Yuvavahini

JUL 31, 2016 6.15 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ * ಯುವವಾಹಿನಿ (ರಿ) ಉಡುಪಿ ಘಟಕ

ರಮ್ಯಾ ಸುಜೀರ್ ಇವರಿಗೆ ಯುವವಾಹಿನಿ ಯುವ ಸಾಹಿತ್ಯ ಪುರಸ್ಕಾರ – 2016

ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರು ದೈಯಡ್ಕ ಮನೆ, ತಿಮ್ಮಪ್ಪ ಪೂಜಾರಿ ಹಾಗೂ ಶ್ರೀಮತಿ ಪುಷ್ಪಾರವರ ಸುಪುತ್ರಿಯಾದ ರಮ್ಯ ಸುಜೀರ್‌ರವರು ತನ್ನ ವಿದ್ಯಾಭ್ಯಾಸದ ಜೊತೆಯಲ್ಲಿಯೇ ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿದವರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ತುಳು ಅಧ್ಯಯನ ವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿ.ಎ. ಬಿ.ಎಡ್. ಪದವಿಯನ್ನು ಪಡೆದಿರುತ್ತಾರೆ.

ಸೈಂಟ್ ಜೋನ್ಸ್ ಪದವಿ ಪೂರ್ವ ಕಾಲೇಜು ಗಂಡಸಿ ಹಾಸನ ಇಲ್ಲಿ 1 ವರ್ಷ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿರುತ್ತಾರೆ.

ಸೈಂಟ್ ಆನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆ ಇಲ್ಲಿ 3 ವರ್ಷಗಳ ಕಾಲ ಸೇವೆ ಸಲ್ಲಿಸಿ, ಪ್ರಸ್ತುತ 2 ವರ್ಷಗಳಿಂದ ಸೈಂಟ್ ಆಗ್ನೇಸ್ ಆಂಗ್ಲಮಾಧ್ಯಮ (ಸಿಬಿಎಸ್‌ಇ) ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶ್ರೀಕ್ಷೇತ್ರ ಮಂದಾರಬೈಲು ಕೊಂಚಾಡಿ ದೇರೆಬೈಲು ಇಲ್ಲಿ ನಡೆದ ’ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ-2012’ರಲ್ಲಿ ಇವರ ’ಭಾವಬಿಂಭ’ (ಕನ್ನಡ) ಕವನ ಸಂಕಲನ ಬಿಡುಗಡೆಯಾಗಿದೆ.

ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಅಡ್ಯಾರ್ ಇಲ್ಲಿ ನಡೆದ ವಿಶ್ವ ತುಳುವೆರೆ ಪರ್ಬ-2014ರಲ್ಲಿ ಡಾ| ವೀರೇಂದ್ರ ಹೆಗ್ಗಡೆಯವರಿಂದ ಇವರ ತುಳು ಕವನ ಸಂಕಲನ ದಿಬ್ಬಣ ಬಿಡುಗಡೆ ಗೊಂಡಿದೆ. ಬೇಲಿಯ ಹೂ (ಕನ್ನಡ ಕವನ ಸಂಕಲನ) ಅಚ್ಚಿನಲ್ಲಿದೆ.

* ಅಖಿಲ ಭಾರತ ತುಳು ಒಕ್ಕೂಟ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಸಹ್ಯಾದ್ರಿ ಕಾಲೇಜಿನಲ್ಲಿ ನಡೆದ ’ವಿಶ್ವ ತುಳುವೆರೆ ಪರ್ಬ-2014’ರಲ್ಲಿ ಕವನ ವಾಚನ.
* ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಕವನವಾಚನ
* ಸರ್ವೋದಯ ಸಾಹಿತ್ಯ ಸಮ್ಮೇಳನ-೨೦೧೨ರಲ್ಲಿ ಕವನವಾಚನ
* ತಾಲೂಕು ಮಟ್ಟದ ತುಳು ಕವಿಗೋಷ್ಠಿ – ೨೦೧೬ರಲ್ಲಿ ಕವನವಾಚನ
* ಆಕಾಶವಾಣಿ ಮಂಗಳೂರು ಇದರ ’ತುಳು ಯುವವಾಣಿ’ಯಲ್ಲಿ ಕವನವಾಚನ
* ಅಂತರ್ ರಾಜ್ಯಮಟ್ಟದ ಕವಿಗೋಷ್ಠಿಗೆ ಆಯ್ಕೆ ಇವು ಅವರ ಪ್ರತಿಭೆಯ ದ್ಯೋತಕಗಳು.

