ಯುವವಾಹಿನಿ (ರಿ) ಮಂಗಳೂರು ಮತ್ತು ಕಾರ್ಕಳ ಘಟಕ

ಯಶಸ್ವಿ ಉದ್ಯಮಕ್ಕೆ ಚೇತರಿಕಾ-2019

ದಿನಾಂಕ 29.09.2019 ರಂದು ಯುವವಾಹಿನಿ(ರಿ) ಮಂಗಳೂರು ಘಟಕ ಮತ್ತು ಕಾರ್ಕಳ ಘಟಕ ಇದರ ಜಂಟಿ ಆಶ್ರಯದಲ್ಲಿ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರು, ವ್ಯಾಪಾರಸ್ಥರು, ಸ್ವ ಉದ್ಯೋಗಿಗಳಿಗೆ, ಹೊಸದಾಗಿ ಉದ್ಯಮ ಪ್ರಾರಂಭಿಸುವವರಿಗೆ ಮತ್ತು ನಿರುದ್ಯೋಗಿಗಳಿಗೆ ಯಶಸ್ವಿ ಉದ್ಯಮಕ್ಕೆ ಸಮಗ್ರ ಮಾರ್ಗದರ್ಶನ ಚೇತರಿಕಾ 2019 ಎಂಬ ಕಾರ್ಯಕ್ರಮವು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ನಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಯಮಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಇದರ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಉದ್ಘಾಟಿಸಿದರು. ಯುವವಾಹಿನಿಯು ಅವಕಾಶ ವಂಚಿತ ವರ್ಗಗಳಿಗೆ ಯಶಸ್ವಿ ಉದ್ಯಮಕ್ಕೆ ಸಮಗ್ರ ಮಾರ್ಗದರ್ಶನ ನೀಡುವ ಮೂಲಕ ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಉದ್ಯಮ ವ್ಯಾಪಾರಕ್ಕೂ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಬಿಲ್ಲವ ಸಮಾಜದ ಮಾದರಿ ಸಂಘಟನೆಯಾಗಿ ಬೆಳೆಯುತ್ತಿದೆ ಎಂದು ರವಿಪೂಜರಿಯವರು ತಿಳಿಸಿದರು. ಅವಕಾಶ ವಂಚಿತ ಸಮಾಜ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕ ವಾಗಿ ಅಭಿವೃದ್ಧಿಯಾಗ ಬೇಕಾದರೆ ಆ ಸಮಾಜದಲ್ಲಿ ಜನಪರ ರಾಜಕೀಯ ನಾಯಕತ್ವ ಬೆಳೆದುಬರಬೇಕು ಇದು ಆ ಸಮಾಜದ ಉದ್ಯಮಶೀಲತೆಗೆ ಪೂರಕವಾಗುತ್ತದೆ ಎಂದರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಕುಮಾರ್ ಸಸಹಿತ್ಲು, ರಾಷ್ಟ್ರೀಯ ಮಟ್ಟದ ಹೆಸರಾಂತ ತರಬೇತುದಾರರು ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ್ ಕಾರ್ಕಳ, ಮಂಗಳೂರು ಘಟಕದ ಅಧ್ಯಕ್ಷ ರಾದ ಕೆ. ಆರ್. ಲಕ್ಷ್ಮೀನಾರಾಯಣ, ಕಾರ್ಯಕ್ರಮ ದ ಸಂಚಾಲಕರಾದ ರಾಜೇಶ್ ಕದ್ರಿ, ಕಾರ್ಕಳ ಘಟಕದ ಕಾರ್ಯದರ್ಶಿ ಗಣೇಶ್ ಸಾಲಿಯಾನ್, ಸಂಘಟನಾ ನಿರ್ದೇಶಕರಾದ ಹರೀಶ್ ಸನಿಲ್ ಮುಂತಾದವರು ಉಪಸ್ಥಿತರಿದ್ದರು. ಪ್ರವೀಣ್ ಸಾಲ್ಯನ್ ಕಿರೋಡಿ ಕಾರ್ಯಕ್ರಮ ನಿರೂಪಿಸಿದರು.
ವಿವಿಧ ಘಟಕಗಳಿಂದ ಆಗಮಿಸಿರುವ 66 ಶಿಬಿರಾರ್ಥಿಗಳಿಗೆ ರಾಷ್ಟ್ರೀಯ ತರಬೇತುದಾರರಾದ ಶ್ರೀ ಸುಧಾಕರ ಕಾರ್ಕಳರವರು ಧನಾತ್ಮಕವಾಗಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಯುವವಾಹಿನಿಯಲ್ಲಿ ಪ್ರಥಮ ಬಾರಿಗೆ ನಡೆದಂತಹ ಕಾರ್ಯಾಗಾರದಲ್ಲಿ ಶಿಬಿರಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಾ, ಅಂತರ್ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಅನುಭವವಾಯಿತೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹೈಕೋರ್ಟ್ ವಕೀಲರಾದ ನವನೀತ್ ಹಿಂಗಾಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮಾಜ ಮುಖಿ ಕಾರ್ಯಕ್ರಮ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಂಗಳೂರು ಘಟಕದ ಕಾರ್ಯದರ್ಶಿ ಗಣೇಶ್ ವಿ. ಕೋಡಿಕಲ್ ರವರು ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!