ಯುವವಾಹಿನಿ (ರಿ.) ಕಡಬ ಘಟಕದಿಂದ ಗುರುಪೂಜೆ

ಗುರುಸಂದೇಶ ಯುವವಾಹಿನಿಗೆ ಪ್ರೇರಕ ಶಕ್ತಿ : ಸ್ಮಿತೇಶ್ ಬಾರ್ಯ

ಕಡಬ : ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಂದೇಶಗಳು ಯುವವಾಹಿನಿ ಸಂಸ್ಥೆಗೆ ಸದಾ ಪ್ರೇರಕ ಶಕ್ತಿಯಾಗಿದೆ. ಗುರುಗಳ ಸಂದೇಶ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಯುವವಾಹಿನಿಯ ಘಟಕಗಳ ಕಾರ್ಯ ಶ್ಲಾಘನೀಯ ಎಂದು ಚಲನಚಿತ್ರ ನಿರ್ದೇಶಕ, ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಸ್ಮಿತೇಶ್ ಎಸ್.ಬಾರ್ಯ ತಿಳಿಸಿದರು.

ಅವರು 2024 ನೇ ಜನವರಿ 21 ರಂದು ಕಡಬ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ಯುವವಾಹಿನಿ (ರಿ.) ಕಡಬ ಘಟಕ ಮತ್ತು ಕಡಬ ತಾಲೂಕು ವಲಯದ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಗುರುಪೂಜೆಯ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.

ಯುವವಾಹಿನಿ ಕಡಬ ಘಟಕದ ಅಧ್ಯಕ್ಷರಾದ ಸುಂದರ ಪೂಜಾರಿ ಅಂಗಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಯುವವಾಹಿನಿಯ ಕ್ರಿಯಾಶೀಲ ಘಟಕವಾಗಿರುವ ಕಡಬ ಘಟಕದ ಕೊಡುಗೆ ಅನನ್ಯ ಎಂದು ಸಮಾರಂಭ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ತಿಳಿಸಿದರು.

ಕಟ್ಟೆಮಾರು ಕ್ಷೇತ್ರದ ಧರ್ಮದರ್ಶಿಗಳು ಮನೋಜ್ ಕಟ್ಟೆಮಾರು, ಪುತ್ತೂರು ಬಿಲ್ಲವ ಸಂಘ ಅಧ್ಯಕ್ಷರಾದ ಸತೀಶ್ ಕುಮಾರ್ ಕಡೆಂಜಿ, ಕಡಬ ತಾಲೂಕು ಕಛೇರಿಯ ಉಪ ತಹಸೀಲ್ದಾರರಾದ ಗೋಪಾಲ್ ಕೆ, ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಸೀತಾರಾಮ ಗೌಡ ಪೊಸವಳಿಕೆ, ಪುತ್ತೂರು ಅಕ್ಷಯ ಕಾಲೇಜಿನ ಆಡಳಿತ ನಿರ್ದೇಶಕರಾದ ಜಯಂತ ನಡುಬೈಲು, ಯುವವಾಹಿನಿ ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ಮೋಹನ್ ಮಾಡೂರು,ಕಡಬ ತಾಲೂಕು ಬಿಲ್ಲವ ಸಂಚಲನ ಸಮಿತಿಯ ಪ್ರಧಾನ ಸಂಚಾಲಕರಾದ ಸತೀಶ್ ಕೆ ಐತ್ತೂರು, ಸವಣೂರು ವಲಯ ಸಂಚಾಲಕರಾದ ಸಂತೋಷ್ ಕುಮಾರ್ ಮರಕಡ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

ಧಾರ್ಮಿಕ ಕ್ಷೇತ್ರದ ಸಾಧಕ ಬಾಬು ಪೂಜಾರಿ ಕೆಲಂಬಿರಿ, ಕೃಷಿ ಕ್ಷೇತ್ರದ ಸಾಧಕ ಲಿಂಗಪ್ಪ ಪೂಜಾರಿ ಕೇಪುಳು, ಸಾಮಾಜಿಕ ಕ್ಷೇತ್ರದ ಸಾಧಕಿ ಪವಿತ್ರ ಅಂಚನ್ ರಾಮಕುಂಜ, ಕ್ರೀಡಾ ಕ್ಷೇತ್ರದ ಸಾಧಕಿ ಸೌಮ್ಯ ಪೂಜಾರಿ ಕಾಣಿಯೂರು, ಪವರ್ ಮ್ಯಾನ್ ಗಣೇಶ್ ಜಾಲು ಇವರನ್ನು ಸನ್ಮಾನಿಸಲಾಯಿತು.

ಗುರುಪೂಜೆ, ಭಜನೆ ಹಾಗು ಮೆರವಣಿಗೆ

ವಿಘ್ನೇಶ್ವರ ಭಜನಾ ಮಂಡಳಿ ನೆಟ್ಟಣ ಇವರಿಂದ ಭಜನಾ ಸೇವೆ ನಡೆಯಿತು. ಕಡಬ ಮೇಲಿನ ಪೇಟೆಯಿಂದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದವರಗೆ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರದ ಟ್ಯಾಬ್ಲೊ ಮೆರವಣಿಗೆ ನಡೆಯಿತು. ಈ ಮೆರವಣಿಗೆಯಲ್ಲಿ ಶಿವ ಪಾರ್ವತಿ ಭಜನಾ ಮಂಡಳಿ ಎಡಮಂಗಲ, ಮತ್ತು ಜಯದುರ್ಗ ಭಜನಾ ಮಂಡಳಿ ಕಡಬ ಇವರಿಂದ ಕುಣಿತ ಭಜನೆಯು ಆಕರ್ಷಣೆಯ ಕೇಂದ್ರವಾಯಿತು. ವೈದಿಕ ವಿಧಿವಿದಾನಗಳೊಂದಿಗೆ ಗುರುಪೂಜೆ ನೆರವೇರಿತು.

ಯುವವಾಹಿನಿ ಕಡಬ ಘಟಕದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಶ್ರೇಯ ವಿದ್ಯಾನಗರ ಪ್ರಾಥಿಸಿದರು, ಯುವವಾಹಿನಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ ಪ್ರಸ್ತಾವನೆಗೈದರು, ಯುವವಾಹಿನಿ ಕಡಬ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ಸುಪ್ರೀತಾ ಚರಣ್ ಪಾಲಪ್ಪೆ ಸ್ವಾಗತಿಸಿದರು, ಕಾರ್ಯದರ್ಶಿ ಜಯಪ್ರಕಾಶ್ ದೋಳ ಧನ್ಯವಾದ ಸಮರ್ಪಿಸಿದರು , ಕೃತಿಕ ಬಲ್ಯ, ಕೃಷ್ಣಪ್ಪ ಅಮೈ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!