ಯುವವಾಹಿನಿ (ರಿ.) ಕಡಬ ಘಟಕ

ಗುರು ಸ್ಫೂರ್ತಿ ಕಾರ್ಯಕ್ರಮ-2022

ಕಡಬ :- ದಿನಾಂಕ 19 ಜೂನ್ 2022 ರಂದು ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ”ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ , ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತ ಬಂದಿದೆ. ಆದ್ದರಿಂದ ನಾರಾಯಣ ಗುರು ತತ್ವ ಪ್ರತಿಯೊಬ್ಬನಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಗುರು ಸ್ಫೂರ್ತಿ – 2022” ಎನ್ನುವ ಕಾರ್ಯಕ್ರಮವನ್ನು ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಲ್ಲುಗುಡ್ಡೆ ಜನಾರ್ದನ ಪೂಜಾರಿ ಇವರ ಮನೆಯಲ್ಲಿ ಘಟಕದ ಭಜನಾ ತಂಡದಿಂದ ಭಜನಾ ನಾಮ ಸಂಕೀರ್ತನೆಯೊಂದಿಗೆ ಆರಂಭಗೊಂಡಿತ್ತು.
ಗುರುಗಳ ತತ್ವ, ಸಂದೇಶ ಮತ್ತು ಗುರುಗಳು ಸಮಾಜಕ್ಕೆ ನೀಡಿದ ಕೊಡುಗೆಗಳೇನು ಎಂಬುವುದರ ಕುರಿತು ಯುವ ಸಿಂಚನ ಪತ್ರಿಕಾ ಕಾರ್ಯದರ್ಶಿ , ಯುವ ಬರಹಗಾರರು ಹಾಗೂ ರಂಗಭೂಮಿ ಕಲಾವಿದರು ಆದ ರಾಜೇಶ್ ಬಲ್ಯ ಇವರು ಮಾಹಿತಿಯನ್ನು ನೀಡಿದರು. ಮನೆಯ ಯಜಮಾನರಾದ ಜನಾರ್ದನ ಪೂಜಾರಿರವರು ಬ್ರಹ್ಮ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ , ನನ್ನ ಮನೆಯಲ್ಲಿ ಈ ಕಾರ್ಯಕ್ರಮ ಮಾಡುವುದು ಬಹಳ ಸಂತೋಷ, ಯುವವಾಹಿನಿ ಮತ್ತು ಬಿಲ್ಲವ ಕೊಂಬಾರು ಗ್ರಾಮ ಸಮಿತಿಗೆ ಧನ್ಯವಾದ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಲ್ಲವ ಗ್ರಾಮ ಸಮಿತಿ ಕೊಂಬಾರು ಇಲ್ಲಿ ಸೇವೆ ಸಲ್ಲಿಸಿದ ಮಾಯಿಲಪ್ಪ ಕೊಂಬಾರು ಇವರಿಗೆ ಹಾಗೂ ಬಿಲ್ಲವ ಸಂಘ ಇದರ ಕಡಬ ವಲಯ ಸಂಚಾಲಕರಾದ ಜಯಪ್ರಕಾಶ್ ದೋಳ ಇವರನ್ನು ಘಟಕ ಹಾಗೂ ಬಿಲ್ಲವ ಗ್ರಾಮ ಸಮಿತಿ ಕೊಂಬಾರು ಇದರ ಪರವಾಗಿ ಗೌರವಿಸಲಾಯಿತು. ವೇದಿಕೆಯಲ್ಲಿ ಶಿವಪ್ರಸಾದ್ ನೂಚಿಲ ಸಂಘಟನಾ ಕಾರ್ಯದರ್ಶಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು , ನಿತಿನ್ ಕುಮಾರ್ , ಅಧ್ಯಕ್ಷರು ಬಿಲ್ಲವ ಗ್ರಾಮ ಸಮಿತಿ, ಕೊಂಬಾರು, ಘಟಕದ ಸಹ ಸಂಘಟನಾ ಕಾರ್ಯದರ್ಶಿ ನವೀನ್ ಕುಮಾರ್ , ನಾರಾಯಣ ಗುರು ತತ್ವ ಪ್ರಚಾರ ಹಾಗೂ ಅನುಷ್ಠಾನ ನಿರ್ದೇಶಕರಾದ ರವಿ ಮಾಯಿಲ್ಗ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು, ಗ್ರಾಮ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು. ನಿಶ್ಮಿತಾ ಅಮೈ ಪ್ರಾರ್ಥಿಸಿ, ಜೊತೆ ಕಾರ್ಯದರ್ಶಿ ಸರಿತಾ ಉಂಡಿಲ ಸ್ವಾಗತಿಸಿ, ಘಟಕದ ಕಾರ್ಯದರ್ಶಿ ಕೃಷ್ಣಪ್ಪ ಅಮೈ ವಂದಿಸಿ, ಮಹಿಳಾ ನಿರ್ದೇಶಕಿ ಅನಿತಾ ಕುತ್ಯಾಡಿ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!