ಯುವವಾಹಿನಿ(ರಿ.) ಸುರತ್ಕಲ್ ಘಟಕದ ಪದಗ್ರಹಣ ಸಮಾರಂಭ

ನಾರಾಯಣ ಗುರುವರ್ಯರ ಸಂದೇಶಗಳು ಯುವಜನತೆಗೆ ದಾರಿದೀಪ: ಉಮೇಶ್ ಎಂ. ಕರ್ಕೇರ

ಸುರತ್ಕಲ್: ಯುವಜನತೆಗೆ ದಿನನಿತ್ಯದ ಬದುಕಿನ ಬಾಳ ಬುಟ್ಟಿಯಲ್ಲಿ ನಾರಾಯಣ ಗುರುವರ್ಯರ ಜೀವನಚರಿತ್ರೆಯ ಆದರ್ಶ ಸಂದೇಶಗಳು ದಾರಿದೀಪವಾಗಿರಬೇಕು ಹಾಗೂ ಪರರಿಗೆ ಸದಾ ಒಳಿತನ್ನು ಬಯಸುವಂತಿರಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಪದವಿಪೂರ್ವ ಕಾಲೇಜು ಕಾಟಿಪಳ್ಳದ ಪ್ರಾಂಶುಪಾಲರಾದ ಉಮೇಶ್ ಎಂ. ಕರ್ಕೇರರರು ಹೇಳಿದರು.
ಅವರು ಯುವವಾಹಿನಿ(ರಿ.) ಸುರತ್ಕಲ್ ಘಟಕದ 2023-2024ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ದಿನಾಂಕ 07-01-2024 ರಂದು ದೇವಾಡಿಗ ಸಭಾಭವನ ಹೊಸಬೆಟ್ಟುವಿನಲ್ಲಿ ಉದ್ಘಾಟಿಸಿ ಮಾತನಾಡಿದರು.

ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ತಾರ ಅಶೋಕ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಯಮಿ ಸತೀಶ್ ಮುಂಚೂರ್ ಹಾಗೂ ಸಮಾಜ ಸೇವಕ ದಿಲೀಪ್ ಮುಂಚೂರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಯುವವಾಹಿನಿ ಸುರತ್ಕಲ್ ಘಟಕದ 2023-24 ನೇ ಸಾಲಿನ ಸಮಾಜಮುಖಿ ಕಾರ್ಯಗಳು, ಕಥೆ, ಕವನ, ಲೇಖನಗಳನ್ನೊಳಗೊಂಡ ಚಿಲುಮೆ ವಾರ್ಷಿಕ ವಿಶೇಷಾಂಕವನ್ನು ಬಿಡುಗಡೆಗೊಳಿಸಿದರು. ಚಿಲುಮೆ ಸಂಪಾದಕರಾದ ವಿವೇಕ್ ಬಿ.ಕೋಟ್ಯಾನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಾರ್ಷಿಕ ಕ್ರೀಡಾಕೂಟದ ಬಹುಮಾನವನ್ನು ಕ್ರೀಡಾ ನಿರ್ದೇಶಕರು ಪ್ರಕಾಶ್ ಸಾಲಿಯಾನ್ ವಿತರಿಸಿದರು.

ಯುವವಾಹಿನಿ(ರಿ.) ಕೇಂದ್ರ ಸಮಿತಿ ಅಧ್ಯಕ್ಷರು ಹರೀಶ್ ಕೆ. ಪೂಜಾರಿ ಇವರು 2023-2024ನೇ ಸಾಲಿನ ಅಧ್ಯಕ್ಷರಾದ ಅಶೋಕ್ ಕುಮಾರ್ ಹಾಗೂ ಕಾರ್ಯದರ್ಶಿ ಸುಲತಾ ನೇತ್ರತ್ವದ ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾ ವಿಧಿ ಭೋಧಿಸಿ ಶುಭ ಹಾರೈಸಿದರು.

ನೂತನ ಕಾರ್ಯಕಾರಿ ಸಮಿತಿಗೆ ಕೆಂದ್ರ ಸಮಿತಿ ಅಧ್ಯಕ್ಷರಿಂದ ಪ್ರತಿಜ್ಞಾ ವಿಧಿ ಬೋಧನೆ

ಪದಗ್ರಹಣದ ದಿನ ಅಟೋಟ ಸ್ಪರ್ಧೆಯನ್ನು ಏರ್ಪಡಿಸಿ, ಬಹುಮಾನ ವಿತರಿಸಲಾಯಿತು. ಭಾಸ್ಕರ್ ಸಾಲಿಯಾನ್ ಆಟೋಟ ಸ್ಪರ್ಧೆಯನ್ನು ನಿರ್ವಹಿಸಿದ್ದರು. ಕಾರ್ಯದರ್ಶಿ ರೇವತಿ ನವೀನ್ ಘಟಕದ ವಾರ್ಷಿಕ ವರದಿಯನ್ನು ಸಭೆಯ ಮುಂದಿಟ್ಟರು. ದೀವಿತ್ ಪ್ರಾರ್ಥಿಸಿದರು, ಕಾರ್ಯಕ್ರಮದ ಸಂಚಾಲಕರಾದ ಶೈಲೇಶ್ ಕೋಟ್ಯಾನ್ ಧನ್ಯವಾದ ಕೋರಿದರು. ಸ್ವಾಗತ ಘಟಕ ಅಧ್ಯಕ್ಷರು ತಾರ ಅಶೋಕ್ ಮಾಡಿದರು
ನಿರೂಪಣೆ ಸದಸ್ಯರಾದ ಗಾಯತ್ರಿ ಸತೀಶ್ ಮತ್ತು ಮಾಜಿ ಅಧ್ಯಕ್ಷರಾದ ಭಾಸ್ಕರ್ ಸಾಲ್ಯಾನ್ ಮಾಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!