ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ಗುರುಗಳ ತತ್ವಾದರ್ಶವೇ ಯುವ ಸಮುದಾಯಕ್ಕೆ ಪ್ರೇರಣೆ:- ರಕ್ಷಿತ್ ಶಿವರಾಮ್

ಉಪ್ಪಿನಂಗಡಿ :- ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಕಳೆದ 35 ವರ್ಷಗಳಿಂದ ಸಮಾಜಮುಖಿ ಚಿಂತನೆಗಳೊಂದಿಗೆ ಸಾಗುತ್ತಿರುವ ಯುವವಾಹಿನಿಯ ಯುವಸಮುದಾಯಕ್ಕೆ ಗುರುಗಳ ಪ್ರೇರಣೆಯೇ ದಾರಿದೀಪ ಎಂದು ಬೆಳ್ತಂಗಡಿಯ ಬೆಸ್ಟ್ ಫೌಂಡೇಶನ್ ಇದರ ಅಧ್ಯಕ್ಷರಾದ ರಕ್ಷಿತ್ ಶಿವರಾಮ್ ತಿಳಿಸಿದರು. ಅವರು ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ಇವರ ಮನೆಯಲ್ಲಿ ದಿನಾಂಕ 19 ನವೆಂಬರ್2022 ರಂದು ಜರಗಿದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಘಟಕವನ್ನು ತಮ್ಮ ಅಧ್ಯಕ್ಷಾವಧಿಯಲ್ಲಿ ಯಶಸ್ವಿಯಾಗಿ ಮುನ್ನಡೆಸಿದ ಜಯವಿಕ್ರಮ್ ದಂಪತಿಗಳನ್ನು ಮಾತಪಿತರಾದ ದೇವರಾಜ್ ಕಲ್ಲಾಪು ದಂಪತಿಗಳೊಂದಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡುವುದರ ಮೂಲಕ ಗೌರವಿಸಲಾಯಿತು.
ಗೌರವ ಸ್ವೀಕರಿಸಿ ಮಾತನಾಡಿದ ಜಯವಿಕ್ರಮ್ ಕಲ್ಲಾಪು ತಾನು ಯಾವುದೇ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಳ್ಳಲು ಮೂಲ ಕಾರಣ ಯುವವಾಹಿನಿ ಸಂಸ್ಥೆ, ಇದರಿಂದಾಗಿ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಅವಕಾಶ ದೊರಕಿತು ಎಂದರು. ಹಾಗೆಯೇ ತಮ್ಮ ಅಧ್ಯಕ್ಷವಧಿಯಲ್ಲಿ ಘಟಕವನ್ನು ಅತ್ಯುತ್ತಮ ಮಟ್ಟದಲ್ಲಿ ನಡೆಸಲು ಸಹಕರಿಸಿದ ಸರ್ವರ ಸಹಕಾರವನ್ನು ಮತ್ತೊಮ್ಮೆ ನೆನೆಪಿಸಿದರು.. ಈ ಸಂದರ್ಭದಲ್ಲಿ ನಮ್ಮ ಸಮಾಜದ ನಿವೃತ್ತ ಯೋಧ ರೋಹಿತ್ ಸುಣ್ಣಾಜೆ ಮತ್ತು ಬಾಲಪ್ರತಿಭೆ ಸೃಜನಾ ಅವರನ್ನು ಗುರುತಿಸಲಾಯಿತು. ಘಟಕದ ಗೌರವ ಸಲಹೆಗಾರರಾದ ವರದರಾಜ್. ಎಂ, ಘಟಕದ ಅಧ್ಯಕ್ಷರಾದ ಕುಶಾಲಪ್ಪ ಹತ್ತು ಕಳಸೆ, ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಜರಾಮ್ ಕೆ.ಬಿ , ಮಾಜಿ ಅಧ್ಯಕ್ಷರಾದ ಗುಣಕರ್ ಅಗ್ನಾಡಿ , ಕೃಷ್ಣಪ್ಪ ಪೂಜಾರಿ , ಚಂದ್ರಶೇಖರ್ ಸನೀಲ್, ಜಯಾನಂದ ಕಲ್ಲಾಪು, ರವೀಂದ್ರ ದಲ್ಕಾಜೆ, ಗುಣಕರ ಮುಗ್ಗಗುತ್ತು, ಶೇಖರ್ ಗೌಂಡತ್ತಿಗೆ, ಜನಾರ್ಧನ ನೂಜ, ಯುವ ಬ್ರಿಗೇಡ್ ನ ಪವನ್ ಸಾಲ್ಯಾನ್, ಹಿರಿಯರಾದ ಉಮಾನಾಥ ಕೋಟ್ಯಾನ್, ಜಯ ಬಂಗೇರ ಪಾಂಡವರಕಲ್ಲು, ವಿಶ್ವನಾಥ ಸುಣ್ಣಾಜೆ, ಗಿರಿಧರ ಪೂಜಾರಿ ಫುದ್ದೋಟ್ಟು, ವೆಂಕಪ್ಪ ಪೂಜಾರಿ, ದೇವಪ್ಪ ದಾಸ್, ಕಿಶೋರ್ ಚಂದ್, ವಿನಯ್ ಕುಮಾರ್, ಪವಿತ್ರ ಪ್ರಕಾಶ್, ಘಟಕದ ಕಾರ್ಯದರ್ಶಿ ಉದಯ್ ಪೂಜಾರಿ,ಜೊತೆ ಕಾರ್ಯದರ್ಶಿ ಅನಿತಾ ಸತೀಶ್ , ಘಟಕದ ಉಪಾಧ್ಯಕ್ಷರಾದ ಮನೋಹರ್ ಆಟಲ್ , ಮನೋಜ್ ಸಾಲಿಯಾನ್ ಪದಾಧಿಕಾರಿಗಳಾದ ಉಮೇಶ್ , ತುಳಸೀಧರ್ ಬೆನೆಪ್ಪು, ಮನೋಹರ್ ಕೆಳಗಿನಮನೆ, ಮಾಧವ ಪೂಜಾರಿ, ಬಿಲ್ಲವ ಗ್ರಾಮ ಸಮಿತಿ ಬೆಳ್ಳಿಪಾಡಿಯ ಅಧ್ಯಕ್ಷರಾದ ವಸಂತ್ ಪೂಜಾರಿ, ಘಟಕದ ಸದಸ್ಯರಾದ ರಮ್ಯಾ ರಾಜರಾಮ್,ನಯನ ಮನೋಹರ್, ರೂಪಲತಾ ಚಂದ್ರಶೇಖರ್, ಗಂಗಾಧರ್ ಪುರಿಯ,ವಿಕ್ರಮ್ ಪೂಜಾರಿ, ಮೇಷಾ,ಕು.ಅಕ್ರತಿ,ಧೃಣಿತಾ,ವಿನುತಾ,ಆರ್ಥಿಕ್,ರಿತೀಶಾ,ಧ್ರುವಿ,ಅನುಜ್ಞಾ,ಅಭಿಜ್ಞಾ,ವನಿತಾ,ಸ್ನೇಹ,ಅಂಬಿಕಾ,ಸುಶ್ಮಿತಾ, ಸಂತೋಷ್ ಕೆಳಗಿನಮನೆ , ಚೇತನ್ ಪೊಲ್ಲಕೋಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕುಶಾಲಪ್ಪ ಹತ್ತುಕಳಸೆ ಸ್ವಾಗತಿಸಿ, ಘಟಕದ ಉಪಾಧ್ಯಕ್ಷರಾದ ಮನೋಜ್‌ ಸಾಲ್ಯಾನ್ ಧನ್ಯವಾದ ಸಮರ್ಪಿಸಿದರು. ಘಟಕದ ಉಪಾಧ್ಯಕ್ಷರಾದ ಮನೋಹರ್ ಆಟಲ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!