ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು

ಯುವವಾಹಿನಿಯ 34ನೇ ವಾರ್ಷಿಕ ಸಮಾವೇಶ ಸಂಪನ್ನ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು.

“ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ

‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ ಅಸ್ತ್ರವಾಗಲು ಹೋಗಬೇಡಿ ಸಮಾಜದಲ್ಲಿ ನಿಮ್ಮ ಸ್ವಂತದ್ದೇನಾದರು ಸಾಧನೆ ಮಾಡಿ. ಸಮಾಜಕ್ಕೆ ಆದರ್ಶವಾಗುವಂತಹ ಯುವಕರಾಗಿ, ಸಂಕುಚಿತ ಮನೋಭಾವವನ್ನು ಬಿಟ್ಟು, ವಿಶಾಲ ಮನೋಭಾವ ಹೃದಯವನ್ನಿಟ್ಟುಕೊಂಡು ಸಮಾಜ ಸೇವೆಯನ್ನು ಮಾಡಿ ಎಂದು ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತನಂದ ಸ್ವಾಮೀಜಿ ತಿಳಿಸಿದರು.

“ಆರ್ ಎಸ್ ಎಸ್ ಹೊರತುಪಡಿಸಿದರೆ ನಾನು ನೋಡಿದ ಅತ್ಯಂತ ಶಿಸ್ತಿನ ಇನ್ನೊಂದು ಸಂಘಟನೆಯೇ ಯುವವಾಹಿನಿ” – ತಾರಾನಾಥ್ ಹೈಕೋರ್ಟ್ ವಕೀಲರು…!!!

ಯುವವಾಹಿನಿ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭ ಮುಖ್ಯ ಅತಿಥಿಗಳಾಗಿ ಬೆಂಗಳೂರು ಹೈಕೋರ್ಟ್ ನ ಪದನ್ನೋತಿ ಹಿರಿಯ ವಕೀಲರಾದ ತಾರಾನಾಥ್ ಪೂಜಾರಿ ರವರು ಮಾತನಾಡಿ, ಆರ್.ಎಸ್.ಎಸ್. ಬಿಟ್ಟರೆ ನಾನು ನೋಡಿದ ಅತ್ಯಂತ ಶಿಸ್ತಿನ ಇನ್ನೊಂದು ಸಂಘಟನೆ ಎಂದರೇ ಅದು ಯುವವಾಹಿನಿ ಎಂದು ಹೇಳಿದರು. ಅವರ ಕಾರ್ಯ ದಕ್ಷತೆಗಳು ಬಹಳ ಶಿಸ್ತು ಬದ್ಧವಾಗಿದ್ದು, ಇತರ ಬೇರೆ ಸಂಘಟನೆಗೆ ಮಾದರಿಯಾಗಿದೆ ಎಂದರು.

ಸಾಧಕರಿಗೆ ಸನ್ಮಾನ, ಅಧಿಕಾರ ಸ್ವೀಕಾರ

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಮತ್ತು ಐ. ತಾರಾನಾಥ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪದವಿ ಪಡೆದ ಡಾ.ರಾಕೇಶ್ ಕುಮಾರ್, ಡಾ.ರೋಹಿತ್ ಕುಮಾರ್, ಡಾ.ಶ್ರುತಿ, ಡಾ.ವಿನೂತಾ, ಡಾ.ಸೇಷಪ್ಪ ಅಮೀನ್, ಡಾ.ಪ್ರಸಾದ್ ಬಂಗೇರ, ಡಾ.ಅರುಣ್ ಉಳ್ಳಾಲ್ ಅವರನ್ನು ಅಭಿನಂದಿಸಲಾಯಿತು.

ನೂತನ ಪದಾಧಿಕಾರಿಗಳ ಪದಗ್ರಹಣ
ಯುವವಾಹಿನಿ ಕೇಂದ್ರ ಸಮಿತಿಯ ನೂತನ ಪದಾಧಿಕಾರಿಗಳಿಗೆ ನಿಕಟಪೂರ್ವ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಪ್ರತಿಜ್ಞಾವಿಧಿ ಬೋಧಿಸಿದರು. ಕೇಂದ್ರ ಸಮಿತಿಯ ನೂತನ ಅಧ್ಯಕ್ಷ ಉದಯ ಅಮೀನ್‌ಮಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಉಪಾಧ್ಯಕ್ಷರಾಗಿ ರಾಜೇಶ್ ಬಿ ಮತ್ತು ಹರೀಶ್ ಕೆ. ಪೂಜಾರಿ, ಕೋಶಾಧಿಕಾರಿಯಾಗಿ ಜಗದೀಶ್ಚಂದ್ರ ಡಿ.ಕೆ., ಜತೆ ಕಾರ್ಯದರ್ಶಿ‌ಯಾಗಿ ವಿದ್ಯಾ ರಾಕೇಶ್ ಹಾಗೂ ನಿರ್ದೇಶಕರು ಮತ್ತು ಸಂಘಟನಾ ಕಾರ್ಯದರ್ಶಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಡಾ.ರಾಜಾರಾಮ್‌ರವರು ಕಳೆದೊಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿದ ಉದಯ ಅಮೀನ್ ಮಟ್ಟು ಮಾತನಾಡಿ ಸರ್ವರ ಸಲಹೆ ಸೂಚನೆ ಮಾರ್ಗದರ್ಶನದ ಮೂಲಕ ಯುವವಾಹಿನಿ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸುವ ಆತ್ಮವಿಶ್ವಾಸ ಇದೆ ಎಂದು ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಪಡ್ಪು ವಾರ್ಷಿಕ ವರದಿ ಮಂಡಿಸಿದರು, ಸಮಾವೇಶ ನಿರ್ದೇಶಕರಾದ ಅಜೀತ್ ಕುಮಾರ್ ಪಾಲೇರಿ ಸ್ವಾಗತಿಸಿದರು, ನೂತನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು‌‌. ಉಪ್ಪಿನಂಗಡಿ ಘಟಕದ ಸದಸ್ಯರು ಪ್ರಾರ್ಥಿಸಿದರು. ವಾರ್ಷಿಕ ಸಮಾವೇಶದ ಸಂಚಾಲಕ ಕುಶಾಲಪ್ಪ ಹತ್ತುಕಳಸೆ ಹಾಗೂ 33 ಘಟಕಗಳ ಅಧ್ಯಕ್ಷರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು

One thought on “ಯುವವಾಹಿನಿಯ 34ನೇ ವಾರ್ಷಿಕ ಸಮಾವೇಶ ಸಂಪನ್ನ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!