ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ಯುವವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಶಕ್ತಿ ತುಂಬುವ ಕೆಲಸ ಶ್ಲಾಘನೀಯ: ಮಹೇಶ್ ಕುಮಾರ್

ಮಂಗಳೂರು: ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಮಾಜಮುಖಿ ಕಾರ್ಯಕ್ಕೆ ಸಮಾಜದ ಸರ್ವರ ಬೆಂಬಲ ಅತ್ಯಂತ ಸಂತಸ ತಂದಿದೆ, ಆರ್ಥಿಕ ಕ್ರೋಡೀಕರಣಕ್ಕಾಗಿ ನಡೆದ ನಾಟಕ ಪ್ರದರ್ಶನದಲ್ಲಿ ಮಂಗಳೂರು ಪುರಭವನ ಜನಸ್ತೋಮದಿಂದ ತುಂಬಿರುವುದು ಮಹಿಳಾ ಘಟಕದ ಶ್ರಮಕ್ಕೆ ಸಂದ ಪ್ರತಿಫಲ ಎಂದು ಅಸಿಸ್ಟೆಂಟ್ ಕಮಿಷನರ್ ಅಫ್ ಪೋಲಿಸ್ ಮಹೇಶ್ ಕುಮಾರ್ ತಿಳಿಸಿದರು.

ಅವರು ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಘಟಕದ ಆರ್ಥಿಕ ಬಲವರ್ಧನೆಗಾಗಿ ದಿನಾಂಕ 30-01-2024 ರಂದು ಮಂಗಳೂರಿನ ಪುರಭವನದಲ್ಲಿ ನಡೆದ ಕಥೆ ಎಡ್ಡೆಂಡು ನಾಟಕ ಪ್ರದರ್ಶನದಲ್ಲಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶುಭಾ ರಾಜೇಂದ್ರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿಶ್ವಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾದ ಊರ್ಮಿಳಾ ರಮೇಶ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಮಹಿಳಾ ವಿಭಾಗದ ಅಧ್ಯಕ್ಷರಾದ ಸುಮಲತಾ ಸುವರ್ಣ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ ಬಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಶಿಧರ ಹೆಗ್ಡೆ ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು, ಮಾಜಿ ಅಧ್ಯಕ್ಷೆರಾದ ರಶ್ಮಿ ಸಿ ಕರ್ಕೇರಾ ಮತ್ತು ರೇಖಾ ಗೋಪಾಲ್ ಸನ್ಮಾನಿತರ ಸಾಧನಾ ಪರಿಚಯ ಸಭೆಯ ಮುಂದಿಟ್ಟರು.

ನಾಟಕ ಪ್ರದರ್ಶನಕ್ಕೆ ಆರ್ಥಿಕ ಬಲ ತುಂಬಿದ ದಾನಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಮಾಜಿ ಅಧ್ಯಕ್ಷೆ ಸರಸ್ವತಿ ದಾನಿಗಳ ವಿವರ ಸಭೆಯ ಮುಂದಿಟ್ಟರು.

ಆರ್ಥಿಕ ಕ್ರೋಡೀಕರಣಕ್ಕಾಗಿ ನಡೆಸಿದ ಕಥೆ ಎಡ್ಡೆಂಡು ನಾಟಕವು, ತುಂಬಿ ತುಳುಕಿದ ಪುರಭವನ ಹಾಗು ಪ್ರೇಕ್ಷಕರ ಮೆಚ್ಚುಗೆಯ ಮಾತುಗಳಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಶುಭ ರಾಜೇಂದ್ರ ಸ್ವಾಗತಿಸಿದರು, ಕಾರ್ಯದರ್ಶಿ ದಿವ್ಯಾ ಧನ್ಯವಾದ ನೀಡಿದರು, ಮಾಜಿ ಅಧ್ಯಕ್ಷೆ ವಿದ್ಯಾ ರಾಕೇಶ್ ನಿರೂಪಿಸಿದರು.

One thought on “ಯುವವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಶಕ್ತಿ ತುಂಬುವ ಕೆಲಸ ಶ್ಲಾಘನೀಯ: ಮಹೇಶ್ ಕುಮಾರ್

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!