ಯುವವಾಹಿನಿ(ರಿ) ಕೇಂದ್ರ ಸಮಿತಿ * ಯುವವಾಹಿನಿ (ರಿ) ಉಡುಪಿ ಘಟಕ

ರಕ್ಷಿತ್ ಆರ್. ಕೋಟ್ಯಾನ್ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಕಟಪಾಡಿ ಶ್ರೀ ರಮೇಶ್ ಕೋಟ್ಯಾನ್ ಹಾಗೂ ಇಂದಿರಾ ಆರ್. ಕೋಟ್ಯಾನ್ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ರಕ್ಷಿತ್ ಆರ್. ಕೋಟ್ಯಾನ್ ಓರ್ವ ಸತತ ಪರಿಶ್ರಮದ ಮೂಲಕ ದೇಹದಾರ್ಡ್ಯತೆಯ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದ ಯುವಕ.

ಶಿರ್ವದ ಸೈಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮುಗಿಸಿ ಪ್ರಸ್ತುತ ಜಿಲ್ಲೆಯ ಪ್ರತಿಷ್ಠಿತ ಆಳ್ವಾಸ್ ಕಾಲೇಜು, ಮೂಡಬಿದ್ರಿಯಲ್ಲಿ ತಮ್ಮ ಪದವಿ ಶಿಕ್ಷಣವನ್ನು ಮುಂದುವರಿಸುತ್ತಿರುವ ರಕ್ಷಿತ್ ಶಿಕ್ಷಣದೊಂದಿಗೆ ಕ್ರೀಡಾ ಸಾಧನೆಯ ಮೇರು ಶಿಖರದತ್ತ ಧಾವಿಸುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಚಾರ.

ಕಿರಿವಯಸ್ಸಿನಲ್ಲಿ ದೇಹದಾರ್ಡ್ಯತೆಯತ್ತ ಆಕರ್ಷಿತರಾದ ನಂತರ ತನ್ನ ಸಾಧನೆಯ ಒಂದೊಂದೇ ಮೆಟ್ಟಿಲನ್ನು ಏರಲಾರಂಭಿಸಿ ಜಿಲ್ಲಾ ಮಟ್ಟದಲ್ಲಿ 5 ಚಿನ್ನ, 1 ಬೆಳ್ಳಿ ಪದಕ ಗಳಿಸಿ ಮತ್ತೆ ಹಿಂದಿರುಗಿ ನೋಡಲಿಲ್ಲ. ನೋಡ ನೋಡುತ್ತಿರುವಂತೆ ರಾಜ್ಯಮಟ್ಟದಲ್ಲಿ ಅದ್ಭುತ 13 ಚಿನ್ನ, 6 ಬೆಳ್ಳಿ ಪದಕಗಳನ್ನು ಬಾಚಿ ಜನರು ನಿಬ್ಬೆರಗಾಗುವಂತೆ ಮಾಡಿದ್ದಾರೆ ಶ್ರೀ ರಕ್ಷಿತ್ ಕೋಟ್ಯಾನ್.

ಯುನಿವರ್ಸಿಟಿ ಮಟ್ಟದಲ್ಲಿ ಚಿನ್ನದ ಪದಕದೊಂದಿಗೆ ಸತತ 3 ಬಾರಿ ಮಿಸ್ಟರ್ ಮಂಗಳೂರು ಯುನಿವರ್ಸಿಟಿ, ರಾಷ್ಟ್ರ ಮಟ್ಟದ ಆಲ್ ಇಂಡಿಯಾ ಯೂನಿವರ್ಸಿಟಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ಇತ್ತೀಚೆಗೆ ಆಂಧ್ರ ಪ್ರದೇಶದಲ್ಲಿ ನಡೆದ ಆಲ್ ಇಂಡಿಯ ಯೂನಿವರ್ಸಿಟಿ ಸ್ಪರ್ಧೆಯಲ್ಲಿ ಮಿಸ್ಟರ್ ಆಲ್ ಇಂಡಿಯಾ ಯೂನಿವರ್ಸಿಟಿ-2016 ಪ್ರಶಸ್ತಿಯನ್ನು ಬಾಚಿಕೊಂಡು ನಮ್ಮ ಸಮುದಾಯವೇ ಮೈನವಿರೇಳಿಸುವಂತೆ ಮಾಡಿದ್ದಾರೆ.

ಶಿಸ್ತು, ಸಂಯಮ ಮತ್ತು ಉತ್ತಮ ನಡತೆಯ ಈ ಯುವಕ ಕಟಪಾಡಿಯ ವಜ್ರ ಜಿಮ್‌ನಲ್ಲಿ ತನ್ನ ಅಭ್ಯಾಸ ಮುಂದುವರೆಸುತ್ತಿದ್ದು ಸಮಾಜದ ಕೀರ್ತಿ ಪತಾಕೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸುವುದು ಖಚಿತ. ಬ್ರಹ್ಮಶ್ರೀ ನಾರಾಯಣ ಗುರುಗಳ ಕೃಪೆ ಹಾಗೂ ಹಿರಿಯರ ಮತ್ತು ಸಮಾಜದ ಎಲ್ಲರ ಆಶೀರ್ವಾದ ಅವರ ಮೇಲಿದೆ. ಯುವ ಸಾಧನಾ ಪುರಸ್ಕಾರವನ್ನು ಅವರಿಗೆ ನೀಡಿ, ಯುವವಾಹಿನಿಯ ಸಮಸ್ತ ಸದಸ್ಯರು ಅತ್ಯಂತ ಹೆಮ್ಮೆ ಪಡುತ್ತೇವೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!