ಯುವವಾಹಿನಿ (ರಿ.) ಕೂಳೂರು ಘಟಕ ಸ್ನೇಹ ಸಮ್ಮಿಲನ 2024

ಯುವವಾಹಿನಿ (ರಿ.) ಕೂಳೂರು ಘಟಕದ ಮೂರು ಧ್ಯೇಯಗಳಲ್ಲಿ ಒಂದಾದ ಸಂಪರ್ಕ ಇದರ ನೆಲೆಯಲ್ಲಿ ಯುವವಾಹಿನಿ ಸದಸ್ಯರ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ದಿನಾಂಕ 11-02-2024 ಆದಿತ್ಯವಾರದಂದು ಸ್ನೇಹ ಸಮ್ಮಿಲನ 2024 ಕಾರ್ಯಕ್ರಮವನ್ನು Relax leisure park ಬ್ರಹ್ಮಾವರದಲ್ಲಿ ಆಯೋಜಿಸಲಾಗಿತ್ತು.

ಬೆಳಿಗ್ಗೆ 7.45 ಗಂಟೆಗೆ ಸರಿಯಾಗಿ ನಮ್ಮ ಬಸ್ಸಿನ ಸಾರಥಿ ನಮ್ಮನ್ನೆಲ್ಲ ಕೂರಿಸಿಕೊಂಡು ಕೂಳೂರಿನಿಂದ ಹೊರಟು 9.30 ಗೆ ರೆಸಾರ್ಟ್ ತಲುಪಿದೆವು. ಅಲ್ಲಿ ಬೆಳಗ್ಗಿನ ಉಪಹಾರ ಮುಗಿಸಿ ಅಲ್ಲಿಂದ ಬೋಟ್ ಮೂಲಕ island ತಲುಪಿದೆವು. ಬೋಟ್ ನಲ್ಲಿ ಸದಸ್ಯರೆಲ್ಲ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಅಲ್ಲಿ ತಲುಪಿದ ಬಳಿಕ ಅಧ್ಯಕ್ಷರು ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಘಟಕದ ಎರಡನೇ ಉಪಾಧ್ಯಕ್ಷರಾದ ಗೀತಾ ವಸಂತ್, ಮಾಜಿ ಅಧ್ಯಕ್ಷರಾದ ನಯನ ರಮೇಶ್ , ದೀಕ್ಷಿತ್ ಸಿ ಎಸ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಕಾರ್ಯದರ್ಶಿ ನೈನಾ ಕೋಟ್ಯಾನ್ , ಸಂಚಾಲಕರಾದ ಸುಮಾ ಶಿವು ಕೋಡಿಕಲ್, relax leisure park na ಮೇಡಂ ಜ್ಯೋತ್ಸ್ನಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು, ಸದಸ್ಯರು ಹಾಗೂ ಸದಸ್ಯರ ಕುಟುಂಬದವರು ಉಪಸ್ಥಿತರಿದ್ದರು. ನಂತರ ಸದಸ್ಯರ 2 ತಂಡಗಳನ್ನು ರಚಿಸಿ, ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ತಂಡದ ನಾಯಕರಾಗಿ ಒಂದು ತಂಡಕ್ಕೆ ಅಧ್ಯಕ್ಷರಾದ ಇಂದಿರಾ ಸುರೇಶ್ ಹಾಗೂ ಇನ್ನೊಂದು ತಂಡಕ್ಕೆ ಮಾಜಿ ಅಧ್ಯಕ್ಷರಾದ ನಯನ ರಮೇಶ್ ಇವರನ್ನು ಆಯ್ಕೆ ಮಾಡಲಾಯಿತು. ಬೆಳಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ನಡೆದ ಆಟೋಟ ಸ್ಪರ್ಧೆ ಕಾರ್ಯಕ್ರಮವನ್ನು ಘಟಕದ ಕ್ರೀಡಾ ನಿರ್ದೇಶಕರಾದ ಹೇಮಂತ್, ವಾರ್ತಾ ಮತ್ತು ಪ್ರಚಾರ ನಿರ್ದೇಶಕರಾದ ರಕ್ಷಾ ಹಾಗೂ ಸದಸ್ಯರಾದ ಪ್ರದೀಪ್ ವಿಭಿನ್ನವಾದ ಹೊಸ ಹೊಸ ಆಟಗಳನ್ನು ಆಡಿಸಿದರು. ವಿಶೇಷವಾಗಿ relax leisure park na ಮೇಡಂ ಜೋತ್ಸ್ನ ರವರು ನಮ್ಮ ಜೊತೆ ಸೇರಿ ಮನರಂಜನೆ ನೀಡಿದರು.

