ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ

ಯುವವಾಹಿನಿ ಯುವಸಾಧನಾ ಪುರಸ್ಕಾರ ಪ್ರದಾನ

ಬಂಟ್ವಾಳ : ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ಸಂಘಟನಾ ಕ್ಷೇತ್ರದ ಸಾಧಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಧಾರ್ಮಿಕ ಕ್ಷೇತ್ರದ ಸಾಧಕ ಮನೋಜ್ ಕಟ್ಟೆಮಾರ್, ಸಾಂಸ್ಕೃತಿಕ ಕ್ಷೇತ್ರದ ಸಾಧಕಿ ಅಕ್ಷತಾ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಯುವವಾಹಿನಿ ಯುವ ಸಾಧನಾ ಪುರಸ್ಕಾರ

ಸಂಘಟನಾ ಕ್ಷೇತ್ರದ ಸಾಧಕರು  ಶ್ರೀನಿವಾಸ ಪೂಜಾರಿ ಮೆಲ್ಕಾರ್ ಗುರುಜ್ಯೋತಿ ಶಾಮಿಯಾನ ಸಂಸ್ಥೆಯನ್ನು ಹುಟ್ಟಿ ಹಾಕಿ ಸತತ 25 ವರ್ಷಗಳಿಂದ ಮುನ್ನಡೆಸಿಕೊಂಡು ಬರುವುದರ ಜೊತೆಗೆ ಬಂಟ್ವಾಳ ಯುವಸಂಗಮದ ಸ್ಥಾಪಕ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ವಿವಿಧ ಹುದ್ದೆ ಅಲಂಕರಿಸಿ ಸರ್ಕಾರಿ ಶಾಲಾಮಕ್ಕಳಿಗೆ ಉಚಿತ ಸಮವಸ್ತ್ರ, ಮೂಲಭೂತ ಸಹಾಯ ಕಟ್ಟಡ, ಶೌಚಾಲಯ ವಿದ್ಯಾನಿಧಿ,ಉದ್ಯೋಗ ಮೇಳ, ರಕ್ತದಾನ ಶಿಬಿರ, ಪರಿಸರ ಸಂರಕ್ಷಣೆಯ ಜನಜಾಗೃತಿ ಹೀಗೆ ಸಾಮಾಜಿಕವಾಗಿ, ಯುವಜನತೆಯನ್ನು ಹುರಿದುಂಬಿಸಿ ಯಶಸ್ವಿ ಸಂಘಟನಕಾರರಾಗಿ, ನಿಸ್ವಾರ್ಥ ಸೇವಾ ಮಾಣಿಕ್ಯದಾತರು ಆಗಿರುತ್ತಾರೆ.

ಸಾಮಾಜಿಕ ಕ್ಷೇತ್ರದ ಸಾಧಕರು ದೈವಾಂಶ ಸಂಭೂತ ಮನೋಜ್ ಕಟ್ಟೆಮಾರ್
ದೈವ ಪ್ರೇರಿತ ಅಭಯದ ನುಡಿಯ ಜೊತೆಗೆ ಸಮಾಜದ ನೊಂದವರ ಪಾಲಿನ ಆಶಾಕಿರಣ ವಾಗಿ ಮಂತ್ರದೇವತಾ ಜನಸೇವಾ ಟ್ರಸ್ಟ್ ನ ಮೂಲಕ ಅತಿಥಿ ಶಿಕ್ಷಕರಿಗೆ ಗೌರವಧನ ಸಹಾಯ, ವಿದ್ಯಾನಿಧಿ, ಶಾಲಾಕಾಲೇಜಿಗೆ ವಸತಿ ನಿವೇಶನ, ಬಡರೋಗಿಗಳಿಗೆ ಆರ್ಥಿಕ ನೆರವು ಬಡಕುಟುಂಬಗಳ ವಯಸ್ಕರಿಗೆ ಉಚಿತ ಕಲ್ಯಾಣ

