ಯುವವಾಹಿನಿ (ರಿ.) ಮಂಗಳೂರು ಘಟಕ

ಅಭಿಯಂತರರ (ಇಂಜಿನಿಯರ್) ದಿನ ಆಚರಣೆ

ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ದಿನಾಂಕ 20 ಸೆಪ್ಟೆಂಬರ್ 2022ರಂದು (ಅಭಿಯಂತರರ)ಇಂಜಿನಿಯರ್ ದಿನವನ್ನು ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಸಭೆಗೆ ಮೊದಲು ಭಜನೆಯೊಂದಿಗೆ ಗುರುಪೂಜೆ ಮಾಡಿ ಎಲ್ಲಾ ಸದಸ್ಯರಿಗೆ ಪ್ರಸಾದ ನೀಡಲಾಯಿತು. ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಬಂದಂತಹ ಎಲ್ಲಾ ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು, ಸದಸ್ಯರನ್ನು ಹಾಗೂ ಚಾರುಧಾಮ ಯಾತ್ರೆಯ ಯಾತ್ರಾರ್ಥಿಗಳನ್ನು ಆತ್ಮೀಯವಾಗಿ ಸಭೆಗೆ ಸ್ವಾಗತಿಸಿದರು. ಸಭೆಯಲ್ಲಿ ವಿಶ್ವ ವಿಖ್ಯಾತ ಮಂಗಳೂರು ದಸರಾ ಮಹೋತ್ಸವದಲ್ಲಿ ಘಟಕವು ಹಮ್ಮಿಕೊಂಡಿದ್ದ, ಕೌಂಟರ್ ಸೇವೆ, ಉಚಿತ ಶರಬತ್ತು ಸೇವೆ ಹಾಗೂ ಶಿವಗಿರಿ ತೀರ್ಥಾಟನಾ ಅರಿವಿನ ನಡಿಗೆ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆದು, ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಎಲ್ಲರು ಸಹಕರಿಸುವಂತೆ ಅಧ್ಯಕ್ಷರು ತಿಳಿಸಿದರು.
ಚಾರುಧಾಮ ಯಾತ್ರಾರ್ಥಿಗಳು ತಮ್ಮ ಅನಿಸಿಕೆ, ಅನುಭವಗಳನ್ನು ಸಭೆಯಲ್ಲಿ ಹಂಚಿಕೊಂಡರು. ಯಾತ್ರೆಗೆ ಸಹಕರಿಸಿದ ಪ್ರಸಿದ್ಧ ವಾಸ್ತುಶಾಸ್ತ್ರಜ್ಞ ರಾಜಕುಮಾರ್ ಹಾಗೂ ಬೊಳ್ಳಿ ಟೂರಿಸಂನ ಮಾಲಕರಾದ ಅರುಣ್ ರವರನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಎಲ್ಲಾ ಯಾತ್ರಾರ್ಥಿಗಳಿಗೆ ಹೂ ನೀಡಿ ಗೌರವಿಸಲಾಯಿತು. (ಅಭಿಯಂತರರ) ಇಂಜಿನಿಯರ್ ದಿನದ ಪ್ರಯುಕ್ತ ಚಾರುಧಾಮ ಯಾತ್ರೆಯಲ್ಲಿ ಬಾಗವಹಿಸಿದ್ದ ಅಭಿಯಂತರಾದ ರಾಜೀವ್ ಅಮೀನ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ರಾಜೀವ್ ರವರು ಇಂಜಿನಿಯರ್ ದಿನದ ಆಚರಣೆಯ ಬಗ್ಗೆ ಸಭೆಯಲ್ಲಿ ಮಾತನಾಡಿ ಸಂತೋಷ ವ್ಯಕ್ತಪಡಿಸಿದರು. ಘಟಕದಲ್ಲಿರುವ ಅಭಿಯಂತರುಗಳಾದ ಗಳಾದ ಗಣೇಶ್ ವಿ. ಕೋಡಿಕಲ್, ಅಶೋಕ್ ಕುಮಾರ್, ಸಾಧು ಪೂಜಾರಿ, ಪ್ರಕಾಶ್ ಕುಮಾರ್, ಶ್ರವಣ್ ಕೂಳೂರು, ತಿಲಕ್ ರಾಜ್ ಸುವರ್ಣ ರವರನ್ನು ಗೌರವಿಸಲಾಯಿತು. ಘಟಕದ ಪ್ರಚಾರ ನೀರ್ದೆಶಕರಾಗಿದ್ದು, ಇಂಜಿನಿಯರಿಂಗ್ ವಿದ್ಯಾಭ್ಯಾಸದೊಂದಿಗೆ ಮನೆಯ ಜವಾಬ್ದಾರಿಯನ್ನು ವಹಿಸಿಕೊಂಡು, ಪಾರ್ಟ್ ಟೈಮಲ್ಲಿ ಕೆಲಸ ಮಾಡಿಕೊಂಡು, ಅದರೊಟ್ಟಿಗೆ ಬಿಡುವಿನ ಸಮಯದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ, ಈಗ ಉದ್ಯೋಗದ ನಿಮಿತ್ತ ಬೆಂಗಳೂರುಗೆ ಹೋಗಲಿರುವ ವಿಖ್ಯಾತ್ ಕೆ. ಎಸ್. ರವರನ್ನು ಶಾಲು ಹೊದಿಸಿ, ಫಲ ಪುಷ್ಪ, ಗುರುಪೂಜೆಯ ಪ್ರಸಾದ ನೀಡಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಘಟಕದ ಶೈಕ್ಷಣಿಕ ದತ್ತು ಸ್ವೀಕಾರ ನಿಧಿಗೆ ಆರ್ಥಿಕ ಸಹಾಯ (ದೇಣಿಗೆ) ನೀಡಿದ ಶೋಭಾ ಮಾಲೆಮಾರ್ ಮತ್ತು ಸತೀಶ್ ಎ. ರವರನ್ನು ಗೌರವಿಸಲಾಯಿತು.
ಕಾರ್ಯದರ್ಶಿ ಅಶೋಕ್ ಅಂಚನ್ ರವರು ಗತ ಸಭೆಯ ವರದಿಯನ್ನು ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡರು. ಪ್ರವಾಸದ ಸಂಚಾಲಕರಾದ ಪ್ರವೀಣ್ ಸಾಲ್ಯಾನ್ ಕಿರೋಡಿಯವರು ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಎಲ್ಲರಿಗೂ ಘಟಕದ ವತಿಯಿಂದ ಸವಿಯಾದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!