ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ತುಳುನಾಡಿನ ದೈವಾರಾಧನೆಯಲ್ಲಿ ಬಿಲ್ಲವರ ಪಾತ್ರ ಅನನ್ಯ :- ನಟ ನಿರ್ಮಾಪಕ ತಮ್ಮಣ್ಣ ಶೆಟ್ಟಿ

ಪಡುಬಿದ್ರಿ :- ಮೇಲ್ಜಾತಿ, ಕೆಳಜಾತಿ, ಅಸ್ಪೃಶ್ಯತೆ ಅತಿಯಾಗಿದ್ದ ಕೇರಳವನ್ನು ಬದಲಾಯಿಸಿದ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳು ಪ್ರಾತ: ಸ್ಮರಣೀಯರು , ಪ್ರಯೋಗ, ಪ್ರತಿಷ್ಟೆ, ಪ್ರವೇಶ ವಿಶೇಷ ತತ್ವವನ್ನು ಪ್ರತಿಪಾದಿಸಿದವರು. ಜಗತ್ತಿನ ಎರಡನೇ ಮತ್ತು ಏಷ್ಯದ ಪ್ರಥಮ ಸರ್ವಧರ್ಮ ಸಮ್ಮೇಳನದ ಆಯೋಜನೆಯ ಖ್ಯಾತಿ ಇವರದ್ದಾಗಿದೆ. ಹಿಂದುವಿನ ಜ್ಞಾನ, ಬುದ್ಧನ ಕರುಣೆ, ಜೀಸಸ್ ನ ಪ್ರೀತಿ, ಮಹಮ್ಮದರ ಸಹೋದರತೆ ಇದು ವಿಶ್ವಧರ್ಮ ಎಂದು ಸರ್ವಧರ್ಮ ಸಮ್ಮೇಳನದಲ್ಲಿ ಹೇಳಿದರು. ಅಸ್ಪೃಶ್ಯತೆ ಬದಿಗಿರಿಸಿ ಜಗತ್ತಿಗೆ ಬೆಳಕನ್ನು ನೀಡಿದ ಮಹಾನ್ ದಾರ್ಶನಿಕರು ಶಿವಗಿರಿಯಲ್ಲಿ ನಂದಾದೀಪವಾಗಿ ಬೆಳಗಿ ಜಗತ್ತಿಗೆ ಬೆಳಕಾಗಿದ್ದಾರೆ. ನಾರಾಯಣಗುರು ಮತ್ತು ಭೂ ಮಸೂದೆ ಕಾನೂನು ಬರದಿದ್ದರೆ ನಾವೆಲ್ಲರೂ ಪ್ರಾಣಿಗಿಂತ ಕಡೆಯಾಗಿರುತ್ತಿದ್ದೆವು. ಮತಾಂತರವನ್ನು ತಡೆಗಟ್ಟಲು ಶ್ರಮಿಸಿದರು. ನಾರಾಯಣಗುರುಗಳನ್ನು ನಂಬುವ ಬಿಲ್ಲವ ಸಮಾಜ ರಾಜಕೀಯ ಶಕ್ತಿಗಳ ಪ್ರಭಾವಕ್ಕೆ ಒಳಗಾಗುತ್ತಿದೆ. ಕೇವಲ ಸಣ್ಣ ವೃತ್ತಕ್ಕೆ ಅವರ ಹೆಸರನ್ನು ಸೀಮಿತವಾಗದೆ ಕೇಂದ್ರ, ರಾಜ್ಯಗಳ ವ್ಯವಸ್ಥೆಯ ಭಾಗವಾಗಿ ಅವರ ಹೆಸರು ಶಾಶ್ವತವಾಗಬೇಕು. ಬಿಲ್ಲವ ಸಮಾಜ ಶ್ರೀಮಂತ ವ್ಯವಸ್ಥೆ ಹೊಂದಿದ್ದು, ದೈವಾರಾಧನೆ, ಸಂಧಿ ಪಾಡ್ದನ, ನಾಥ ಪಂಥದಲ್ಲಿಯೂ ಬಿಲ್ಲವರ ಇತಿಹಾಸವಿದೆ. ತುಳುನಾಡಿನ ದೈವಾರಾಧನೆಯಲ್ಲಿ ಪ್ರಮುಖ ಪಾತ್ರ ಬಿಲ್ಲವರದ್ದು, ದೈವಾರಾಧನೆಯಲ್ಲಿ ವೈದಿಕ ಪದ್ಧತಿ ಇಲ್ಲ ಎಂದು ಶಂಭುಗ ಮಾಣಿಕ್ಯ ಬೀಡು, ಕನ್ನಡ ಚಿತ್ರೋದ್ಯಮದ ನಟ ನಿರ್ಮಾಪಕ ತಮ್ಮಣ್ಣ ಶೆಟ್ಟಿ, ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇವರ ಜಂಟಿ ಆಶ್ರಯದಲ್ಲಿ 21 ಸೆಪ್ಟೆಂಬರ್ 2022ರಂದು ಪಡುಬಿದ್ರಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರಗಿದ ಬ್ರಹ್ಮಶ್ರೀ ನಾರಾಯಣಗುರುಗಳ 94ನೇ ಪುಣ್ಯತಿಥಿಯಂದು ತುಳುನಾಡಿನ ದೈವಾರಾಧನೆಯಲ್ಲಿ ಬಿಲ್ಲವರು ಎಂಬ ವಿಷಯದ ಉಪನ್ಯಾಸ ನೀಡಿ ಮಾತನಾಡಿದರು.
ಕಾರ್ಯಕ್ರಮವನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉದ್ಘಾಟಿಸಿದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸಂದರ್ಭೋಚಿತವಾಗಿ ಮಾತನಾಡಿದರು.
ಪಡುಬಿದ್ರಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಅರ್ಚಕರಾದ ಚಂದ್ರಶೇಖರ ಶಾಂತಿ, ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಕಾರ್ಯದರ್ಶಿ ಲಕ್ಷ್ಮಣ್ ಡಿ ಪೂಜಾರಿ, ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಕಾರ್ಯದರ್ಶಿ ಡಾ| ಐಶ್ವರ್ಯ, ಬಿಲ್ಲವ ಸಂಘದ ಪದಾಧಿಕಾರಿಗಳು, ದೈವಾರಾಧನೆಯ ಚಾಕರಿಯವರು, ಯುವವಾಹಿನಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಬ್ರಹ್ಮಶ್ರೀ ನಾರಾಯಣಗುರುಗಳ 94 ನೇ ಪುಣ್ಯ ತಿಥಿಯ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಭಜನೆ ಮತ್ತು ಮಹಾ ಮಂಗಳಾರತಿ ಸೇವೆಯೂ ಜರಗಿತು.
ನಾರಾಯಣಗುರು ಮಹಿಳಾ ಮಂಡಳಿಯ ಸದಸ್ಯೆಯರು ಪ್ರಾರ್ಥಿಸಿದರು. ಯುವವಾಹಿನಿ( ರಿ.)ಪಡುಬಿದ್ರಿ ಘಟಕದ ಅಧ್ಯಕ್ಷರಾದ ಶಾಶ್ವತ್ ಪೂಜಾರಿ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಯಶೋದ ಪ್ರಸ್ತಾವನೆಗೈದರು. ರವಿರಾಜ್ ಎನ್ ಕೋಟ್ಯಾನ್ ಮತ್ತು ಪೂರ್ಣಿಮ ವಿಧಿತ್ ಕಾರ್ಯಕ್ರಮ ನಿರೂಪಿಸಿದರು. ಪಡುಬಿದ್ರಿ ಘಟಕದ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾದ ಸಂತೋಷ್ ಕರ್ನಿರೆ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!