ಯುವವಾಹಿನಿ (ರಿ.) ಮಂಗಳೂರು ಘಟಕ

ಕೇದಾರನಾಥದಲ್ಲಿ ರಾರಾಜಿಸಿದ ಯುವವಾಹಿನಿ ಮತ್ತು ತುಳುನಾಡ ಬಾವುಟ

ಮಂಗಳೂರು:- ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಸುಮಾರು 26 ಜನ ಯಾತ್ರಾರ್ಥಿಗಳು, 2 ಜನ ಟೂರ್ ಮ್ಯಾನೇಜರ್, 3 ಜನ ಬಾಣಸಿಗರನ್ನು ಒಳಗೊಂಡ 31 ಜನರ ತಂಡವು ಸಪ್ಟೆಂಬರ್ 8ರಿಂದ ಸೆಪ್ಟೆಂಬರ್ 19ರವರೆಗೆ 11 ದಿವಸಗಳ ಚಾರುಧಾಮ ಕೇದರನಾಥ ಯಾತ್ರೆ ಮಂಗಳೂರಿನಿಂದ ಹೊರಟಿತು. ದೆಹಲಿ, ಹರಿದ್ವಾರ, ಗಂಗಾ ಆರತಿ, ಯಮುನೋತ್ರಿ, ಉತ್ತರ ಕಾಶಿ ವಿಶ್ವನಾಥ ಮಂದಿರ, ಗಂಗಾ ನದಿ, ಸೀತಾಪುರ, ಕೇದಾರನಾಥ ದೇವಾಲಯ, ಬದರಿನಾಥ ದೇವಾಲಯ, ಭೀಮನ ಸೇತುವೆ, ಗಣೇಶ ಗುಹೆ, ವ್ಯಾಸ ಗುಹೆ, ಪಿಪಿಎಲ್ ಕೋಟು, ಋಷಿಕೇಶ, ಮುಂತಾದ ಪುಣ್ಯ ಕ್ಷೇತ್ರಗಳ ದರ್ಶನ ಮಾಡಿಕೊಂಡು ಸೆಪ್ಟೆಂಬರ್ 19ರಂದು ವಾಪಸ್ ಮಂಗಳೂರು ತಲುಪಿತು. ಸೆಪ್ಟೆಂಬರ್ 15ರಂದು ಕಾಲ್ನಡಿಗೆಯಲ್ಲಿ ಕೇದಾರನಾಥ ಕ್ಷೇತ್ರಕ್ಕೆ ಹೊರಟ ಯಾತ್ರಿ ತಂಡವು ವಿಶ್ವದ ಎತ್ತರದ ಸ್ಥಳವಾದ ಕೇದಾರನಾಥ ಕ್ಷೇತ್ರದಲ್ಲಿ ಯುವವಾಹಿನಿಯ ಹಾಗೂ ಪರಶುರಾಮ ಸೃಷ್ಟಿ ತುಳುನಾಡಿನ ಧ್ವಜವನ್ನು ಬಾನೆತ್ತರಕ್ಕೆ ಹಾರಿಸಿ, ಹೊಸ ಇತಿಹಾಸ ಬರೆಯಿತು. ಘಟಕದ ಪ್ರವಾಸ ಸಂಚಾಲಕರಾದ ಪ್ರವೀಣ್ ಸಾಲ್ಯಾನ್ ಕೀರೋಡಿ ಮತ್ತು ಲೋಹಿತ್ ಕಲ್ಪನೆ ಯವರ ಮುಂದಾಳುತ್ವದಲ್ಲಿ 31 ಜನರ ಯಾತ್ರಿ ತಂಡವು ಶಿಸ್ತು ಬದ್ಧವಾಗಿ, ಅತ್ಯಂತ ಯಶಸ್ವಿಯಾಗಿ ಪ್ರವಾಸವನ್ನು ಮುಗಿಸಿದ್ದು, ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ಮತ್ತು ಸದಸ್ಯರು ಯಾತ್ರಾರ್ಥಿಗಳನ್ನು ಅಭಿನಂದಿಸಿದರು. ಬೊಳ್ಳಿ ಟೂರಿಸಂನ ಮಾಲಕರಾದ ಅರುಣ್ ಮತ್ತು ಅವರ ಸಿಬ್ಬಂದಿ ವರ್ಗದವರು ಸಂಪೂರ್ಣ ಸಹಕಾರವನ್ನು ನೀಡಿದರು. ಪ್ರಸಿದ್ಧ ವಾಸ್ತುತಜ್ಞರಾದ ರಾಜ್ ಕುಮಾರ್, ಕೇಂದ್ರ ಸಮಿತಿ ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಯಶವಂತ್ ಪೂಜಾರಿ, ಎಸ್ ಪಿವೈಎಸ್ಎಸ್ ನ ಯೋಗಗುರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ, ರಾಜೇಶ್ ಅಮೀನ್, ಯೋಗೀಶ್ ಕುಮಾರ್, ಸದಾನಂದ ಕುಳಾಯಿ ದಂಪತಿಗಳು, ಗೋಪಾಲ ಪೂಜಾರಿ ರೇಖಾ ದಂಪತಿಗಳು, ಮತ್ತಿತರ ಬಂಧುಗಳು ಈ ಚಾರುಧಾಮ ಯಾತ್ರೆಯಲ್ಲಿ ಬಾಗವಹಿಸಿದ್ದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!