ಚೈತನ್ಯ-2022 ತರಬೇತಿ ಕಾರ್ಯಾಗಾರದಲ್ಲಿ ತರಬೇತುದಾರರು

ಯುವವಾಹಿನಿ ಸದಸ್ಯರ ಶಿಸ್ತು ಮತ್ತು ಉತ್ಸಾಹ ಕಾರ್ಯಾಗಾರದ ಯಶಸ್ಸಿನ ಮೂಲ : ಸದಾನಂದ ನಾವಡ

ಮಾಣಿ : ಕಾರ್ಯಾಗಾರದಲ್ಲಿ ಭಾಗವಹಿಸಿದ‌ ಸದಸ್ಯರ ಉತ್ಸಾಹ, ಶಿಸ್ತು, ಯುವವಾಹಿನಿಯ ಸಂಸ್ಥೆಯ ಮೇಲಿನ ಅತೀವ ಪ್ರೀತಿ ಕಾರ್ಯಾಗಾರದ ಯಶಸ್ಸಿನ ಮೂಲ ಎಂದು ರಾಷ್ಟ್ರೀಯ ತರಬೇತುದಾರರಾದ ಸದಾನಂದ ನಾವಡ ತಿಳಿಸಿದರು.

ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ವ್ಯಕ್ತಿತ್ವ ವಿಕಸನ‌ ನಿರ್ದೇಶಕರಿಗೆ ಮಾಣಿ ನಾರಾಯಣಗುರು ಸಭಾಭವನದಲ್ಲಿ ಜರುಗಿದ ಚೈತನ್ಯ-2022 ತರಬೇತಿ ಕಾರ್ಯಾಗಾರದ ಮುಖ್ಯ ತರಬೇತುದಾರರಾದ ಸದಾನಂದ ನಾವಡ ರವರು ನಾಯಕತ್ವ, ಸಂಘಟನೆಯ ಶಕ್ತಿ ವಿಷಯದ ಬಗ್ಗೆ ತರಬೇತಿ ನೀಡಿದರು .

ನಾಯಕತ್ವ ಗುಣಗಳನ್ನು ಮೈಗೂಡಿಸಿದಾಗ ಸಂಘಟನೆಯಲ್ಲಿ ಯಶಸ್ಸು ಸಾಧ್ಯ : ಸುಧಾಕರ್ ಕಾರ್ಕಳ

ಉತ್ತಮ ನಾಯಕರಾಗಲು ಕೆಲವೊಂದು ಗುಣಗಳನ್ನು ಮೈಗೂಡಿಸಿಕೊಂಡಾಗ ಸಂಘಟನೆಯನ್ನು ಯಶಸ್ವಿಯಾಗಿ ಮನ್ನಡೆಸಬಹುದು ಎಂದು ರಾಷ್ಟ್ರೀಯ ತರಬೇತುದಾರ ಹಾಗೂ ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕರಾದ, ಸುಧಾಕರ್ ಕಾರ್ಕಳರವರು ಸಂಘಟನೆಯ ಹೊಂದಾಣಿಕೆ,ಕಾರ್ಯಕ್ರಮ ನಿರ್ವಹಣೆ ಮತ್ತು ಪರಿಣಾಮಕಾರಿ ಭಾಷಣದ ಬಗ್ಗೆ ಸುಧಾಕರ್ ಕಾರ್ಕಳ ತಿಳಿಸಿದರು.

ಯುವವಾಹಿನಿ ನಾಯಕತ್ವ ರೂಪಿಸುವ ಹೆಬ್ಬಾಗಿಲು : ರಾಜೇಶ್ ಸುವರ್ಣ

ಯುವವಾಹಿನಿಯ ವೈಶಿಷ್ಠಪೂರ್ಣ ಉಪನಿಬಂಧನೆ ಹಾಗೂ ನಿಯಮಾವಳಿಗಳು ಸಂಘಟನೆ ಶಿಸ್ತು ಬದ್ದವಾಗಿ ಮುನ್ನಡೆಯಲು ಸಾಧ್ಯವಾಗಿದೆ. ಕ್ರೀಯಾಶಿಲ ಯೋಜನೆ ಹಾಗೂ ಯೋಚನೆಗಳ ಮೂಲಕ ಯುವಜನತೆಗೆ ಯುವವಾಹಿನಿ ನಾಯಕತ್ವ ರೂಪಿಸುವ ಹೆಬ್ಬಾಗಿಲು ಆಗಿದೆ ಎಂದು “ಯುವವಾಹಿನಿ ಮತ್ತು ನಾನು” ವಿಚಾರದ ಬಗ್ಗೆ ತರಬೇತುದಾರ ಹಾಗೂ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾದ ರಾಜೇಶ್ ಸುವರ್ಣ ರವರು ತಿಳಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ರಮೇಶ್ ಮುಜಲ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸಚಿನ್ ಎಂ, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತರಬೇತಿ ಕಾರ್ಯಗಾರದ ತರಬೇತುದಾರರನ್ನು ಸನ್ಮಾನಿಸಲಾಯಿತು.ಯುವವಾಹಿನಿ ಕೇಂದ್ರ ಸಮಿತಿಯ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಂಚಾಲಕರಾದ ಪ್ರಶಾಂತ್ ಮಾಣಿ ಸ್ವಾಗತಿಸಿದರು, ಮಾಣಿ ಘಟಕದ ಕಾರ್ಯದರ್ಶಿ ರೇಣುಕಾ ಕಣಿಯೂರು ವಂದಿಸಿದರು, ಕೋಶಾಧಿಕಾರಿ ರಾಜೇಶ್ ಬಲ್ಯ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!