ಯುವವಾಹಿನಿ ಉಪ್ಪಿನಂಗಡಿ ಘಟಕದ ಪದಗ್ರಹಣ ಸಮಾರಂಭ

ಯುವವಾಹಿನಿಯಿಂದ ಸದೃಡ ಸಮಾಜ ನಿರ್ಮಾಣ : ಶ್ರೀಲತಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ

ಉಪ್ಪಿನಂಗಡಿ :  ಯುವಕರಿಗಾಗಿ ಯುವಕರಿಂದಲೇ ಸ್ಥಾಪನೆಯಾಗಿ ಇಂದು ಸಮಾಜಮುಖಿ ಕಾರ್ಯಗಳೊಂದಿಗೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ  ಹೆಮ್ಮೆಯ ಯುವವಾಹಿನಿ ಸಂಘಟನೆಯಿಂದ  ಸದೃಢ ಸಮಾಜ ನಿರ್ಮಾಣ ಮಾಡುವ ಮೂಲಕ ಮಹತ್ತರ ಹೆಜ್ಜೆಯನ್ನಿಡುತ್ತಿದೆ ಎಂದು  ಪುತ್ತೂರು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ  ಶ್ರೀಲತಾ ಇವರು ತಿಳಿಸಿದರು.

ಅವರು ದಿನಾಂಕ 2023 ನೇ ಡಿಸೆಂಬರ್ 16, ಶನಿವಾರದಂದು ಉಪ್ಪಿನಂಗಡಿಯ ರೋಟರಿ ಭವನದಲ್ಲಿ ಜರಗಿದ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಮನೋಹರ್ ಕುಮಾರ್‌ರವರು ವಹಿಸಿ ಪ್ರಸಕ್ತ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
2023-24ನೇ ಸಾಲಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತ್‌ಗಳಲ್ಲಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಿಲ್ಲವ ಸಮಾಜದ ಬಂಧುಗಳನ್ನು ಹಾಗೂ ಬನ್ನೆಂಗಲ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಗುಣಕರ ಆಗ್ನಾಡಿ ಮತ್ತು ಪುತ್ತೂರು ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾದ ಲೋಕೇಶ್ ಬೆತ್ತೋಡಿ ಇವರನ್ನು ಗೌರವಿಸಿ ಅಭಿನಂದಿಸಲಾಯಿತು.

ನಿಕಟಪೂರ್ವ ಅಧ್ಯಕ್ಷರು ಹಾಗೂ ಆಯ್ಕೆ ಸಮಿತಿಯ ಸಂಚಾಲಕರಾದ ಕುಶಾಲಪ್ಪ ಹತ್ತುಕಳಸೆ ಇವರು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಸಭೆಗೆ ಪರಿಚಯಿಸಿದರು.
ಕೇಂದ್ರ ಸಮಿತಿಯ ಅಧ್ಯಕ್ಷರಾದ  ರಾಜೇಶ್ ಬಿ. ಇವರು ನೂತನ ತಂಡಕ್ಕೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಘಟಕದ ನಾಲ್ಕು ಮಂದಿ ಸದಸ್ಯರುಗಳ ಮಕ್ಕಳು ಕ್ರೀಡಾ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸಭೆಯಲ್ಲಿ ಅಭಿನಂಧಿಸಲಾಯಿತು. ಅದೇ ರೀತಿ ಆರ್ಥಿಕವಾಗಿ ಹಿಂದುಳಿದ ಮೂರು ಮಂದಿ ವಿದ್ಯಾರ್ಥಿಗಳಿಗೆ ಒಟ್ಟು ₹25000/- ವಿದ್ಯಾ ನಿಧಿಯನ್ನು ವಿತರಿಸಲಾಯಿತು.
ಸಾಂತ್ವನ ನಿಧಿ ಯೋಜನೆಯಿಂದ ಹಿರೇಬಂಡಾಡಿ ಗ್ರಾಮದ ಸಂಜೀವ ಪೂಜಾರಿ ಇವರ ವೈದ್ಯಕೀಯ ಚಿಕಿತ್ಸೆಗಾಗಿ ಘಟಕದಿಂದ ₹8000/- ಹಾಗೂ ಉದ್ಯಮಿ ನಟೇಶ್ ಪೂಜಾರಿ , ಬೆಂಗಳೂರು ಇವರು ನೀಡಿದ ₹5000/- ಹೀಗೆ ಒಟ್ಟು ₹13000/- ವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

ನಾಣ್ಯಪ್ಪ ಪೂಜಾರಿ, ಶಿಲ್ಪಾ ದಂಪತಿಗಳ ಪುತ್ರ ಮಾ. ಧ್ರುವ ಪೆನ್ಸಿಲ್ ಆರ್ಟ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವನ್ನು ಬೆಂಗಳೂರಿನ ಉದ್ಯಮಿ ನಟೇಶ್‌ ಪೂಜಾರಿ ಬಿಡುಗಡೆಗೊಳಿಸಿ ಮುಖ್ಯ ಆತಿಥಿಗಳಾಗಿ ಭಾಗವಹಿಸಿ  ಶುಭಹಾರೈಸಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯವರಾದ  ಪ್ರವೀಣ್ ಓಂಕಲ್ ರವರು ನೂತನ ತಂಡಕ್ಕೆ ಶುಭಹಾರೈಸಿದರು.
ನೂತನ ಅಧ್ಯಕ್ಷರಾದ ಸೋಮಸುಂದರ ಕೊಡಿಪ್ಪಾನ ಇವರು ತಮ್ಮ ಅವಧಿಯಲ್ಲಿ ಉಪ್ಪಿನಂಗಡಿ ಯುವವಾಹಿನಿಯನ್ನು ಸಮಾಜಮುಖಿಯಾಗಿ ಬೆಳೆಸುವಲ್ಲಿ ಎಲ್ಲರ ಸಹಕಾರವನ್ನು ಯಾಚಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ರಾಜೇಶ್ .ಬಿ ಹಾಗೂ ಘಟಕದ ಅಧ್ಯಕ್ಷರಾದ ಮನೋಹರ್ ಹಾಗೂ ಮಾಧವ ಬಿ.ಕೆ ಇವರನ್ನು ಘಟಕದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.

ಘಟಕದ ಕಾರ್ಯದರ್ಶಿ ಮಾಧವ ಬಿ.ಕೆ ಪ್ರಸಕ್ತ ಸಾಲಿನ ಸಾಧನೆಗಳ ವರದಿ ಮಂಡಿಸಿದರು.  ಡಾ.ರಾಜಾರಾಮ್ ಕೆ.ಬಿ ಪ್ರಸ್ತಾಪಿಸಿದರು. ಅಭಿಜ್ನಾ ಪ್ರಾರ್ಥಿಸಿ, ಅಜಿತ್ ಕುಮಾರ್ ಸ್ವಾಗತಿಸಿ, ನೂತನ ಕಾರ್ಯದರ್ಶಿ ಅನಿತಾ ಸತೀಶ್ ಧನ್ಯವಾದ ಸಲ್ಲಿಸಿದರು. ಲೋಕೇಶ್ ಬೆತ್ತೋಡಿ ಕಾರ್ಯಕ್ರಮ ನಿರ್ವಹಸಿದರು. ನಾಣ್ಯಪ್ಪ ಪೂಜಾರಿ ಸಹಕರಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!