ಅಪರೂಪದ ಮಿಮಿಕ್ರಿ ಕಲಾವಿದೆ ಅಕ್ಷತಾ
ಯಶಸ್ವಿ ಮಿಮಿಕ್ರಿ ಕಲಾವಿದೆಯಾಗಿ ಮಿಮಿಕ್ರಿ ಕುರಿತಾದ ಕಾರ್ಯಗಾರ, ಗಾಯನ, ಮೈಮ್ ಆಕ್ಟ್, ನಾಟಕ, ನೃತ್ಯ,ಯಕ್ಷಗಾನ, ಆನ್ ದಿ ವೇ ಶಿಕ್ಷಣ ಅಭಿಯಾನ 2022 ಬೊಂಬೆಯಾಟದ ಕುರಿತಾದ ಯಶಸ್ವಿ ಕಾರ್ಯಗಾರದಲ್ಲಿ ತೊಡಗಿಸಿಕೊಂಡ ಅಸಾಧಾರಣ ಪ್ರತಿಭಾವಂತೆ ಅಂತರ್ ರಾಷ್ಟ್ರ ಮಟ್ಟದಲ್ಲೂ ಸನ್ಮಾನ ಮುಡಿಗೇರಿಸಿಕೊಂಡ ಪ್ರತಿಭೆ ಹೀಗೆ ಮೂವರ ಸಾಧಕರ ಸೇವೆಯನ್ನು ಪರಿಗಣಿಸಿ ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶದಲ್ಲಿ 2023 ನೇ ಸಾಲಿನ ಯುವವಾಹಿನಿ ಯುವ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಾರಂಭದ ಉದ್ಘಾಟಕರಾದ ಪದ್ಮರಾಜ್ ಆರ್., ಕೇಂದ್ರ ಸಮಿತಿ ಅಧ್ಯಕ್ಷರು ರಾಜೇಶ್ ಬಿ., ನಾರ್ದನ್ ಸ್ಲೈ ನಿರ್ದೇಶಕರಾದ ಕೃತೀನ್ ಅಮೀನ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರು ಡಾ।ತುಕಾರಾಮ ಪೂಜಾರಿ, ಉದ್ಯಮಿಗಳಾದ ನಿರ್ಮಲ್ ಜಗನ್ನಾಥ ಬಂಗೇರ, ನಟೇಶ್ ಪೂಜಾರಿ, ಲೋಕೇಶ್ ಪೂಜಾರಿ ಕಲ್ಲಡ್ಕ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ, ವಾರ್ಷಿಕ ಸಮಾವೇಶದ ನಿರ್ದೇಶಕರಾದ ಭುವನೇಶ್ ಪಚ್ಚಿನಡ್ಕ, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಧಾನ ಕಾರ್ಯದರ್ಶಿ ಕುಸುಮಾಕರ ಕುಂಪಲ, ನೂತನ ಅಧ್ಯಕ್ಷರಾದ ಹರೀಶ್.ಕೆ.ಪೂಜಾರಿ, ನೂತನ ಪ್ರಧಾನ ಕಾರ್ಯದರ್ಶಿ ಜಗದೀಶ್‌ಚಂದ್ರ ಡಿ.ಕೆ ಹಾಗೂ ಯುವವಾಹಿನಿಯ 33 ಘಟಕಗಳ ಅಧ್ಯಕ್ಷರುಗಳ ಸಮ್ಮುಖದಲ್ಲಿ ಕೊಂಬು ವಾದ್ಯಗಳ ಹಿಮ್ಮೇಳದ ಸ್ವಾಗತದೊಂದಿಗೆ ವೇದಿಕೆಗೆ ಬರಮಾಡಿಕೊಂಡು, ಶ್ರೀಯುತರು ನಡೆದ ಬಂದ ಹಾದಿಯ ರೂಪುರೇಷೆ ಸಾಧನಾ ಪರಿಚಯವನ್ನು ಸಾಕ್ಷ್ಯ ಚಿತ್ರದ ಮೂಲಕ, ಮೈಸೂರು ಪೇಟ, ಜರಿತಾರಿ ಶಾಲು, ಅತ್ಯಾಕರ್ಷಕ ಸ್ಮರಣಿಕೆ ಹಾಗೂ ಯುವ ಸಾಧನಾ ಪ್ರಶಸ್ತಿ 2023 ಪತ್ರ ನೀಡಿ ಗೌರವ ಆದರಗಳಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!