ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ''ಕೆಸರ್ ಡೊಂಜಿ ದಿನ''ಕೆಸರುಗದ್ದೆ ಕ್ರೀಡಾಕೂಟ

ಕೃಷಿ ಸಂಸ್ಕೃತಿಯಲ್ಲಿ ಯುವಸಮುದಾಯ ತೊಡಗಿಸಿಕೊಳ್ಳಬೇಕು:- ಸಚಿವ ಸುನೀಲ್ ಕುಮಾರ್ ಅಭಿಮತ

ಬೆಳ್ತಂಗಡಿ :- “ಕೆಸರುಗದ್ದೆ ಕ್ರೀಡಾಕೂಟ ಇಂದು ಜನಾಕರ್ಷಣೆ ಪಡೆಯುತ್ತಿದೆ. ಯಾವುದೇ ಒಂದು ಸಂಘಟನೆ ಬಲಪಡಿಸಲು ಈ ರೀತಿಯ ಕ್ರೀಡಾಕೂಟ ಅಗತ್ಯ. ಇಂತಹ ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ಬಿಲ್ಲವ ಸಮುದಾಯವನ್ನು ಒಟ್ಟುಗೂಡಿಸುವ ಕಾರ್ಯ ಯುವವಾಹಿನಿ ಸಂಘಟನೆಯಿಂದಾಗಲಿ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ವೇಣೂರು ಮೂಡುಕೋಡಿ ಗ್ರಾಮದ ನೆಲ್ಲಿಗುಡ್ಡೆ ನೋನೊಟ್ಟು ಗದ್ದೆಯಲ್ಲಿ ಭಾನುವಾರ ನಡೆದ ”ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಕೆಸರಿನಲ್ಲಿನ ಕ್ರೀಡಾಕೂಟ ಕೇವಲ ಒಂದು ದಿನ ಒಂದು ವಾರಕ್ಕೆ ಸೀಮಿತವಾಗಬಹುದು. ಅದರ ಹಿಂದೆ ಕೃಷಿ ಚಟುವಟಿಕೆ ವಿಸ್ತಾರವಾಗಬೇಕು ಎಂಬ ಕಾಳಜಿ ಇದೆ. ನಾನಾ ರೀತಿಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬದುಕಿನ ಅರ್ಥವನ್ನೇ ಕಳೆದುಕೊಳ್ಳುವ ಬದಲು ಕೃಷಿ ಸಂಸ್ಕೃತಿಯಲ್ಲಿ ಯುವಕರು ತೊಡಗಿಸಿಕೊಂಡು ಅಭಿವೃದ್ಧಿಯನ್ನು ಕಾಣುವಂತಾಗಬೇಕು’ ಎಂದರು.


ಮಾಜಿ ಶಾಸಕ ಕೆ.ವಸಂತ ಬಂಗೇರ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಕೆಸರುಗದ್ದೆ ಕ್ರೀಡಾಕೂಟ ಗ್ರಾಮೀಣ ಜನರಿಗೆ ತನ್ನನ್ನು ತಾನು ತೊಡಗಿಸಿಕೊಳ್ಳಲು ಉತ್ತಮ ಅವಕಾಶ. ಇದರಿಂದ ಗ್ರಾಮೀಣ ಪ್ರದೇಶದ ರೈತರ ಮಕ್ಕಳು ಸಂಘಟನೆಯನ್ನು ಅರ್ಥೈಯಿಸಿಕೊಳ್ಳುವ ಜತೆಗೆ ಸಮಾಜದಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ’ ಎಂದರು. ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಮಾತನಾಡಿ, ”ಯುವವಾಹಿನಿ ಸಂಘಟನೆ ಶಿಸ್ತಿಗೆ ಹೆಸರಾದುದು. ಬಿಲ್ಲವ ಯುವಕರನ್ನು ತೊಡಗಿಸಿಕೊಂಡಿರುವ ಈ ಸಂಘಟನೆ ನಾರಾಯಣ ಗುರುಗಳ ತತ್ವ ಸಂದೇಶದಂತೆ ನಡೆಯುತ್ತಿರುವುದು ಶ್ಲಾಘನೀಯ” ಎಂದರು. ಕ್ರೀಡಾಕೂಟವನ್ನು ಗಣೇಶ್ ನಾರಾಯಣ್ ಪಂಡಿತ್ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು ಧ್ವಜಾರೋಹಣ ನೆರವೇರಿಸಿದರು.


ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಜಿತಾ ವಿ ಬಂಗೇರ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಉದ್ಯಮಿ ಶೈಲೇಂದ್ರ ವೈ. ಸುವರ್ಣ ಯುವವಾಹಿನಿ ಕೇಂದ್ರ ಸಮಿತಿಯ ಕೋಶಾಧಿಕಾರಿ ಜಗದೀಶ್ಚಂದ್ರ ಡಿ.ಕೆ, ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಯೋಗೀಶ್ ಬಿಕೊಟ್ಟು, ಕಾರ್ಯದರ್ಶಿ ಪ್ರಶಾಂತ್ ಪಡೋಡಿ, ಕೋಶಾಧಿಕಾರಿ ರಕ್ಷಿತ್ ಬಜಿರೆ, ಆರೋಗ್ಯ ಮತ್ತು ಕ್ರೀಡಾ ನಿರ್ದೇಶಕರಾದ ಸುಜಿತ್ ಬಜಿರೆ, ಅಕ್ಷಿತ್ ಕಂಬಳದಡ್ಡ, ಸ್ವಾಗತ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕುಕ್ಕೇಡಿ, ಸಂಚಾಲಕರಾದ ಶಿವಪ್ರಕಾಶ್ ಅಂಬಾಶ್ರೀ, ಅರುಣ್ ಕೋಟ್ಯಾನ್, ಸತೀಶ್ ಪಿ.ಎನ್ . ಇದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಆರೋಗ್ಯ ಮತ್ತು ಕ್ರೀಡಾ ನಿರ್ದೇಶಕ ನವೀನ್ ಪಚ್ಚೇರಿ ಸ್ವಾಗತಿಸಿದರು. ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು. ಸತೀಶ್ ಹೊಸ್ಮಾರ್ ಕಾರ್ಯಕ್ರಮ ನಿರೂಪಿಸಿದರು. ಮನಸೂರೆಗೊಂಡ ಸ್ಪರ್ಧೆ: ಕೆಸರುಗದ್ದೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳು ಮನಸೂರೆಗೊಂಡವು. ಪುರುಷ, ಮಹಿಳೆ ಮತ್ತು ಮಕ್ಕಳ ವಿಭಾಗಕ್ಕೆ ವಿವಿಧ ಕ್ರೀಡೆಗಳಾದ ವಾಲಿಬಾಲ್, ಕಬಡ್ಡಿ, ಹಗ್ಗ ಜಗ್ಗಾಟ, 100 ಮೀ.ಓಟ, ಉಪ್ಪಿನ ಮೂಟೆ ಓಟ, ರಿಲೇ, 5 ಕಾಲಿನ ಓಟ, ಮಾನವ ಪಿರಮಿಡ್, ಹಾಳೆ ಓಟ, ಸಂಗೀತ ಕುರ್ಚಿ, ತ್ರೋಬಾಲ್ ಮುಂತಾದ ಆಟಗಳು ನಡೆದವು. ಇರುವೈಲ್ ಪಾನಿಲ ಬಾಡ ಪೂಜಾರಿಯವರ ಕಂಬಳದ ತಾಟೆ ಮತ್ತು ಬೊಟ್ಟಿಮಾರ್ ಕೋಣಗಳಿಗೆ ಸನ್ಮಾನ ನಡೆಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!