Yuvavahini

JAN 21, 2024 1.18 PM IST

ಯುವವಾಹಿನಿ ಕೂಳೂರು ಘಟಕದ ಪದಗ್ರಹಣ, ವಿದ್ಯಾನಿಧಿ ಹಸ್ತಾಂತರ

ವಿದ್ಯಾ ನಿಧಿ ಸ್ವೀಕರಿಸಿದ ಮಕ್ಕಳು ಮುಂದಿನ ದಿನಗಳಲ್ಲಿ ವಿದ್ಯಾ ನಿಧಿ ಕೊಡುವಂತಹ ಮನಸುಳ್ಳವರಾಗಿ ಬೆಳೆಯಬೇಕು : ಡಾ.ಉಜ್ವಲ್ ಯು ಸುವರ್ಣ, ಎಂ.ಬಿ.ಬಿ.ಎಸ್, ಎಂ.ಎಸ್ (ಆರ್ಥೋ)

ಕೂಳೂರು : ವಿದ್ಯಾನಿಧಿ ಸ್ವೀಕರಿಸಿದ ವಿದ್ಯಾರ್ಥಿಗಳು ಉದ್ಯೋಗ ಪಡೆದ ನಂತರ ವಿದ್ಯಾನಿಧಿ ನೀಡುವ ಮನೋಭಾವ ಬೆಳೆಸಿಕೊಂಡು, ಮುಂಬರುವ ದಿನಗಳಲ್ಲಿ ವಿದ್ಯಾ ನಿಧಿ ವಿತರಿಸುವಂತಾಗಲಿ ಎಂದು ಡಾ.ಉಜ್ವಲ್ ಯು.ಸುವರ್ಣ ಎಂದು ಹಾರೈಸಿದರು.

ಅವರು ದಿನಾಂಕ 21-01-2024 ರಂದು ಕೂಳೂರು ಫಲ್ಗುಣಿ ಸಭಾಂಗಣ ನಡೆದ ಯುವವಾಹಿನಿ (ರಿ.) ಕೂಳೂರು ಘಟಕದ ಪದಗ್ರಹಣ ಹಾಗೂ ವಿದ್ಯಾನಿಧಿ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಯಶವಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ರವಿಶಂಕರ್ ಮಿಜಾರ್ ರವರು ಘಟಕದ ವಾರ್ಷಿಕ ಪತ್ರಿಕೆ ಮಾತೃಸ್ಪರ್ಶ ಕಿರುಹೊತ್ತಿಗೆ ಬಿಡುಗಡೆಗೊಳಿಸಿ,
ಯುವಕರು ವಿದ್ಯೆ, ಉದ್ಯೋಗದ ಜೊತೆಗೆ ಸ್ವ ಉದ್ಯೋಗದ ಕಡೆಗೂ ಗಮನ ಹರಿಸಿ ಉದ್ಯೋಗ ಸೃಷ್ಟಿಗೆ ಗಮನ ಹರಿಸಬೇಕು ಎಂದು ತಿಳಿಸಿದರು, ಈ ಸಂದರ್ಭದಲ್ಲಿ ಮಾತೃ ಸ್ವರೂಪರಾದ ಜಾನಕಿ ಹಾಗೂ ಮೀನಾಕ್ಷಿ ಹಾಗೂ ಮಾತೃ ಸ್ಪರ್ಶ ಸಂಪಾದಕರಾದ ಸಂಗೀತಾ ರವರು ಉಪಸ್ಥಿತರಿದ್ದರು.

2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಸಮಿತಿಯ ಸಂಚಾಲಕರಾದ ದೀಕ್ಷಿತ್ ಸಿ ಎಸ್ ಸಭೆಗೆ ಪರಿಚಯಿಸಿದರು.

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ, ಯುವವಾಹಿನಿ (ರಿ) ಕೂಳೂರು ಘಟಕದ ಸಾಧನೆಯನ್ನು ಶ್ಲಾಘಿಸಿದರು.

