Yuvavahini

SEP 10, 2022 5.10 PM IST

ಯುವವಾಹಿನಿ (ರಿ.) ಕೂಳೂರು ಘಟಕ

ಬ್ರಹ್ಮಶ್ರೀ ನಾರಾಯಣಗುರುವರ್ಯರ 168ನೇ ಜನ್ಮ ದಿನಾಚರಣೆ

ಕೂಳೂರು :- ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ 168 ನೇ ಜನುಮ ದಿನದ ಪ್ರಯುಕ್ತ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸ್ನೇಹ ಭಾರತಿ ವಿದ್ಯಾ ಸಂಸ್ಥೆ ನಮ್ಮ ಹಿರಿಯರ ಮನೆ ಜೋಕಟ್ಟೆ ಪೊರ್ಕೋಡಿಯಲ್ಲಿ ಸೇವಾ ಕಾರ್ಯಕ್ರಮವು ದಿನಾಂಕ 10 ಸೆಪ್ಟೆಂಬರ್ 2022 ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ವಹಿಸಿದ್ದರು. ಗುರುಗಳ ಭಾವಚಿತ್ರಕ್ಕೆ ಹಿರಿಯರಾದ ಸುನಂದರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ರವರು ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಂದೇಶ ಹಾಗೂ ತತ್ವಗಳ ಬಗ್ಗೆ ಮಾಹಿತಿ ನೀಡಿದರು. ಸ್ನೇಹ ಭಾರತಿ ವಿದ್ಯಾ ಸಂಸ್ಥೆಯ ಸಮಾಜ ಸೇವಕರಾದ ಸುನಿಲ್ ಕುಮಾರ್ ಮಾತನಾಡಿ ಗುರುಗಳ ಜನುಮ ದಿನವನ್ನು ತಮ್ಮ ಸಂಸ್ಥೆಯಲ್ಲಿ ಆಚರಿಸಿದಕ್ಕಾಗಿ ಸಂತಸ ವ್ಯಕ್ತಪಡಿಸಿದರು. ಯುವವಾಹಿನಿ ಕೂಳೂರು ಘಟಕದ ನಿಸ್ವಾರ್ಥ ಸೇವಾ ಮನೋಭಾವವನ್ನು ಶ್ಲಾಘಿಸಿದರು. ನಮ್ಮ ಘಟಕದ ಮಾಜಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಮಾತನಾಡಿ ಗುರುಗಳ ಜನುಮ ದಿನವನ್ನು ಪ್ರತೀ ವರ್ಷ ಇದೇ ರೀತಿ ಬೇರೆ ಬೇರೆ ಆಶ್ರಮದಲ್ಲಿ ಆಚರಿಸಿಕೊಂಡು ಬಂದಿರುತ್ತೇವೆ ಎಂದರು. ಘಟಕದ ಇನ್ನೋರ್ವ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಮಾತನಾಡಿ ಗುರುಗಳು ಮಹಾನ್ ಜ್ಞಾನಿ, ಇಂದು ನಾವು ಇಲ್ಲಿನ ಹಿರಿಯ ಜ್ಞಾನಿಗಳೊಂದಿಗಿದ್ದೇವೆ ಎಂದರು. ಗುರುಗಳ ತತ್ವ ಆದರ್ಶಗಳನ್ನು ವಿವರಿಸುತ್ತಾ, ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ಮಾತನಾಡಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಪ್ರತಿ ವರ್ಷ ಇದೇ ರೀತಿ ಆಚರಿಸಿಕೊಂಡು ಬರಲಾಗುತ್ತಿದೆ. ತನ್ನ ಮಾಜಿ ಅಧ್ಯಕ್ಷರುಗಳ ದಾರಿಯಲ್ಲಿ ತಾನು ಸಾಗುತ್ತಿರುವೆ ಎಂದರು.
ವೇದಿಕೆಯಲ್ಲಿ ಸ್ನೇಹ ಭಾರತಿ ವಿದ್ಯಾ ಸಂಸ್ಥೆ, ನಮ್ಮ ಸಹಿರಿಯರ ಮನೆಯ ಅಧೀಕ್ಷಕರಾದ ರೇಖಾ, ಯುವವಾಹಿನಿ ಕೂಳೂರು ಘಟಕದ ಜೊತೆ ಕಾರ್ಯದರ್ಶಿ ತುಳಸೀ ಸುಜೀರ್, ಕಾರ್ಯಕ್ರಮದ ಸಂಚಾಲಕರಾದ ಅಕ್ಷಿತ್ ಸಿ ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ನಯನ ರಮೇಶ್, ಪ್ರಥಮ ಉಪಾಧ್ಯಕ್ಷರಾದ ನಿಶಿತ್ ಪೂಜಾರಿ, ದ್ವಿತೀಯ ಉಪಾಧ್ಯಕ್ಷರಾದ ಯಶವಂತ್ ಪೂಜಾರಿ, ಘಟಕದ ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷರಾದ ನಯನ ರಮೇಶ್ ಪ್ರಾರ್ಥಿಸಿ, ಅಧ್ಯಕ್ಷರಾದ ದೀಕ್ಷೀತ್ ಸ್ವಾಗತಿಸಿ, ಮಧುಶ್ರೀ ಪ್ರಶಾಂತ್ ನಿರೂಪಿಸಿ, ಅಕ್ಷಿತ್ ಸಿ ಎಸ್ ವಂದಿಸಿದರು. ನಂತರ ನಮ್ಮ ಹಿರಿಯರ ಮನೆಯ ಎಲ್ಲಾ ಹಿರಿಯರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಸದಸ್ಯರು ಎಲ್ಲರೂ ಸೇರಿ ಊಟ ಬಡಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!