ಯುವವಾಹಿನಿ (ರಿ.) ಕೊಲ್ಯ ಘಟಕ

ಉಚಿತ ಹುಚ್ಚು ನಾಯಿ ನಿಯಂತ್ರಣಾ ಲಸಿಕಾ ಶಿಬಿರ

ಕೊಲ್ಯ :- ಯುವವಾಹಿನಿ(ರಿ.) ಕೊಲ್ಯ ಘಟಕ ಮತ್ತು ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ,ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಆಶ್ರಯದಲ್ಲಿ ಮತ್ತು ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಇದರ ಸಹಕಾರದಲ್ಲಿ ಉಚಿತ ಹುಚ್ಚು ನಾಯಿ ನಿಯಂತ್ರಣಾ ಲಸಿಕಾ ಶಿಬಿರ ಮತ್ತು ದೇಸೀ ಬೆಕ್ಕು ಮತ್ತು ನಾಯಿ ಮರಿಗಳ ದತ್ತು ಕೊಡುವ ಕಾರ್ಯಕ್ರಮವು ದಿನಾಂಕ 25 ಸೆಪ್ಟೆಂಬರ್ 2022ರಂದು ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಇದರ ವಠಾರದಲ್ಲಿ ಜರಗಿತು. ಪರಿಸರದ 150 ಕಿಂತ ಜಾಸ್ತಿ ಸಾಕುನಾಯಿ, ಬೆಕ್ಕು ಗಳಿಗೆ ಹುಚ್ಚು ನಾಯಿ ನಿಯಂತ್ರಣಾ ಲಸಿಕೆಯನ್ನು ಉಚಿತವಾಗಿ ನೀಡುವುದರ ಮೂಲಕ ರೇಬಿಸ್ ರೋಗದ ಬಗ್ಗೆ ಜನಜಾಗೃತಿ ಮೂಡಿಸಲಾಯಿತು.ಈ ಯಶಸ್ವೀ ಶಿಬಿರದಲ್ಲಿ ಹಲವು ಜನರು ದೇಸೀ ನಾಯಿ ಮರಿಗಳನ್ನು ದತ್ತು ಪಡೆಯುವ ಮೂಲಕ ಮೂಕಪ್ರಾಣಿಗಳಿಗೆ ಆಶ್ರಯದಾತರಾದರು.
ಯುವವಾಹಿನಿ (ರಿ.)ಕೊಲ್ಯ ಘಟಕದ ಅಧ್ಯಕ್ಷರಾದ ಸುಂದರ್ ಸುವರ್ಣ, ಸಮಾಜ ಸೇವೆ ನಿರ್ದೇಶಕರಾದ ಜೀವನ್ ಬೆರಿಕೆ, ರೋಟರಿ ಸಮುದಾಯದಳ ಕೊಲ್ಯ ಇದರ ಅಧ್ಯಕ್ಷರಾದ ಆನಂದ್ ಮಲಯಾಳ ಕೋಡಿ, ಘಟಕದ ಸ್ಥಾಪಕ ಅಧ್ಯಕ್ಷರು,ಮಾಜಿ ಅಧ್ಯಕ್ಷರು,ಪದಾಧಿಕಾರಿಗಳು ಮತ್ತು ಸದಸ್ಯರು ಮತ್ತು ಇನ್ನಿತರ ಜಂಟಿ ಸಂಸ್ಥೆಗಳ ಅಧ್ಯಕ್ಷರು,ಪದಾಧಿಕಾರಿಗಳು ಭಾಗವಹಿಸಿದ್ದರು. ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಇದರ ವೈದ್ಯರ ತಂಡ ಹಾಗೂ ಸ್ವಯಂ ಸೇವಕರ ತಂಡವು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!