ರಮ್ಯ ಸುಜೀರ್‌ರವರ ಲೇಖನಿಯಿಂದ ಪ್ರಕಟಗೊಂಡ ಲೇಖನಗಳು ’ಮಿತ್ತ ಮೊಗರಾಯನ ಚಾವಡಿ’ – ಸಂತ ಅಲೋಶಿಯಸ್ ಕಾಲೇಜಿನ ವಾರ್ಷಿಕ ಸಂಚಿಕೆ – 2007 ರಲ್ಲಿ ಪ್ರಕಟಿತವಾಗಿದೆ.

ನಿನ್ನ ನೆನಪಾಗುವುದು (ಕವನ) ವಿಜಯ ಕರ್ನಾಟಕದಲ್ಲಿ 2006  ಪ್ರಕಟವಾಗಿದೆ.

ಸ್ಪಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಪ್ರಸಾರವಾಗುತ್ತಿದ್ದಂತಹ ತೆಲಿಕೆದ ಗಮ್ಮತ್ತ್ ಎಂಬ ಹಾಸ್ಯ ಕಾರ್ಯಕ್ರಮದಲ್ಲಿ ಹಾಸ್ಯನಟಿಯಾಗಿ ನಟಿಸಿದ ಅನುಭವ. ’ಗಾಳಿಗ್ ತೆಕ್ಕ್ಂಡಾ ತುಡರ್ ಎಂಬ ತುಳು ಕಿರು ಚಲನಚಿತ್ರಕ್ಕೆ ಕಂಠದಾನವನ್ನು ಮಾಡಿರುತ್ತಾರೆ.

ಶ್ರೀ ವೀರ ಹನುಮಾನ್ ದತ್ತನಗರ ಸುಜೀರು (ರಿ) ಇದರ, ಸಾಂಸ್ಕೃತಿಕ ಸಂಚಾಲಕಿಯಾಗಿ ಕಳೆದ 4 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಂಗೀತ ಗುರುಗಳಾದ ವಿದ್ವಾನ್ ಶ್ರೀಯುತ ಕೃಷ್ಣಾಚಾರ್ ನರಿಕೊಂಬು ಇವರ ಬಳಿಕ ನಾಟಕ ಶಾಸ್ತ್ರೀಯ ಸಂಗೀತ ಅಭ್ಯಾಸದ ಜೊತೆಗೆ ಸುಗಮ ಸಂಗೀತ ಕಾರ್‍ಯಕ್ರಮಗನ್ನು ನೀಡಿದ ಅನುಭವ. ಕು| ಯಶಸ್ವಿನಿ ಬಳ್ಳಾಲ್ ಇವರ ಬಳಿ ಜೂನಿಯರ್ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಸುಗಮ ಸಂಗೀತದ ಅಭ್ಯಾಸ ಮಾಡಿ ಕಾರ್ಯಕ್ರಮ ನೀಡಿರುತ್ತಾರೆ.

ಕರಾವಳಿ ಕರ್ನಾಟಕ ನಂ.1 ರಿಯಾಲಿಟಿ ಶೋ ಬಲೆ ತೆಲಿಪಾಲೆಯಲ್ಲಿ ಟ್ಯಾಲೆಂಟ್ ಅವಾರ್ಡ್ ಪಡೆದಂತಹ ಪ್ರವೀಣ್ ತುಕರಾಮ್ ಇವರ ತಂಡದಲ್ಲಿ ಹಿನ್ನಲೆ ಗಾಯನ ಮತ್ತು ಸಾಹಿತ್ಯ, ನಿರೂಪಕಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಹಲವಾರು ನೃತ್ಯ ಮತ್ತು ಸಂಗೀತ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ನಿರ್ಣಾಯಕರಾಗಿ, ನಿರೂಪಕಿಯಾಗಿ ಕಾರ್ಯಕ್ರಮಗಳನ್ನು ನಿರ್ವಹಿಸಿರುತ್ತಾರೆ. ಇವರಿಗೆ ಈ ಬಾರಿಯ ಪ್ರಭಾಕರ ನೀರ್‌ಮಾರ್ಗ ಯುವವಾಹಿನಿ ಯುವಸಾಹಿತ್ಯ ಪ್ರಶಸ್ತಿ ನೀಡಿ ಅಭಿನಂದಿಸಲು ಯುವವಾಹಿನಿ ಹೆಮ್ಮೆ ಪಡುತ್ತದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!