Yuvavahini

OCT 10, 2019 5.59 AM IST

ಯುವವಾಹಿನಿ (ರಿ) ಮಂಗಳೂರು ಘಟಕ

ಮಂಗಳೂರು ದಸರಾ ಶೋಭಾಯಾತ್ರೆ ಯಲ್ಲಿ ಶರಬತ್ ಸೇವೆ

ಯುವವಾಹಿನಿ (ರಿ) ಮಂಗಳೂರು ಘಟಕ ವತಿಯಿಂದ ವಿಶ್ವ ವಿಖ್ಯಾತ ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಸತತ 8ನೇ ವರ್ಷದ ಶರಬತ್ ಸೇವೆಯು ದಿನಾಂಕ 08.10.2019ರಂದು ನಡೆಯಿತು. ಶರಬತ್ ಸೇವೆಯ ಉದ್ಘಾಟನೆಯನ್ನು ನಮಗೆ ಸ್ಥಳಾವಕಾಶ ಒದಗಿಸಿಕೊಟ್ಟ
ಎಸ್ಎಲ್ ಶೇಟ್ ಡೈಮಂಡ್ಸ್ ಹೌಸ್ ನ ಮಾಲಕರಾದ ರವೀಂದ್ರ ಶೇಟ್ ರವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮಹಾಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸಿದ್ಧಾಂತಗಳನ್ನು ಪಾಲಿಸಿಕೊಂಡು ಅತ್ಯುತ್ತಮವಾದ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಹಾಗೂ ಸಮಾಜದಲ್ಲಿ ಉತ್ತಮವಾದ ಸಂಘಟನೆ ಎಂದು ಹೆಸರುವಾಸಿಯಾದ ಯುವವಾಹಿನಿ ಗೆ ಒಳ್ಳೆಯದಾಗಲಿ ಎಂದು ಉದ್ಘಾಟಕರಾದ ರವೀಂದ್ರ ಶೇಟ್ ರವರು ಶುಭ ಹಾರೈಸಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲುರವರು ಸಾರ್ವಜನಿಕರಿಗೆ ಶರಬತ್ತು ನೀಡುವುದರ ಮೂಲಕ ಚಾಲನೆ ನೀಡಿದರು. ಯುವವಾಹಿನಿಯ ಮಾತ್ರೃ ಘಟಕವಾಗಿರುವ ಮಂಗಳೂರು ಘಟಕವು ಶೋಭಾಯಾತ್ರೆಯಲ್ಲಿ ಬಳಲಿದವರ ಬಾಯಾರಿಕೆಯನ್ನು ನೀಗಿಸುವ ಮೂಲಕ ಉತ್ತಮವಾದ ಸಮಾಜಸೇವೆಯನ್ನು ಹಮ್ಮಿಕೊಂಡಿದೆ, ಘಟಕದ ಈ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ನರೇಶ್ ರವರು ಶುಭ ಹಾರೈಸಿದರು. ಕೇಂದ್ರ ಸಮಿತಿಯ ಕಾರ್ಯದರ್ಶಿಯವರಾದ ಪ್ರದೀಪ್ ಎಸ್ ಆರ್, ಸಂಘಟನಾ ಕಾರ್ಯದರ್ಶಿ ಹರೀಶ್ ಸನಿಲ್ ಮತ್ತಿತರರು ಉಪಸ್ಥಿತರಿದ್ದರು. ಮಂಗಳೂರು ಘಟಕದ ಅಧ್ಯಕ್ಷರಾದ ಕೆ ಆರ್ ಲಕ್ಷ್ಮೀನಾರಾಯಣರವರ ಮಾರ್ಗದರ್ಶನದಲ್ಲಿ, ಕಾರ್ಯದರ್ಶಿಯವರಾದ ಗಣೇಶ ವಿ. ಕೋಡಿಕಲ್ ರವರ ಸಹಕಾರ ಹಾಗೂ ಸಂಚಾಲಕರಾದ ಪ್ರಸಾದ್ ಕೆ. ಚಿಲಿಂಬಿಯವವರ ಅವಿರತ ದುಡಿಮೆಯಿಂದಾಗಿ ನಿರೀಕ್ಷೆಗೂ ಮೀರಿ ಸುಮಾರು 50 ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಸರಬತ್ ಸೇವನೆ ಮಾಡಿದರು. ಕರ್ನಾಟಕದ ಮಾಜಿ ಸಚಿವರಾದ ಯು ಟಿ. ಖಾದರ್, ಕಾಂಗ್ರೆಸ್ ಮುಖಂಡ ಹರೀಶ್ ಕುಮಾರ್ ಬೆಳ್ತಂಗಡಿ, ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಇದರ ಅಧ್ಯಕ್ಷರಾದ ವೇದಕುಮಾರ್, ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿಯವರಾದ ಪದ್ಮರಾಜ್ ಹಾಗೂ ಆಡಳಿತ ಮಂಡಳಿಯವರು ಸರಬತ್ ಸೇವನೆ ಮಾಡಿ ಅತ್ಯುತ್ತಮವಾದ ಕೆಲಸವೆಂದು ಶ್ಲಾಘಿಸಿದರು. ಶೋಭಾಯಾತ್ರೆಯ ಸಮಯದಲ್ಲಿ 9 ನವದುರ್ಗೆಯರಿಗೆ ಘಟಕದ ವತಿಯಿಂದ ಮಂಗಳಾರತಿ ಸಮರ್ಪಿಸಲಾಯಿತು. ಸಾಯಂಕಾಲ 5:30 ರಿಂದ ರಾತ್ರಿ 2.30 ರವರೆಗೆ ಸುಮಾರು 6000 ಲೀಟರಿನಷ್ಟು ಶರಬತ್ ನ್ನು ಸಾರ್ವಜನಿಕರಿಗೆ ನೀಡಲಾಯಿತು. ಸುಮಾರು 11 ದೇವಸ್ಥಾನದ ಟ್ರಕ್ಕುಗಳು ಹಾಗೂ 70 ಕ್ಕೂ ಅಧಿಕ ಸಾರ್ವಜನಿಕ ಟ್ರಕ್ಕಿನ ಎಲ್ಲಾ ಮಾಲಕರು ಮತ್ತು ಸಿಬಂದಿಗಳು ಶರಬತ್ತು ಸೇವನೆ ಮಾಡಿ ತೃಪ್ತಿ ವ್ಯಕ್ತಪಡಿಸಿದರು. ಕಾರ್ಯಕ್ರಮದ ಆರಂಭದಿಂದಲೂ ಅತ್ಯುತ್ತಮ ಮಾರ್ಗದರ್ಶನ ಮತ್ತು ಸಹಕಾರ ನೀಡಿರುವ ಘಟಕದ ಮಾಜಿ ಅಧ್ಯಕ್ಷರುಗಳಾದ ಯಶವಂತ ಪೂಜಾರಿ, ಪರಮೇಶ್ವರ ಪೂಜಾರಿ, ಕಿಶೋರ್ ಕೆ.ಬಿಜ್ಯೆ, ಬಿ ಎಸ್ ಬಾಲಕೃಷ್ಣ, ನೇಮಿರಾಜ, ಅಶೋಕ್ ಕುಮಾರ್ ಎಸ್ ಸಿಡಿಸಿಸಿ, ಸಾಧು ಪೂಜಾರಿ, ತುಕಾರಾಂ, ಮೋಹನ್ ಪೇಜಕ್ಕಲ್, ಸುನಿಲ್ ಕುಮಾರ್ ಅಂಚನ್, ನವೀನ್ ಚಂದ್ರ, ಅಶೋಕ್ ಇಂಜಿನಿಯರ್, ಸದಾನಂದ ಸುವರ್ಣ, ರಾಕೇಶ್ ಕುಮಾರ್ ಹಾಗೂ ಇನ್ನಿತರರಿಗೆ ಘಟಕದ ಅಧ್ಯಕ್ಷರು ಧನ್ಯವಾದ ಸಲ್ಲಿಸಿದರು. ತುಂಬು ಉತ್ಸಾಹದಿಂದ ಅವಿರತವಾಗಿ ದುಡಿದಿರುವ ಘಟಕದ ಎಲ್ಲಾ ಮಾಜಿ ಅಧ್ಯಕ್ಷರಿಗೆ, ಪದಾಧಿಕಾರಿಗಳಿಗೆ ಮತ್ತು ಸರ್ವ ಸದಸ್ಯರಿಗೆ ಘಟಕದ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ನಮ್ಮ ಘಟಕದ ಸಹ ಘಟಕಗಳಾದ ಕೂಳೂರು ಮತ್ತು ಕಂಕನಾಡಿ ಘಟಕದ ಹಾಗೂ ಮಹಿಳಾ ಘಟಕದ ಸದಸ್ಯರು ಕೂಡ ಈ ಕಾರ್ಯಕ್ರಮದಲ್ಲಿ ಉತ್ಸಾಹದಲ್ಲಿ ಪಾಲ್ಗೊಂಡರು. ಜನಸಂಖ್ಯೆ ಜಾಸ್ತಿ ಇದ್ದು ನೂಕುನುಗ್ಗಲಿನ ಸಮಯದಲ್ಲಿಯೂ ಕೂಡ ಘಟಕದ ಸದಸ್ಯರು ಸಮಯೋಚಿತವಾಗಿ ಎಲ್ಲರಿಗೂ ಶರಬತ್ತು ಸಿಗುವಂತೆ ಅನುಕೂಲ ಮಾಡಿದ್ದು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಘಟಕದ ಸದಸ್ಯರಾದ ಪ್ರವೀಣ್ ಸಾಲ್ಯನ್ ಕಿರೋಡಿಯವರ ನೇತೃತ್ವದಲ್ಲಿ ತುಳುನಾಡ ಶೈಲಿಯಲ್ಲಿ ರಚಿಸಿದ ಪೇಟ ಎಲ್ಲರ ಗಮನ ಸೆಳೆಯಿತು. ಘಟಕದ ಮಾಜಿ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಏರ್ಪಡಿಸಿರುವ ಗಂಜಿಊಟವನ್ನು ಎಲ್ಲರೂ ಸವಿದರು. ಕೊನೆಯಲ್ಲಿ ಅಧ್ಯಕ್ಷರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಧನ್ಯವಾದ ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!