2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಇಂದಿರಾ ಸುರೇಶ್, ಪ್ರಥಮ ಉಪಾಧ್ಯಕ್ಷರಾಗಿ ಲತೀಶ್ ಪೂಜಾರಿ, ದ್ವಿತೀಯ ಉಪಾಧ್ಯಕ್ಷರಾಗಿ ಗೀತಾ ವಸಂತ್, ಕಾರ್ಯದರ್ಶಿಯಾಗಿ ನೈನಾ ಕೋಟ್ಯಾನ್, ಜೊತೆ ಕಾರ್ಯದರ್ಶಿಯಾಗಿ ಕೀರ್ತನ ಸುಜಿತ್, ಕೋಶಾಧಿಕಾರಿಯಾಗಿ ವಿಘ್ನೇಶ್ ಬೋಳೂರು, ಸಂಘಟನಾ ಕಾರ್ಯದರ್ಶಿಯಾಗಿ ಮುಕೇಶ್ ಹಾಗೂ ವಿವಿಧ ನಿರ್ದೇಶಕರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

2024-25 ನೇ ಸಾಲಿನ ನೂತನ ಅಧ್ಯಕ್ಷರಾದ ಇಂದಿರಾ ಸುರೇಶ್ ಮಾತನಾಡಿ ಘಟಕದ ಮಾಜಿ ಅಧ್ಯಕ್ಷರುಗಳು ಹಾಕಿದ ದಾರಿಯಲ್ಲಿ ಮುನ್ನಡೆದು ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲು ಪ್ರಯತ್ನ ಪಡುತ್ತೇನೆ ಎಂದರು.

₹1.35 ಲಕ್ಷ ರೂ ವಿದ್ಯಾನಿಧಿ ಹಸ್ತಾಂತರ ವಿದ್ಯಾನಿಧಿ ವಿತರಣೆ ಕಾರ್ಯಕ್ರಮವನ್ನು ಘಟಕದ ವಿದ್ಯಾನಿಧಿ ನಿರ್ದೇಶಕರಾದ ಸುಮಾಶಿವು ಕೋಡಿಕಲ್ ನೆರವೇರಿಸಿಕೊಟ್ಟರು. 34 ವಿದ್ಯಾರ್ಥಿಗಳಿಗೆ 1.35 ಲಕ್ಷ ಮೊತ್ತದ ವಿದ್ಯಾನಿಧಿ ವಿತರಿಸಲಾಯಿತು.

ಲಕ್ಕಿಡಿಪ್ ಡ್ರಾ ನೆರವೇರಿಸಲಾಯಿತು. ವೇದಿಕೆಯಲ್ಲಿ ಕಾರ್ಯಕ್ರಮದ ಸಂಚಾಲಕರಾದ ಲೋಕೇಶ್ ಪೂಜಾರಿ, ನೂತನ ಕಾರ್ಯದರ್ಶಿ ನೈನಾ ಕೋಟ್ಯಾನ್ ಘಟಕದ ಮಾರ್ಗದರ್ಶಕರಾದ ಜಯಾನಂದ ಅಮೀನ್, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ನಯನ ರಮೇಶ್ ಹಾಗೂ ಚಂದಪ್ಪ ಸನಿಲ್ ಉಪಸ್ಥಿತರಿದ್ದರು.
ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ ಪೂಜಾರಿ, ಕಾರ್ಯಕ್ರಮ ಉದ್ಘಾಟನೆ ಮಾಡಿದ ಡಾ. ಉಜ್ವಲ್ ಯು ಸುವರ್ಣ, 2023-24ನೇ ಅಧ್ಯಕ್ಷ ಯಶವಂತ್ ಪೂಜಾರಿರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರು ಸ್ವಾಗತಿಸಿದರು. ಸ್ವಾತಿ, ಅದ್ಮಿತಾ ಪ್ರಾರ್ಥಿಸಿದರು. ಮಾಜಿ ಅಧ್ಯಕ್ಷರು ಲೋಕೇಶ್ ಕೋಟ್ಯಾನ್ ಪ್ರಸ್ತಾವನೆಗೈದರು. ಕಾರ್ಯದರ್ಶಿ ಸುಮಂಗಲಾ.ಸಿ.ಕೋಟ್ಯಾನ್ ವಾರ್ಷಿಕ ವರದಿ ಮಂಡಿಸಿದರು, ಮಧುಶ್ರೀ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು. ಸಂಚಾಲಕರಾದ ಲೋಕೇಶ್ ಪೂಜಾರಿ ವಂದಿಸಿದರು.

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!