ಯುವವಾಹಿನಿ ಕೂಳೂರು ಘಟಕದ ಪದಗ್ರಹಣ, ವಿದ್ಯಾನಿಧಿ ಹಸ್ತಾಂತರ

ವಿದ್ಯಾ ನಿಧಿ ಸ್ವೀಕರಿಸಿದ ಮಕ್ಕಳು ಮುಂದಿನ ದಿನಗಳಲ್ಲಿ ವಿದ್ಯಾ ನಿಧಿ ಕೊಡುವಂತಹ ಮನಸುಳ್ಳವರಾಗಿ ಬೆಳೆಯಬೇಕು : ಡಾ.ಉಜ್ವಲ್ ಯು ಸುವರ್ಣ, ಎಂ.ಬಿ.ಬಿ.ಎಸ್, ಎಂ.ಎಸ್ (ಆರ್ಥೋ)

ಕೂಳೂರು : ವಿದ್ಯಾನಿಧಿ ಸ್ವೀಕರಿಸಿದ ವಿದ್ಯಾರ್ಥಿಗಳು ಉದ್ಯೋಗ ಪಡೆದ ನಂತರ ವಿದ್ಯಾನಿಧಿ ನೀಡುವ ಮನೋಭಾವ ಬೆಳೆಸಿಕೊಂಡು, ಮುಂಬರುವ ದಿನಗಳಲ್ಲಿ ವಿದ್ಯಾ ನಿಧಿ ವಿತರಿಸುವಂತಾಗಲಿ ಎಂದು ಡಾ.ಉಜ್ವಲ್ ಯು.ಸುವರ್ಣ ಎಂದು ಹಾರೈಸಿದರು.

ಅವರು ದಿನಾಂಕ 21-01-2024 ರಂದು ಕೂಳೂರು ಫಲ್ಗುಣಿ ಸಭಾಂಗಣ ನಡೆದ ಯುವವಾಹಿನಿ (ರಿ.) ಕೂಳೂರು ಘಟಕದ ಪದಗ್ರಹಣ ಹಾಗೂ ವಿದ್ಯಾನಿಧಿ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಯಶವಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ರವಿಶಂಕರ್ ಮಿಜಾರ್ ರವರು ಘಟಕದ ವಾರ್ಷಿಕ ಪತ್ರಿಕೆ ಮಾತೃಸ್ಪರ್ಶ ಕಿರುಹೊತ್ತಿಗೆ ಬಿಡುಗಡೆಗೊಳಿಸಿ,
ಯುವಕರು ವಿದ್ಯೆ, ಉದ್ಯೋಗದ ಜೊತೆಗೆ ಸ್ವ ಉದ್ಯೋಗದ ಕಡೆಗೂ ಗಮನ ಹರಿಸಿ ಉದ್ಯೋಗ ಸೃಷ್ಟಿಗೆ ಗಮನ ಹರಿಸಬೇಕು ಎಂದು ತಿಳಿಸಿದರು, ಈ ಸಂದರ್ಭದಲ್ಲಿ ಮಾತೃ ಸ್ವರೂಪರಾದ ಜಾನಕಿ ಹಾಗೂ ಮೀನಾಕ್ಷಿ ಹಾಗೂ ಮಾತೃ ಸ್ಪರ್ಶ ಸಂಪಾದಕರಾದ ಸಂಗೀತಾ ರವರು ಉಪಸ್ಥಿತರಿದ್ದರು.

2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಸಮಿತಿಯ ಸಂಚಾಲಕರಾದ ದೀಕ್ಷಿತ್ ಸಿ ಎಸ್ ಸಭೆಗೆ ಪರಿಚಯಿಸಿದರು.

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ, ಯುವವಾಹಿನಿ (ರಿ) ಕೂಳೂರು ಘಟಕದ ಸಾಧನೆಯನ್ನು ಶ್ಲಾಘಿಸಿದರು.

