ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಮಾಣಿ ಘಟಕ

ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ – 2022 ಪ್ರದಾನ ಸಮಾರಂಭ

 

ಮಾಣಿ :- ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಕೊಡ ಮಾಡುವ 2022ನೇ ಸಾಲಿನ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಯುವವಾಹಿನಿ (ರಿ.)ಮಾಣಿ ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ನೆರವೇರಿತು. ಸಾಹಿತಿ ಹಾಗೂ ವಿಮರ್ಶಕರಾದ ಡಾ.ಬಿ.ಜನಾರ್ದನ ಭಟ್ ಇವರಿಗೆ ಈ ಬಾರಿಯ ವಿಶುಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಖಕ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ನರೇಂದ್ರ ರೈ ದೇರ್ಲರವರು ಮಾತನಾಡಿ  ” ಜಾತ್ಯಾತೀತ ಸಮಾಜ ನಿರ್ಮಿಸುವಲ್ಲಿ ಸಮರ್ಥ ಲೇಖಕನ ಪಾತ್ರ ಬಹುಮುಖ್ಯವಾಗಿದೆ. ನಾವು ಏನು ಎನ್ನುವುದು ನಮಗೆ ತಿಳಿದಾಗ ಸಮಾಜದಲ್ಲಿ ನಾವು ಮಾದರಿಯಾಗಬಹುದು. ವಿಶುಕುಮಾರ್ ಕನ್ನಡದ ಶ್ರೇಷ್ಠ ಸಾಹಿತಿ. ಕರಾವಳಿಯಲ್ಲಿ ಪಾಂಡಿತ್ಯಗಳು ಮನುಷ್ಯ ಮನುಷ್ಯನನ್ನು ಜೋಡಿಸುವ ಕಾರ್ಯ ಮಾಡದಿರುವುದು ವಿಷಾದನೀಯ ಎಂದು ನುಡಿದರು.


ಸಾಹಿತಿ ಡಾ. ಬಿ. ಜನಾರ್ದನ ಭಟ್ ಅವರಿಗೆ ವಿಶು ಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಿ, ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ವಿಶ್ರಾಂತ ಪ್ರಾಂಶುಪಾಲ ಡಾ. ಮಾಧವ ಭಟ್ ಮಾತನಾಡಿ ಸಾಹಿತ್ಯ ಬರಹಗಳನ್ನು ಓದುತ್ತಿರುವವರು ಅಪರೂಪವಾಗುತ್ತಿರುವ ಸನ್ನಿವೇಶದಲ್ಲಿ ಡಾ.ಜನಾರ್ದನ ಭಟ್ ಅವರ ಸಾಹಿತ್ಯ ಸಾಧನೆ ವಿಶೇಷವಾಗಿದೆ. ಕನ್ನಡ ನಾಡಿನ ಮೇರು ಸಾಹಿತಿ ವಿಶುಕುಮಾರ್ ಅವರ ಹೆಸರಲ್ಲಿ ಪ್ರಶಸ್ತಿ ನೀಡುತ್ತಿರುವುದು ಅವರ ಜೀವನ ಮೌಲ್ಯ ಹೆಚ್ಚಿಸಿದೆ ಎಂದರು. ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ಕಾಲೇಜು ವಾಣಿಜ್ಯ ವಿಭಾಗ ಮುಖ್ಯಸ್ಥೆ ಡಾ. ಆಶಾಲತಾ ಎಸ್ ಸುವರ್ಣ ಅವರು ಸಮೀಕ್ಷ ಶಿರ್ಲಾಲು ಅವರಿಗೆ ಡಾ. ಪ್ರಭಾಕರ ನೀರುಮಾರ್ಗ ಯುವ ಸಾಹಿತಿ ಪ್ರಶಸ್ತಿ ಪ್ರದಾನ ಮಾಡಿದರು. ಡಾ. ತ್ರಿವೇಣಿ ರಮೇಶ್ ರವರು ಸನ್ಮಾನ ಪತ್ರವನ್ನು ವಾಚಿಸಿದರು.


