ಯುವವಾಹಿನಿ (ರಿ.) ಕಡಬ ಘಟಕ

ಬಿರುವೆರ್ನ ಕೆಸರ್ದ ಕಲ

ಕಡಬ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕಡಬ ಘಟಕ ಇದರ ಆತಿಥ್ಯದಲ್ಲಿ ಕಡಬ ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಹಾಗೂ ಕೋಟಿ-ಚೆನ್ನಯ್ಯ ಮಿತ್ರವೃಂದ ಆಲಂಕಾರು ಇದರ ಸಹಕಾರದೊಂದಿಗೆ ದಿನಾಂಕ‌ 28 ಆಗಸ್ಟ್ 2022ನೇ ಆದಿತ್ಯವಾರ ಆಲಂಕಾರಿನ ಮಾಯಿಲ್ಗ ಶ್ರೀ ರಕ್ತೇಶ್ವರಿ ದೈವಸ್ಥಾನದ ಬಳಿ “ಬಿರುವೆರ್ನ ಕೆಸರ್ದ ಕಲ” ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು. ಕಾರ್ಯಕ್ರಮವನ್ನು ತಾಯಿ ರಕ್ತೇಶ್ವರಿ ಯ ದೈವಸ್ಥಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ , ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕೆಸರ್ದ ಕಲ ಕ್ರೀಡಾ ಕೂಟಕ್ಕೆ ಚಾಲನೆ ನೀಡಲಾಯಿತು. ಕ್ರೀಡಾ ಕೂಟದ ಉದ್ಘಾಟನೆಯನ್ನು ಅಕ್ಷಯ ಕಾಲೇಜ್ ಪುತ್ತೂರು ಇದರ ಅಧ್ಯಕ್ಷರಾದ ಜಯಂತ ನಡುಬೈಲ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಅವನತಿಯತ್ತ ಸಾಗುತ್ತಿರುವ ತುಳುನಾಡಿನ ಕ್ರೀಡೆಯನ್ನು ಯುವ ಜನತೆಗೆ ಪರಿಚಯಿಸುವ ಮಹತ್ತರ ಕಾರ್ಯ ಶ್ಲಾಘನೀಯವಾದುದು , ಈ ನಿಟ್ಟಿನಲ್ಲಿ ಯುವ ಸಮುದಾಯ ಕಾರ್ಯ ಪ್ರವೃತ್ತರಾಗಬೇಕಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಜೀ ಕನ್ನಡ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಿತೇಶ್ ಕಾಪಿನಡ್ಕ ಕಾರ್ಯಕ್ರಮಕ್ಕೆ ಶುಭ ನುಡಿದರು, ಹಾಗೂ ಸೇರಿರುವ ಎಲ್ಲ ಜನಸ್ತೋಮವನ್ನು ಕಾಮಿಡಿಯ ಮೂಲಕ ನಗೆಯ ಕಡಲಲ್ಲಿ ತೇಲಾಡಿಸಿದರು. ಉದ್ಯಮಿ ಡಾ.ರವಿ ಕಕ್ಕೆಪದವು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಬಿರುವೆರ್ನ ಕೆಸರ್ದ ಕಲ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಪ್ರವೀಣ್ ಓಂಕಾಲ್ ವಹಿಸಿದ್ದರು. ಸಭೆಯಲ್ಲಿ ಕೋಟಿ-ಚೆನ್ನಯ ಮಿತ್ರವೃಂದ ಆಲಂಕಾರು ಇದರ ಅಧ್ಯಕ್ಷರಾದ ಜಯಂತ ನೆಕ್ಕಿಲಾಡಿ , ಯುವವಾಹಿನಿ (ರಿ.) ಕಡಬ ಘಟಕದ ಗೌರವ ಸಲಹೆಗಾರರಾದ ಲಿಂಗಪ್ಪ ಪೂಜಾರಿ ಕೇಪುಳು ಹೊಸಮನೆ, ಬಿಲ್ಲವ ಗ್ರಾಮ ಸಮಿತಿ ಇದರ ಕಡಬ‌ ವಲಯ ಸಂಚಾಲಕ ಜಯಪ್ರಕಾಶ್ ದೋಳ ಬಿಲ್ಲವ ಗ್ರಾಮ ಸಮಿತಿ ಕಡಬ ಇದರ ಉಪಾಧ್ಯಕ್ಷರಾದ ಸುಂದರ ಪೂಜಾರಿ ಅಂಗಣ, ಘಟಕದ ಮಹಿಳಾ ನಿರ್ದೇಶಕಿ ಅನಿತಾ ಕುತ್ಯಾಡಿ, ಜೊತೆ ಕಾರ್ಯದರ್ಶಿ ಸರಿತಾ ಉಂಡಿಲ ಉಪಸ್ಥಿತರಿದ್ದರು. ತೃಶ್ವಿ ಪಾಲಪ್ಪೆ ಪ್ರಾರ್ಥಿಸಿದರು, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಸರಿತಾ ಉಂಡಿಲ ವಂದಿಸಿ, ಸುಪ್ರೀತ ಚರಣ್ ಪಾಲಪ್ಪೆ ನಿರೂಪಿಸಿದರು. ಆಟೋಟ ಸ್ಪರ್ಧೆಗಳ ತೀರ್ಪುಗಾರರಾಗಿ ರಾಜೇಶ್ ದೋಳ, ಅಶೋಕ್ ಕೊಯಿಲ ಉಪಸ್ಥಿತರಿದ್ದು ಯಶಸ್ವಿಯಾಗಿ ನಿರ್ವಹಿಸಿದರು. ಒಟ್ಟು 12 ಪುರುಷರ ಹಗ್ಗ ಜಗ್ಗಾಟದ ತಂಡಗಳು,9 ಮಹಿಳೆಯರ ಹಗ್ಗಜಗ್ಗಾಟದ ತಂಡಗಳು,7 ತಂಡ ಮಹಿಳೆಯರ 4×100 ರಿಲೇ, 9 ತಂಡ ಪುರುಷರ4×100 ರಿಲೇಯ ಆಟೋಟಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ ಬಾಲ್ದಿಗೆ ಚೆಂಡು ಹಾಕುವುದು, 50 ಮೀಟರ್ ಓಟ , 100 ಮೀಟರ್ ಓಟ, ಹಾಳೆ ಎಳೆಯುವುದು, ಮೂರು ಕಾಲಿನ ಓಟ ಹಾಗೂ ಪುರುಷ ಮತ್ತು ಮಹಿಳೆಯರಿಗೆ ಮಡಕೆ ಹೊಡೆಯುವುದು, ಮೂರು ಕಾಲಿನ ಓಟ, ಸುರುಳಿ ಆಟ,100ಮೀಟರ್ ಓಟದ ಸ್ಪರ್ಧೆಗಳನ್ನು ನಡೆಸಲಾಗಿದೆ.
ಸಂಜೆ ನಡೆದ ಸಮಾರೋಪ ಸಮಾರಂಭದ ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಪ್ರವೀಣ್ ಓಂಕಾಲ್ ವಹಿಸಿದ್ದರು. ಸಭೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲ, ವಸಂತ ಬದಿಬಾಗಿಲು, ಮೂರ್ತೆದಾರ ಸೇವಾ ಸಹಕಾರಿ ಸಂಘ (ನಿ.) ಆಲಂಕಾರು ಇದರ ಅಧ್ಯಕ್ಷರಾದ ಮುತ್ತಪ್ಪ ಪೂಜಾರಿ ನೈಯಲ್ಗ, ಸ್ಥಳ ದಾನಿ ಜನಾರ್ಧನ ಬಿ ಎಲ್ , ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕಡಬ ಇದರ ಶಾಖಾಧಿಕಾರಿ ಪ್ರದೀಶ್ ನಡುವಲ್ ಉಪಸ್ಥಿತರಿದ್ದರು. ಬೆಳಿಗ್ಗೆಯಿಂದ ಸಂಜೆ ತನಕ ನಡೆದ ಆಟೋಟ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು ಹಾಗೂ ಕೆಸರ್ದ ಕಲ ಕಾರ್ಯಕ್ರಮ ಯಶಸ್ವಿಗಾಗಿ ಶ್ರಮಿಸಿದ ಎಲ್ಲಾ ಸದಸ್ಯರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಿಥುನ್ ಸುಂದರ್ ಪಲ್ಲತ್ತಡ್ಕ ಸ್ವಾಗತಿಸಿ, ಕೃಷ್ಣಪ್ಪ ಅಮೈ ವಂದಿಸಿದರು. ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!