2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಇಂದಿರಾ ಸುರೇಶ್, ಪ್ರಥಮ ಉಪಾಧ್ಯಕ್ಷರಾಗಿ ಲತೀಶ್ ಪೂಜಾರಿ, ದ್ವಿತೀಯ ಉಪಾಧ್ಯಕ್ಷರಾಗಿ ಗೀತಾ ವಸಂತ್, ಕಾರ್ಯದರ್ಶಿಯಾಗಿ ನೈನಾ ಕೋಟ್ಯಾನ್, ಜೊತೆ ಕಾರ್ಯದರ್ಶಿಯಾಗಿ ಕೀರ್ತನ ಸುಜಿತ್, ಕೋಶಾಧಿಕಾರಿಯಾಗಿ ವಿಘ್ನೇಶ್ ಬೋಳೂರು, ಸಂಘಟನಾ ಕಾರ್ಯದರ್ಶಿಯಾಗಿ ಮುಕೇಶ್ ಹಾಗೂ ವಿವಿಧ ನಿರ್ದೇಶಕರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

2024-25 ನೇ ಸಾಲಿನ ನೂತನ ಅಧ್ಯಕ್ಷರಾದ ಇಂದಿರಾ ಸುರೇಶ್ ಮಾತನಾಡಿ ಘಟಕದ ಮಾಜಿ ಅಧ್ಯಕ್ಷರುಗಳು ಹಾಕಿದ ದಾರಿಯಲ್ಲಿ ಮುನ್ನಡೆದು ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲು ಪ್ರಯತ್ನ ಪಡುತ್ತೇನೆ ಎಂದರು.

₹1.35 ಲಕ್ಷ ರೂ ವಿದ್ಯಾನಿಧಿ ಹಸ್ತಾಂತರ ವಿದ್ಯಾನಿಧಿ ವಿತರಣೆ ಕಾರ್ಯಕ್ರಮವನ್ನು ಘಟಕದ ವಿದ್ಯಾನಿಧಿ ನಿರ್ದೇಶಕರಾದ ಸುಮಾಶಿವು ಕೋಡಿಕಲ್ ನೆರವೇರಿಸಿಕೊಟ್ಟರು. 34 ವಿದ್ಯಾರ್ಥಿಗಳಿಗೆ 1.35 ಲಕ್ಷ ಮೊತ್ತದ ವಿದ್ಯಾನಿಧಿ ವಿತರಿಸಲಾಯಿತು.

ಲಕ್ಕಿಡಿಪ್ ಡ್ರಾ ನೆರವೇರಿಸಲಾಯಿತು. ವೇದಿಕೆಯಲ್ಲಿ ಕಾರ್ಯಕ್ರಮದ ಸಂಚಾಲಕರಾದ ಲೋಕೇಶ್ ಪೂಜಾರಿ, ನೂತನ ಕಾರ್ಯದರ್ಶಿ ನೈನಾ ಕೋಟ್ಯಾನ್ ಘಟಕದ ಮಾರ್ಗದರ್ಶಕರಾದ ಜಯಾನಂದ ಅಮೀನ್, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ನಯನ ರಮೇಶ್ ಹಾಗೂ ಚಂದಪ್ಪ ಸನಿಲ್ ಉಪಸ್ಥಿತರಿದ್ದರು.
ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ ಪೂಜಾರಿ, ಕಾರ್ಯಕ್ರಮ ಉದ್ಘಾಟನೆ ಮಾಡಿದ ಡಾ. ಉಜ್ವಲ್ ಯು ಸುವರ್ಣ, 2023-24ನೇ ಅಧ್ಯಕ್ಷ ಯಶವಂತ್ ಪೂಜಾರಿರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರು ಸ್ವಾಗತಿಸಿದರು. ಸ್ವಾತಿ, ಅದ್ಮಿತಾ ಪ್ರಾರ್ಥಿಸಿದರು. ಮಾಜಿ ಅಧ್ಯಕ್ಷರು ಲೋಕೇಶ್ ಕೋಟ್ಯಾನ್ ಪ್ರಸ್ತಾವನೆಗೈದರು. ಕಾರ್ಯದರ್ಶಿ ಸುಮಂಗಲಾ.ಸಿ.ಕೋಟ್ಯಾನ್ ವಾರ್ಷಿಕ ವರದಿ ಮಂಡಿಸಿದರು, ಮಧುಶ್ರೀ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು. ಸಂಚಾಲಕರಾದ ಲೋಕೇಶ್ ಪೂಜಾರಿ ವಂದಿಸಿದರು.

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!