ಯುವವಾಹಿನಿ (ರಿ.)ಬಜಪೆ ಘಟಕ

ಆಟಿದ ನೆಂಪು – 2022

 ಬಜ್ಪೆ:- ಯುವವಾಹಿನಿ ಬಜ್ಪೆ ಘಟಕದ ವತಿಯಿಂದ 8ನೇ ವರ್ಷದ ಅಟಿದ ನೆಂಪು – 2022 ಕಾರ್ಯಕ್ರಮವು ಶ್ರೀ ನಾರಾಯಣ ಗುರು ಸಭಾಭವನ ಬಜಪೆ ಇಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.)ಬಜಪೆ -ಕರಂಬಾರು ಇವರ ಸಹಕಾರದೊಂದಿಗೆ 17 ಜುಲೈ 2022 ರಂದು ನಡೆಯಿತು. ಕಾರ್ಯಕ್ರಮವನ್ನು ಶ್ರೀ ಸ್ವಯಂಭೂಲಿಂಗೇಶ್ವರ ದೇವಸ್ಥಾನ ದೊಡ್ಡಿಕಟ್ಟ, ಬಜಪೆ ಇದರ ಅಧ್ಯಕ್ಷರಾದ ಲೋಕೇಶ್ ಆರ್. ಅಮೀನ್ ಇವರು ಕಳಸಕ್ಕೆ ಅಕ್ಕಿ ಹಾಕಿ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯುವವಾಹಿನಿಯ ಯಾವುದೇ ಸಾಮಾಜಿಕ ಕಾರ್ಯಗಳಿಗೆ ನನ್ನ ಪ್ರೋತ್ಸಾಹ ಹಾಗೂ ಸಹಾಯ ಹಸ್ತ ಇದೆ ಎಂದು ಹೇಳಿ ಶುಭ ಹಾರೈಸಿದರು. ಸಾಹಿತಿ ಪ್ರಮೀಳಾ ದೀಪಕ್ ಪೆರ್ಮುದೆ ಇವರು ಆಟಿಯ ವಿಶೇಷತೆಯ ಬಗ್ಗೆ ಉಪನ್ಯಾಸ ನೀಡಿ, ಹೆತ್ತವರು ತಮ್ಮ ಮಕ್ಕಳಿಗೆ ಆಟಿಯ ವಿಶೇಷತೆಯ ಬಗ್ಗೆ ಮನವರಿಕೆ ಮಾಡಿ ಕೊಡಬೇಕು ಹಾಗೂ ಹಿಂದಿನ ಕಾಲದ ಕಷ್ಟದ ದಿನಗಳ ಬಗ್ಗೆ ತಿಳಿಯಪಡಿಸಬೇಕು. ಯುವವಾಹಿನಿ ಘಟಕವು ಪ್ರತಿವರ್ಷ ಈ ಆಟಿದ ನೆಂಪು ಕಾರ್ಯಕ್ರಮ ಏರ್ಪಡಿಸುವುದು ಶ್ಲಾಘನೀಯ ಎಂದು ಹೇಳಿದರು. ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರಾದ ಉಷಾ ಸುವರ್ಣ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಕಳೆದ ಸಾಲಿನ 10ನೇ ತರಗತಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ನಮ್ಮ ಸಮಾಜದ ನಾಲ್ವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸರಿತಾ ಚಾರಿಟೇಬಲ್ ಟ್ರಸ್ಟ್ ಸುಂಕದಕಟ್ಟೆ,ಬಜಪೆ ಹಾಗೂ ಸುಕುಮಾರ್ ಸಾಲಿಯಾನ್ ಸ್ವಾಮಿಲಪದವು, ಬಜಪೆ ಇವರುಗಳ ಸಹಕಾರದೊಂದಿಗೆ ಯುವವಾಹಿನಿಯ ವಿದ್ಯಾನಿಧಿಯಿಂದ ಏಳು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಅವರ ಮುಂದಿನ ಶಿಕ್ಷಣಕ್ಕೆ ಸಹಕರಿಸಲಾಯಿತು. ಪಣಂಬೂರು-ಕುಲಾಯಿ ಘಟಕದ ಆತಿಥ್ಯದಲ್ಲಿ ನಡೆದ ಮಾಧವ ಕೀರ್ತನೋತ್ಸವ ಭಜನಾ ಸ್ಪರ್ಧೆಯಲ್ಲಿ ಬಜ್ಪೆ ಘಟಕವು ಪ್ರಥಮ ಬಹುಮಾನ ಪಡೆದಿದ್ದು ಭಾಗವಹಿಸಿದ ಸದಸ್ಯರನ್ನು ಗೌರವಿಸಲಾಯಿತು. ಮುಖ್ಯ ಅತಿಥಿಯಾದ ಮೂಲ್ಕಿ -ಮೂಡಬಿದ್ರೆ ಓ ಬಿ ಸಿ ಮೋರ್ಚಾದ ಅಧ್ಯಕ್ಷರಾದ ರಾಜೇಶ್ ಅಮೀನ್ ಪೋರ್ಕೊಡಿ ಮಾತನಾಡಿ ಇಂದು ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉತ್ತಮವಾಗಿ ಕಲಿತು ಉನ್ನತ ಹುದ್ದೆ ಪಡೆದು ನೀವು ಯುವವಾಹಿನಿಯೊಂದಿಗೆ ಕೈ ಜೋಡಿಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಡುವಂತಾಗಲಿ ಎಂದು ಶುಭ ಹಾರೈಸಿದರು. ಇನ್ನೊರ್ವ ಮುಖ್ಯ ಅತಿಥಿ ಯುವವಾಹಿನಿ ಕೇಂದ್ರ ಸಮಿತಿಯ ಕೋಶಾಧಿಕಾರಿಯಾದ ಜಗದೀಶ್ ಚಂದ್ರ ಮೂಡಬಿದ್ರೆ ಇವರು ಯುವವಾಹಿನಿ ಬಜಪೆ ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಅತಿಥಿಯಾಗಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಯೋಗೀಶ್ ಪೂಜಾರಿ, ಕಾರ್ಯಕ್ರಮ ಸಂಚಾಲಕರಾದ ಪ್ರಜ್ವನಿ ಮಿತೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಮೊದಲು ನಾರಾಯಣ ಗುರು ಮಂದಿರದಲ್ಲಿ ಪೂಜೆ ಸಲ್ಲಿಸಿ ನಂತರ ಯುವವಾಹಿನಿ ಕುಟುಂಬ ಸದಸ್ಯರಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಹಾಗೂ ಯುವವಾಹಿನಿ ಸದಸ್ಯರು ತಮ್ಮ ತಮ್ಮ ಮನೆಯಲ್ಲಿ ಆಟಿಯ ವೈಶಿಷ್ಟತೆ ಬೀರುವ ತಿಂಡಿ ತಿನಿಸು ಪದಾರ್ಥಗಳನ್ನು ಮಾಡಿ ತಂದಿದ್ದರು. ಸಾನ್ವಿ ಪ್ರಾರ್ಥಿಸಿ, ಸಂಧ್ಯಾ ಕುಲಾಯಿ ಸ್ವಾಗತಿಸಿ, ಚಂದ್ರಶೇಖರ ಪೂಜಾರಿ ವಿದ್ಯಾರ್ಥಿಗಳ ಹೆಸರನ್ನು ವಾಚಿಸಿ, ರವೀಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ನಿಶಾಲ್ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!