪುರುಷ ಸಂಸ್ಥೆಯು 2019ನೇ ಸಾಲಿನ ಯುಗ ಪುರುಷ ರಾಜ್ಯೋತ್ಸವ ಪ್ರಶಸ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತವು 2018 ರಲ್ಲಿ ಜಿಲ್ಲಾ ಯುವ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಸ್ತುತ ಬಬ್ಲಿ ಸ್ಮರಣಿಕೆಗಳ ಮಳಿಗೆ ಎನ್ನುವ ತನ್ನ ಸ್ವಂತ ಉದ್ದಿಮೆ ನಡೆಸುತ್ತಿದ್ದಾರೆ.
ಯುವವಾಹಿನಿ ಸಸಿಹಿತ್ಲು ಘಟಕದ ಅಧ್ಯಕ್ಷರಾಗಿ, ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯದರ್ಶಿಯಾಗಿ, ಸಮಾವೇಶ ನಿರ್ದೇಶಕರಾಗಿ, ಸಿಂಚನ ಉಪ ಸಂಪಾದಕರಾಗಿ, ವಿಶುಕುಮಾರ್ ದತ್ತಿನಿಧಿ ಸಂಚಾಲಕರಾಗಿ, ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ ಕಳೆದ ಇಪ್ಪತ್ತು ವರ್ಷಗಳಿಂದ ಯುವವಾಹಿನಿಯ ಸದಸ್ಯರಾಗಿ ಹಲವು ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಹಿರಿಮೆ ಇವರದ್ದು. ಮಿತ ಭಾಷಿ ಹಿತ ನುಡಿ ಸರಳ ವ್ಯಕ್ತಿತ್ವದ ಯುವಕನೇ ಯುವವಾಹಿನಿಯ ಮುಕುಟದ 32ನೇ ಗರಿ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!