ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

25ರ ಸಂಭ್ರಮ – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮದ 15 ನೇ ಕಾರ್ಯಕ್ರಮವನ್ನು ದಿನಾಂಕ 29 ಅಕ್ಟೋಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2017-2018ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅಶೋಕ್ ಕುಮಾರ್ ಪಡ್ಪು ಇವರ “ಸಾನಿಧ್ಯ” ಮನೆಯಲ್ಲಿ ನಡೆಯಿತು.ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಜರಾಮ್ ಕೆ.ಬಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ ಅಧ್ಯಕ್ಷಾವಧಿಯಲ್ಲಿ ಯಶಸ್ವಿಯಾಗಿ ಮುನ್ನಡೆಸಿದ ಅಶೋಕ್ ಕುಮಾರ್ ಪಡ್ಪು, ಸೌಮ್ಯ ಅಶೋಕ್ ಕುಮಾರ್ ದಂಪತಿಗಳನ್ನು ಶ್ರೀಯುತರ ತಾಯಿ ಗಿರಿಜಾ ಮತ್ತು ಮಗಳಾದ ಸಾನಿಧ್ಯ ಇವರೊಂದಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡುವುದರ ಮೂಲಕ ಗೌರವಿಸಲಾಯಿತು.ಗೌರವ ಸ್ವೀಕರಿಸಿ ಮಾತನಾಡಿದ ಅಶೋಕ್ ಕುಮಾರ್ ಪಡ್ಪುರವರು ಯುವವಾಹಿನಿಯ ಜೊತೆಗಿನ ಒಡನಾಟ ತಮ್ಮ ಜೀವನದಲ್ಲಿ ನಾಯಕತ್ವ ಗುಣವನ್ನು ಬೆಳೆಸುವುದರ ಜೊತೆಗೆ ಕೇಂದ್ರ ಸಮಿತಿಯಲ್ಲಿ ಕೆಲಸ ಮಾಡುವ ಅವಕಾಶ ಒದಗಿಸಿತು ಎಂದು ಹೇಳಿದರು ಹಾಗೆಯೇ ತಮ್ಮ ಅಧ್ಯಕ್ಷಾವಧಿಯಲ್ಲಿ ಘಟಕವನ್ನು ಅತ್ಯುತ್ತಮ ಮಟ್ಟದಲ್ಲಿ ನಡೆಸಲು ಸಹಕರಿಸಿದ ಸರ್ವರ ಸಹಕಾರವನ್ನು ಮತ್ತೊಮ್ಮೆ ನೆನೆಪಿಸಿದರು.
ಘಟಕದ ಗೌರವ ಸಲಹೆಗಾರರಾದ ವರದರಾಜ್. ಎಂ, ಘಟಕದ ಅಧ್ಯಕ್ಷರಾದ ಕುಶಾಲಪ್ಪ ಹತ್ತು ಕಳಸೆ, ಸಮಾಜದ ಮುಖಂಡರಾದ ದೇವಪ್ಪಪೂಜಾರಿ ಪಡ್ಪು, ಮಾಜಿ ಅಧ್ಯಕ್ಷರಾದ ಗುಣಕರ ಅಗ್ನಾಡಿ , ಅಜಿತ್ ಕುಮಾರ್ ಪಾಲೇರಿ, ಕೃಷ್ಣಪ್ಪ ಪೂಜಾರಿ , ಚಂದ್ರಶೇಖರ್ ಕೆ ಸನೀಲ್ , ಡಾ. ಆಶಿತ್ ಎಂ.ವಿ, ನವೀನ್ ಪಡ್ಪು , ಡೀಕಯ್ಯ ಗೌಂಡತ್ತಿಗೆ, ಲೋಕೇಶ್ ಬೆತ್ತೋಡಿ , ಸುಂದರ ಪೂಜಾರಿ ಎಲಿಯ, ಹರೀಶ್ ಕುಮಾರ್ ಪಾಲೆತ್ತಡಿ ಹಿರಿಯರಾದ ಬೊಮ್ಮಯ್ಯ ಬಂಗೇರ, ಘಟಕದ ಕಾರ್ಯದರ್ಶಿ ಉದಯ್ ಪೂಜಾರಿ,ಜೊತೆ ಕಾರ್ಯದರ್ಶಿ ಅನಿತಾ ಸತೀಶ್ , ಘಟಕದ ಉಪಾಧ್ಯಕ್ಷರಾದ ಮನೋಹರ್ ಆಟಲ್ , ಮನೋಜ್ ಸಾಲಿಯಾನ್, ಬಿಲ್ಲವ ಗ್ರಾಮ ಸಮಿತಿ ಬೆಳ್ಳಿಪಾಡಿಯ ಅಧ್ಯಕ್ಷರಾದ ವಸಂತ್ ಪೂಜಾರಿ, ಹಿರೇಬಂಡಾಡಿ ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ವಸಂತ ಕಜೆ, ಬಜತ್ತೂರು ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ಸೋಮಸುಂದರ್, ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷರಾದ ಕುಶಾಲಪ್ಪ ಹತ್ತುಕಳಸೆ ಸ್ವಾಗತಿಸಿ, ಘಟಕದ ಜೊತೆ ಕಾರ್ಯದರ್ಶಿ ಅನಿತಾ ಸತೀಶ್ ಧನ್ಯವಾದ ಸಮರ್ಪಿಸಿದರು . ಘಟಕದ ಮಾಜಿ ಅಧ್ಯಕ್ಷರಾದ ಲೋಕೇಶ್ ಬೆತ್ತೋಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!