ಸ್ಪರ್ದೆಯಲ್ಲಿ ಭಾಗವಹಿಸಿದ ಎರಡು ತಂಡಕ್ಕೂ ಪ್ರಥಮ ಹಾಗೂ ದ್ವಿತೀಯ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಮಧ್ಯದಲ್ಲಿ ಅಲ್ಲಿ ಬಂದ ಪ್ರವಾಸಿಗರ ತಂಡದವರು ನಮ್ಮ ಜೊತೆ ಸೇರಿ ಹಾಡು ಹಾಡಿಕೊಂಡು ಎಲ್ಲರ ಜೊತೆ ಹೆಜ್ಜೆ ಹಾಕಿ ಕುಣಿದರು. ಕಾರ್ಯಕ್ರಮದಲ್ಲಿ ಸದಸ್ಯರಿಗಾಗಿ ನಿಧಿ ಶೋಧ ನಡೆಸುವ ಟಾಸ್ಕ್ ನೀಡಲಾಯಿತು. ಇದರಲ್ಲಿ ಘಟಕದ ಸದಸ್ಯರಾದ ಪುಷ್ಪ ಹಾಗೂ ಕ್ರೀಡಾ ನಿರ್ದೇಶಕರಾದ ಹೇಮಂತ್ ಗೆಲುವು ಸಾಧಿಸಿದರು. ಇವರಿಗೆ ಅಧ್ಯಕ್ಷರು ಬಹುಮಾನ ವಿತರಿಸಿದರು. ಮಧ್ಯಾಹ್ನ 3.00 ಗಂಟೆಯ ನಂತರ ಸದಸ್ಯರು ಎಲ್ಲರೂ ನೀರಿನಲ್ಲಿ ಆಟ ಆಡಿ ಮನರಂಜಿಸಿದರು. ಅಂತಿಮದಲ್ಲಿ ವಿಶೇಷವಾಗಿ ರೈನ್ ಡ್ಯಾನ್ಸ್ ಗೆ ಎಲ್ಲರೂ ಹೆಜ್ಜೆ ಹಾಕಿದರು. ಈ ಕಾರ್ಯಕ್ರಮದಲ್ಲಿ 80 ಮಂದಿ ಸದಸ್ಯರು ಮತ್ತು ಕುಟುಂಬದವರು ಪಾಲ್ಗೊಂಡಿದ್ದರು. ಅಂತಿಮದಲ್ಲಿ ಬಂದ ಸದಸ್ಯರು ಮತ್ತು ಕುಟುಂಬದವರು ಕಾರ್ಯಕ್ರಮದ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡರು. ಸದಸ್ಯರಿಗೆ ಬೆಳಿಗ್ಗೆ ಉಪಹಾರ, ಮಧ್ಯಾಹ್ನದ ಊಟ ಹಾಗೂ ಸಂಜೆ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ 5.30 ಗಂಟೆಗೆ ಅಲ್ಲಿಂದ ಹೊರಟು 7.30 ಗಂಟೆಗೆ ಮಂಗಳೂರು ಬಂದು ತಲುಪಿದೆವು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!