ಯುವವಾಹಿನಿ (ರಿ) ವಿಟ್ಲ ಘಟಕ ಅಸ್ತಿತ್ವಕ್ಕೆ

ನಿರಂತರ ಅಧ್ಯಯನ ಶೀಲರಾಗಿದ್ದಾಗ ಪ್ರಬುದ್ಧರಾಗಲು ಸಾಧ್ಯ: ಡಾ. ರಾಜಾರಾಮ್ ಕೆ.ಬಿ.

ವಿಟ್ಲ :- ಇಂದು ಬಿಲ್ಲವ ಸಮಾಜವು ಹಿರಿಯರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತಿದೆ ಹೀಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಂದುವರೆದಾಗ ಲಭಿಸುವ ಆರ್ಥಿಕ ಶಕ್ತಿ, ಸಾಮರ್ಥ್ಯವನ್ನು ನಮಗಿಂತ ದುರ್ಬಲರಾಗಿರುವ, ಆಸಕ್ತರ ಕೈಹಿಡಿದೆತ್ತಲು ಬಳಸಿದಾಗ ಬಿಲ್ಲವರು ಬಲ್ಲವರಾಗುತ್ತಾರೆ, ನಿರಂತರ ಅಧ್ಯಯನ ಶೀಲರಾಗಿದ್ದಾಗ ಮಾತ್ರ ಸಮಾಜದಲ್ಲಿ ಪ್ರಬುದ್ಧರಾಗಲು ಸಾಧ್ಯ, ಇಂದು ನಮ್ಮ ಯುವಶಕ್ತಿಯನ್ನು ದೇಶದ ಅತ್ಯುತ್ತಮ ಪ್ರಜೆಗಳನ್ನಾಗಿ ರೂಪುಗೊಳಿಸಬೇಕೆಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ ಹೇಳಿದರು.

ಅವರು ವಿಟ್ಲ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ದೇಯಿ ಬೈದೆತಿ ವೇದಿಕೆಯಲ್ಲಿ ನಡೆದ, ವಿಟ್ಲದಲ್ಲಿ ಅಸ್ತಿತ್ವಕ್ಕೆ ಬಂದ ದ.ಕಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿ,ಮಂಗಳೂರು ಇದರ 36ನೇ ನೂತನ ವಿಟ್ಲ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿರಿಯರ ಮಾರ್ಗದರ್ಶನ ಮತ್ತು ಕಿರಿಯರ ಕ್ರಿಯಾಶೀಲನೆಯ ಮೂಲಕ ಯಾವುದೇ ಸಂಘಟನೆಯ ಅತ್ಯುತ್ತಮವಾಗಿ ಬೆಳೆಯುತ್ತದೆ. ಇದಕ್ಕೆ ಇಲ್ಲಿಯ ಎರಡು ಬಿಲ್ಲವ ಸಂಘ ಮತ್ತು ಯುವವಾಹಿನಿ ಆದರ್ಶವಾಗಿದೆ. ಬಿಲ್ಲವ ಸಮಾಜ ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದಾಗ ಅಂದು ಸಮಾಜ ಮುಂದುವರೆಯಲು ಸಾಧ್ಯವಿದೆ ಎಂದ ಅವರು, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವದಂತೆ ಇಂದು ನಾವೆಲ್ಲರೂ ವಿದ್ಯಾವಂತರಾಗಿ ಮುಂದುವರೆಯುತ್ತಿದ್ದೇವೆ. ಆದರೆ ಈ ಬಗ್ಗೆ ಅತಿಯಾದ ಆತ್ಮವಿಶ್ವಾಸ ಬೇಡ, ಇಂದು ಮನುಷ್ಯರ ಮೆದುಳಿಗೆ ಅಪಾರ ಶಕ್ತಿಯಿದೆ. ಕೇವಲ ಬ್ರಹ್ಮಶ್ರೀ ನಾರಾಯಣ ಗುರುಗಳ ಪೂಜೆ ಮಾಡಿದರೆ ಸಾಲದು ,ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿ ಶುಭ ಹಾರೈಸಿದರು.

ನೂತನ ಘಟಕವು ಯಶಸ್ವಿಯಾಗಿ ಮುನ್ನಡೆಯಲಿ:
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್‌ ಸಿ.ಎಚ್, ಅವರು , ಬಿಲ್ಲವ ಸಂಘ ಹಾಗೂ ಯುವವಾಹಿನಿ ಘಟಕವು ಜೊತೆಜೊತೆಯಾಗಿ ಸಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸುವುದು ನಮ್ಮ ಮುಖ್ಯ ಉದ್ದೇಶ, ನೆರೆಯ 16 ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಯುವಕರನ್ನು ಒಗ್ಗೂಡಿಸಿ ನೂತನ ಘಟಕವನ್ನು ರಚಿಸಿದ್ದೇವೆ. ನಾರಾಯಣ ಗುರುಗಳ ತತ್ವ ಆದರ್ಶಗಳ ಪಾಲನೆಯೊಂದಿಗೆ ನೂತನ ಘಟಕವು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಾನಪದ ಸಂಶೋಧಕರಾದ ಡಾ. ನವೀನ್ ಕುಮಾರ್ ಮರಿಕೆ ಇವರು ದಿಕ್ಸೂಚಿ ಭಾಷಣ ಮಾಡಿದರು. ಮುಖ್ಯ ಆತಿಥಿಗಳಾಗಿ ಆಗಮಿಸಿದ ನಿಕಟಪೂರ್ವ ಜಿಲ್ಲಾ ಲಯನ್ಸ್ ಗವರ್ನರ್ ಡಾ.ಗೀತ್ ಪ್ರಕಾಶ್ ಮಾತನಾಡಿ ಅಂತರಾಷ್ಟ್ರೀಯ ಸಂಸ್ಥೆಗಳಿಗೆ ಸರಿಸಮನಾಗಿ ಯುವವಾಹಿನಿ ಕೆಲಸ ಮಾಡುತ್ತಿದೆ ಎಂದರು.
ವೇದಿಕೆಯಲ್ಲಿ ಮುಂಬಯಿಯ ಪ್ಯಾಶನ್ ಕೊರಿಯೊಗ್ರಾಫರ್, ದೈವ ಪಾತ್ರಿ ಸನ್ನಿಥ್ ಪೂಜಾರಿ, ಯುವವಾಹಿನಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಪಡ್ಪು, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರಭಾಕರ ಸಾಲ್ಯಾನ್ ,ಪುತ್ತೂರು ಘಟಕದ ಅಧ್ಯಕ್ಷ ಅನೂಪ್ ಕುಮಾರ್, ನೂತನ ಅಧ್ಯಕ್ಷರಾದ ಯಶವಂತ ಪೂಜಾರಿ ಹಾಗೂ ಕಾರ್ಯದರ್ಶಿ ಹರೀಶ್ ಕೆ ಇವರು ಉಪಸ್ಥಿತರಿದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಧನಲಕ್ಷ್ಮೀರಾಜೇಶ್ ಹಾಗೂ ಶೋಭಾ ಪ್ರಾರ್ಥಿಸಿದರು.ಪುತ್ತೂರು ಘಟಕದ ಅಧ್ಯಕ್ಷರಾದ ಅನೂಪ್ ಕುಮಾರ್ ಸ್ವಾಗತಿಸಿ, ನೂತನ ಕಾರ್ಯದರ್ಶಿ ಹರೀಶ್ ಕೆ ವಂದಿಸಿದರು. ಶಿಕ್ಷಕಿ ರೇಣುಕಾ ಕಣಿಯೂರು ಮತ್ತು ನವೀನ್ ಆಳಿಕೆ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!