ಇದೇ ಸಂದರ್ಭದಲ್ಲಿ ‘ಯುವಸ್ಫೂರ್ತಿ ಭರವಸೆಯ ಬೆಳಕು’ ಪುಸ್ತಕ ಬಿಡುಗಡೆಯಾಯಿತು. ಕಾರ್ಯಕ್ರಮವನ್ನು ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಅಧ್ಯಕ್ಷ ಶ್ರೀ ಸುರೇಶ್ ಸೂರ್ಯರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ವಹಿಸಿದರು. ಯುವವಾಹಿನಿ(ರಿ.) ಮಾಣಿ ಘಟಕದ ಅಧ್ಯಕ್ಷ ಜಯಂತ ಬರಿಮಾರು ಮತ್ತು ಕೇಂದ್ರ ಸಮಿತಿಯ ಪ್ರದಾನ ಕಾರ್ಯದರ್ಶಿ ಶ್ರೀ ಸತೀಶ್ ಕಿಲ್ಪಾಡಿ ಉಪಸ್ಥಿತರಿದ್ದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಂಗವಾಗಿ ನಡೆಸಿದ ಕವನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ ಲತೀಶ್ ಎಂ.ಸಂಕೋಳಿಗೆ, ದ್ವಿತೀಯ ಬಹುಮಾನ ಪಡೆದ ಸುಪ್ರೀತಾ ಚರಣ್ ಪಾಲಪ್ಪೆ,‌ ತೃತೀಯ ಸ್ಥಾನ ಗಳಿಸಿದ ಅರ್ಚನ ಎಂ ಬಂಗೇರ, ತೀರ್ಪುಗಾರರ ಮೆಚ್ಚುಗೆ ಪಡೆದ ಯಶಸ್ವಿನಿ ಕುಳಾಯಿ ಕವನ ವಾಚಿಸಿದರು. ಸೆಲ್ಫಿ ಉತ್ತರ ಸ್ಪರ್ಧೆಯಲ್ಲಿ ನಯನ ನೆಕ್ಕಿತ್ತಡ್ಕ ಕಡಬ, ಅರ್ಚನ ಎಂ ಬಂಗೇರ ಕುಂಪಲ, ರತಿ ಮಾಣಿ ಬಹುಮಾನ ಪಡೆದರು. ರಸಪ್ರಶ್ನೆ ಸ್ಪರ್ಧೆಯಲ್ಲಿ ಉಡುಪಿ ಘಟಕ ಪ್ರಥಮ, ಹಾಗೂ ಕೊಲ್ಯ ಘಟಕ ದ್ವಿತೀಯ ಬಹುಮಾನ ಪಡೆಯಿತು.ಅತೀ ಹೆಚ್ಚು ಸದಸ್ಯರ ಪಾಲ್ಗೊಳ್ಳುವಿಕೆಗಾಗಿ ಮಂಗಳೂರು ಘಟಕ ಮತ್ತು ಅತೀ ದೂರದಿಂದ ಆಗಮನಕ್ಕಾಗಿ ಬೆಂಗಳೂರು ಘಟಕ ವಿಶೇಷ ಬಹುಮಾನ ಪಡೆದು ಕೊಂಡವು. ಮಾಣಿ ಘಟಕದ ಸದಸ್ಯರ ನಾಡಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ, ದತ್ತಿ ನಿಧಿ ಸಮಿತಿ ಸಂಚಾಲಕ ಪ್ರಶಾಂತ ಅನಂತಾಡಿ ಸ್ವಾಗತಿಸಿದರು. ಟಿ.ಶಂಕರ ಸುವರ್ಣ ಪ್ರಸ್ತಾವನೆಗೈದರು. ಮುದ್ದು ಮೂಡುಬೆಳ್ಳೆ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಸಮಿತಿಯ ಕಾರ್ಯದರ್ಶಿ ಜೀವನ್ ಕೊಲ್ಯ ವಂದಿಸಿದರು. ರೇಣುಕಾ ಕಣಿಯೂರು, ಸ್ಮಿತೇಶ್ ಬಾರ್ಯ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!